ಕರ್ನಾಟಕದ ಪ್ರಮುಖ ರಾಷ್ಟ್ರೀಯ ಹೆದ್ದಾರಿ 2 ಟೋಲ್ ಪ್ಲಾಜಾದಲ್ಲಿ ಸೆ.1ರಿಂದ ದರ ಏರಿಕೆ!
ರಾಜ್ಯದ ಮತ್ತೊಂದು ಪ್ರಮುಖ ರಾಷ್ಟ್ರೀಯ ಹೆದ್ದಾರಿಯ ಟೋಲ್ ಪ್ಲಾಜಾಗಳಲ್ಲಿ ವಾಹನ ಸವಾರರು ಬಳಕೆದಾರ ಶುಲ್ಕವನ್ನು ಹೆಚ್ಚುವರಿ ಪಾವತಿ ಮಾಡಬೇಕಾಗುತ್ತದೆ. ಈ ನಿರ್ಧಾರಕ್ಕೆ ವಾಹನ ಸವಾರರಿಂದ ಆಕ್ಷೇಪ ವ್ಯಕ್ತವಾಗಿದೆ. ಸೆಪ್ಟೆಂಬರ್ 1 ರಿಂದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಟೋಲ್ ಪ್ಲಾಜಾಗಳಲ್ಲಿ ಶುಲ್ಕ ಹೆಚ್ಚಳವಾಗಿದೆ. ಅದರ ಸಂಪೂರ್ಣ ವಿವರ ಇಲ್ಲಿದೆ.
ರಾಜ್ಯದ ಮತ್ತೊಂದು ಪ್ರಮುಖ ರಾಷ್ಟ್ರೀಯ ಹೆದ್ದಾರಿಯ ಟೋಲ್ ಪ್ಲಾಜಾ ಬೆಂಗಳೂರು ಮತ್ತು ಮಂಗಳೂರು ರಸ್ತೆ ಭಾಗದಲ್ಲಿರುವ ಎರಡು ಟೋಲ್ ಪ್ಲಾಜಾಗಳಲ್ಲಿ ವಾಹನ ಸವಾರರು ಹೆಚ್ಚಿನ ಬಳಕೆದಾರ ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ. ಇನ್ನು ಹೊಸ ಪರಿಷ್ಕೃತ ದರಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಕರೇನಹಳ್ಳಿ ಹಾಗೂ ತುಮಕೂರು ಜಿಲ್ಲೆಯ ಕರೆಬೈಲು ಟೋಲ್ ಪ್ಲಾಜಾಗಳಿಗೆ ಅನ್ವಯವಾಗಲಿದೆ ಎಂದು ಹೇಳಲಾಗಿದೆ. ಇನ್ನು ಪ್ರತಿ ಟೋಲ್ ಪ್ಲಾಜಾದಲ್ಲಿ 40.13 ಕಿ.ಮೀ ದೂರಕ್ಕೆ ಅನ್ವಯವಾಗುವಂತೆ ಶುಲ್ಕಗಳು ಇರಲಿವೆ ಎಂದು ಹೇಳಲಾಗಿದೆ.

ಈ ಮಾರ್ಗದ ಟೋಲ್ ಪ್ಲಾಜಾಗಳಲ್ಲಿ ಕಾರ್, ಪ್ಯಾಸೆಂಜರ್ ವ್ಯಾನ್ ಮತ್ತು ಜೀಪ್ಗಳು ಸಿಂಗಲ್ ಟ್ರಿಪ್ಗೆ 60 ರೂಪಾಯಿ ಇರಲಿದೆ. ಅಲ್ಲದೇ ದಿನದಲ್ಲಿ ಹಲವು ಟ್ರಿಪ್ಗೆ 85 ರೂಪಾಯಿ ಮತ್ತು ತಿಂಗಳ ಪಾಸಿಗೆ 1745 ರೂಪಾಯಿ ನಿಗದಿ ಮಾಡಲಾಗಿದೆ. ಕಮರ್ಷಿಯಲ್ ವೆಹಿಕಲ್ (ಎಲ್ಸಿವಿ) ಸಿಂಗಲ್ ಟ್ರಿಪ್ಗೆ 100 ರೂಪಾಯಿ, ದಿನದಲ್ಲಿ ಹಲವು ಬಾರಿ ಟ್ರಿಪ್ಗೆ 155 ರೂಪಾಯಿ ಮತ್ತು ತಿಂಗಳ ಪಾಸ್ಗೆ 3055 ರೂಪಾಯಿ ಇರಲಿದೆ. ಬಸ್ ಮತ್ತು ಟ್ರಕ್ಗಳಿಗೆ ಸಿಂಗಲ್ ಟ್ರಿಪ್ಗೆ 205 ರೂಪಾಯಿ, ದಿನದಲ್ಲಿ ಹಲವು ಟ್ರಿಪ್ ಇದ್ದರೆ 305 ರೂಪಾಯಿ ಮತ್ತು ತಿಂಗಳ ಪಾಸ್ಗೆ 6015 ರೂಪಾಯಿ ಕೊಡಬೇಕಾಗುತ್ತದೆ.
ಬಿ.ವೈ ವಿಜಯೇಂದ್ರ ಆಕ್ಷೇಪ
ಇನ್ನು ಶಿಕಾರಿಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ರಾಜ್ಯ ಹೆದ್ದಾರಿ ಸಂಖ್ಯೆ 57 ರಲ್ಲಿ ಒಂದು ಟೋಲ್ ಇದ್ದು, ಮತ್ತೊಂದು ಟೋಲ್ ಕುಟ್ರಳ್ಳಿಯ ಬಳಿ ನಿರ್ಮಾಣವಾಗಿದ್ದು, ಇದರಿಂದ ನಮ್ಮ ಸ್ಥಳೀಯರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಒಂದು ಟೋಲ್ನಿಂದ ಮತ್ತೊಂದು ಟೋಲ್ಗೆ 65 ಕಿಲೋಮೀಟರ್ ದೂರವಿರಬೇಕೆಂಬ ನಿಯಮವಿದ್ದರೂ, ಕೇವಲ 35 ಕಿಲೋಮೀಟರ್ಗೆ ಕುಟ್ರಳ್ಳಿ ಸಮೀಪ ಟೋಲ್ ನಿರ್ಮಾಣ ಮಾಡಿದ್ದು ಇಲ್ಲಿ ಪ್ರತಿನಿತ್ಯ ₹ 75 ರೂಪಾಯಿ ಕೊಟ್ಟು ಸ್ಥಳೀಯ ಗ್ರಾಮಸ್ಥರು ಓಡಾಡುವ ಪರಿಸ್ಥಿತಿ ಬಂದಿದೆ. ಆದ್ದರಿಂದ ತುರ್ತಾಗಿ ರಾಜ್ಯ ಸರ್ಕಾರ ಈ ಟೋಲ್ ತೆರವುಗೊಳಿಸಲಿ ಅಥವಾ ಸ್ಥಳೀಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದ್ದಾರೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications