ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಘೋಷಣೆಗೆ ರಾಜ್ಯ ಸರ್ಕಾರದ ವಿರೋಧ
ಬೆಂಗಳೂರು, ಡಿಸೆಂಬರ್ 4 : ಪಶ್ಚಿಮ ಘಟ್ಟವನ್ನು ಸೂಕ್ಷ್ಮ ಪರಿಸರ ವಲಯ ಎಂದು ಘೋಷಿಸುವುದರಿಂದ ಈ ಭಾಗದಲ್ಲಿ ವಾಸಿಸುವ ಜನರ ಜೀವನೋಪಾಯಕ್ಕೆ ಧಕ್ಕೆಯಾಗಲಿದೆ. ಈ ಹಿನ್ನೆಲೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೆ ರಾಜ್ಯ ಸರ್ಕಾರ ಹಾಗೂ ಈ ಭಾಗದ ಜನತೆಯ ಒಕ್ಕೊರಲಿನ ವಿರೋಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟಪಡಿಸಿದರು.
ಅವರು ಇಂದು ಪಶ್ಚಿಮ ಘಟ್ಟದ ಕಸ್ತೂರಿ ರಂಗನ್ ವರದಿ ಜಾರಿ ಕುರಿತಂತೆ ಕೇಂದ್ರ ಪರಿಸರ, ಅರಣ್ಯ ಮತ್ತು ಕಾರ್ಮಿಕ ಸಚಿವ ಭೂಪೇಂದರ್ ಯಾದವ್ ಅವರು ನಡೆಸಿದ ವರ್ಚುವಲ್ ಸಭೆಯಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಬೊಮ್ಮಾಯಿ ಅವರು ರಾಜ್ಯದ ಈ ನಿಲುವನ್ನು ಸ್ಪಷ್ಟಪಡಿಸಿದರು.
ಮನೆ ಕಳೆದುಕೊಂಡವರಿಗೆ ಕೂಡಲೇ ಪರಿಹಾರ: ಸಿಎಂ ಬೊಮ್ಮಾಯಿ ಭರವಸೆ
ಪಶ್ಚಿಮ ಘಟ್ಟ ಪ್ರದೇಶದ ನಿವಾಸಿಗಳು, ಅಧಿಕಾರಿಗಳು ಮತ್ತು ಸಂಬಂಧಪಟ್ಟ ಎಲ್ಲರೊಂದಿಗೆ ಕೂಲಂಕಷವಾಗಿ ಸಮಾಲೋಚನೆ ನಡೆಸಿ ಕಸ್ತೂರಿ ರಂಗನ್ ವರದಿ ಜಾರಿಯನ್ನು ವಿರೋಧಿಸಿ ರಾಜ್ಯ ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ ಎಂಬುದನ್ನು ಸಭೆಯ ಗಮನಕ್ಕೆ ತಂದರು.

ಕರ್ನಾಟಕ ರಾಜ್ಯ ಅತಿ ಹೆಚ್ಚು ಅರಣ್ಯ ಪ್ರದೇಶಗಳನ್ನು ಹೊಂದಿರುವ ರಾಜ್ಯಗಳಲ್ಲಿ ಒಂದು ಎಂಬ ಹೆಗ್ಗಳಿಕೆಯನ್ನು ಹೊಂದಿದೆ. ನಮ್ಮ ಸರ್ಕಾರ ಹಾಗೂ ಜನತೆ ಪಶ್ಚಿಮ ಘಟ್ಟದ ಜೀವ ವೈವಿಧ್ಯದ ಸಂರಕ್ಷಣೆಗೆ ಹೆಚ್ಚಿನ ಕಾಳಜಿ ತೋರಿದ್ದೇವೆ. ಯಾವುದೇ ಕಾಯ್ದೆ ಕಾನೂನು ಜಾರಿಯಾಗುವ ಮುನ್ನವೂ ಈ ಭಾಗದ ಜನರು ಇಲ್ಲಿನ ಪ್ರಕೃತಿಗೆ ಸಹಜವಾದ ಕೃಷಿ, ತೋಟಗಾರಿಕೆ ಚಟುವಟಿಕೆಗಳನ್ನು ಕೈಗೊಳ್ಳುತ್ತಿದ್ದು, ಪರಿಸರ ಸ್ನೇಹಿ ಜೀವನ ಶೈಲಿಯನ್ನು ರೂಢಿಸಿಕೊಂಡಿದ್ದಾರೆ; ಪಶ್ಚಿಮ ಘಟ್ಟದ ಸಂರಕ್ಷಣೆಗೆ ಆದ್ಯತೆ ನೀಡುತ್ತಲೇ ಬಂದಿದ್ದಾರೆ. ಈಗಾಗಲೇ ಜೀವ ವೈವಿಧ್ಯ ಸಂರಕ್ಷಣೆ ಕಾಯ್ದೆ, ಅರಣ್ಯ ಸಂರಕ್ಷಣೆ ಕಾಯ್ದೆ ಮೊದಲಾದ ಹಲವಾರು ಕಾನೂನುಗಳಡಿ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಮತ್ತೊಂದು ಕಾನೂನು ಜಾರಿಗೆ ತರುವ ಮೂಲಕ ಈ ಭಾಗದ ಜನರ ಜೀವನೋಪಾಯಕ್ಕೆ ಧಕ್ಕೆ ತರುವುದು ಸರಿಯಲ್ಲ ಎಂದು ಮುಖ್ಯಮಂತ್ರಿಯವರು ಅಭಿಪ್ರಾಯ ವ್ಯಕ್ತಪಡಿಸಿದರು.

ಉಪಗ್ರಹ ಸಮೀಕ್ಷೆಯ ಆಧಾರದಲ್ಲಿ ಕಸ್ತೂರಿ ರಂಗನ್ ವರದಿ ರೂಪಿಸಲಾಗಿದೆ. ಆದರೆ ವಸ್ತುಸ್ಥಿತಿ ಇದಕ್ಕಿಂತ ಭಿನ್ನವಾಗಿದೆ. ಪ್ರತಿ ಎಕರೆಯನ್ನು ಪ್ರತ್ಯಕ್ಷವಾಗಿ ಸಮೀಕ್ಷೆ ನಡೆಸುವುದರಿಂದ ಜನರ ಪರಿಸರ ಸ್ನೇಹಿ ಜೀವನಶೈಲಿಯನ್ನು ಗಮನಿಸಬಹುದಾಗಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.
ಈ ಹಿನ್ನೆಲೆಯಲ್ಲಿ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯದ ಅಧಿಕಾರಿಗಳು ರಾಜ್ಯಕ್ಕೆ ಭೇಟಿ ನೀಡಿ ಚರ್ಚೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಕೇಂದ್ರ ಸಚಿವರು ತಿಳಿಸಿದರು.
ಸಭೆಯಲ್ಲಿ ಸಚಿವರಾದ ಅರಗ ಜ್ಙಾನೇಂದ್ರ, ಆನಂದ್ ಸಿಂಗ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ ಸೇರಿದಂತೆ ಇತರರು ವರ್ಚುವಲ್ ಸಭೆಯಲ್ಲಿ ಉಪಸ್ಥಿತರಿದ್ದರು.
Recommended Video
-
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications