ಕರ್ನಾಟಕದ ಪ್ರಮುಖ ರಾಷ್ಟ್ರೀಯ ಹೆದ್ದಾರಿ 2 ಟೋಲ್ ಪ್ಲಾಜಾದಲ್ಲಿ ಸೆ.1ರಿಂದ ದರ ಏರಿಕೆ!
ರಾಜ್ಯದ ಮತ್ತೊಂದು ಪ್ರಮುಖ ರಾಷ್ಟ್ರೀಯ ಹೆದ್ದಾರಿಯ ಟೋಲ್ ಪ್ಲಾಜಾಗಳಲ್ಲಿ ವಾಹನ ಸವಾರರು ಬಳಕೆದಾರ ಶುಲ್ಕವನ್ನು ಹೆಚ್ಚುವರಿ ಪಾವತಿ ಮಾಡಬೇಕಾಗುತ್ತದೆ. ಈ ನಿರ್ಧಾರಕ್ಕೆ ವಾಹನ ಸವಾರರಿಂದ ಆಕ್ಷೇಪ ವ್ಯಕ್ತವಾಗಿದೆ. ಸೆಪ್ಟೆಂಬರ್ 1 ರಿಂದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಟೋಲ್ ಪ್ಲಾಜಾಗಳಲ್ಲಿ ಶುಲ್ಕ ಹೆಚ್ಚಳವಾಗಿದೆ. ಅದರ ಸಂಪೂರ್ಣ ವಿವರ ಇಲ್ಲಿದೆ.
ರಾಜ್ಯದ ಮತ್ತೊಂದು ಪ್ರಮುಖ ರಾಷ್ಟ್ರೀಯ ಹೆದ್ದಾರಿಯ ಟೋಲ್ ಪ್ಲಾಜಾ ಬೆಂಗಳೂರು ಮತ್ತು ಮಂಗಳೂರು ರಸ್ತೆ ಭಾಗದಲ್ಲಿರುವ ಎರಡು ಟೋಲ್ ಪ್ಲಾಜಾಗಳಲ್ಲಿ ವಾಹನ ಸವಾರರು ಹೆಚ್ಚಿನ ಬಳಕೆದಾರ ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ. ಇನ್ನು ಹೊಸ ಪರಿಷ್ಕೃತ ದರಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಕರೇನಹಳ್ಳಿ ಹಾಗೂ ತುಮಕೂರು ಜಿಲ್ಲೆಯ ಕರೆಬೈಲು ಟೋಲ್ ಪ್ಲಾಜಾಗಳಿಗೆ ಅನ್ವಯವಾಗಲಿದೆ ಎಂದು ಹೇಳಲಾಗಿದೆ. ಇನ್ನು ಪ್ರತಿ ಟೋಲ್ ಪ್ಲಾಜಾದಲ್ಲಿ 40.13 ಕಿ.ಮೀ ದೂರಕ್ಕೆ ಅನ್ವಯವಾಗುವಂತೆ ಶುಲ್ಕಗಳು ಇರಲಿವೆ ಎಂದು ಹೇಳಲಾಗಿದೆ.

ಈ ಮಾರ್ಗದ ಟೋಲ್ ಪ್ಲಾಜಾಗಳಲ್ಲಿ ಕಾರ್, ಪ್ಯಾಸೆಂಜರ್ ವ್ಯಾನ್ ಮತ್ತು ಜೀಪ್ಗಳು ಸಿಂಗಲ್ ಟ್ರಿಪ್ಗೆ 60 ರೂಪಾಯಿ ಇರಲಿದೆ. ಅಲ್ಲದೇ ದಿನದಲ್ಲಿ ಹಲವು ಟ್ರಿಪ್ಗೆ 85 ರೂಪಾಯಿ ಮತ್ತು ತಿಂಗಳ ಪಾಸಿಗೆ 1745 ರೂಪಾಯಿ ನಿಗದಿ ಮಾಡಲಾಗಿದೆ. ಕಮರ್ಷಿಯಲ್ ವೆಹಿಕಲ್ (ಎಲ್ಸಿವಿ) ಸಿಂಗಲ್ ಟ್ರಿಪ್ಗೆ 100 ರೂಪಾಯಿ, ದಿನದಲ್ಲಿ ಹಲವು ಬಾರಿ ಟ್ರಿಪ್ಗೆ 155 ರೂಪಾಯಿ ಮತ್ತು ತಿಂಗಳ ಪಾಸ್ಗೆ 3055 ರೂಪಾಯಿ ಇರಲಿದೆ. ಬಸ್ ಮತ್ತು ಟ್ರಕ್ಗಳಿಗೆ ಸಿಂಗಲ್ ಟ್ರಿಪ್ಗೆ 205 ರೂಪಾಯಿ, ದಿನದಲ್ಲಿ ಹಲವು ಟ್ರಿಪ್ ಇದ್ದರೆ 305 ರೂಪಾಯಿ ಮತ್ತು ತಿಂಗಳ ಪಾಸ್ಗೆ 6015 ರೂಪಾಯಿ ಕೊಡಬೇಕಾಗುತ್ತದೆ.
ಬಿ.ವೈ ವಿಜಯೇಂದ್ರ ಆಕ್ಷೇಪ
ಇನ್ನು ಶಿಕಾರಿಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ರಾಜ್ಯ ಹೆದ್ದಾರಿ ಸಂಖ್ಯೆ 57 ರಲ್ಲಿ ಒಂದು ಟೋಲ್ ಇದ್ದು, ಮತ್ತೊಂದು ಟೋಲ್ ಕುಟ್ರಳ್ಳಿಯ ಬಳಿ ನಿರ್ಮಾಣವಾಗಿದ್ದು, ಇದರಿಂದ ನಮ್ಮ ಸ್ಥಳೀಯರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಒಂದು ಟೋಲ್ನಿಂದ ಮತ್ತೊಂದು ಟೋಲ್ಗೆ 65 ಕಿಲೋಮೀಟರ್ ದೂರವಿರಬೇಕೆಂಬ ನಿಯಮವಿದ್ದರೂ, ಕೇವಲ 35 ಕಿಲೋಮೀಟರ್ಗೆ ಕುಟ್ರಳ್ಳಿ ಸಮೀಪ ಟೋಲ್ ನಿರ್ಮಾಣ ಮಾಡಿದ್ದು ಇಲ್ಲಿ ಪ್ರತಿನಿತ್ಯ ₹ 75 ರೂಪಾಯಿ ಕೊಟ್ಟು ಸ್ಥಳೀಯ ಗ್ರಾಮಸ್ಥರು ಓಡಾಡುವ ಪರಿಸ್ಥಿತಿ ಬಂದಿದೆ. ಆದ್ದರಿಂದ ತುರ್ತಾಗಿ ರಾಜ್ಯ ಸರ್ಕಾರ ಈ ಟೋಲ್ ತೆರವುಗೊಳಿಸಲಿ ಅಥವಾ ಸ್ಥಳೀಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications