Get Updates
Get notified of breaking news, exclusive insights, and must-see stories!

ಇದು ಮಧ್ಯಂತರ ತೀರ್ಪು ಮಾತ್ರ ಎಂದ ಮುಖ್ಯಮಂತ್ರಿ

ಬೆಂಗಳೂರು, ಹುಬ್ಬಳ್ಳಿ, ಜುಲೈ, 27: ಮಹದಾಯಿ ನೀರು ಹಂಚಿಕೆ ಕುರಿತಂತೆ ನ್ಯಾಯಮಂಡಳಿ ನೀಡಿರುವ ತೀರ್ಪಿನಿಂದ ನಿರಾಸೆಯಾಗಿದೆ. ಈ ಬಗ್ಗೆ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಿ ಶೀಘ್ರದಲ್ಲಿ ಮುಂದಿನ ಕ್ರಮಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ರಾಜ್ಯದ ಜನತೆ ಈ ತಾತ್ಕಾಲಿಕ ಹಿನ್ನಡೆಯ ಕಾರಣಕ್ಕಾಗಿ ಆವೇಶಕ್ಕೀಡಾಗದೇ ಈ ಸಂದರ್ಭದಲ್ಲಿ ಶಾಂತಿ ಕಾಪಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.[ಕರ್ನಾಟಕದ ಅರ್ಜಿ ತಿರಸ್ಕರಿಸಿದ ಮಹಾದಾಯಿ ನ್ಯಾಯ ಮಂಡಳಿ]

Karnataka people should not loose hope: Siddaramaiah

ಮಹದಾಯಿ ನದಿ ವಿವಾದ ಕುರಿತು ನ್ಯಾಯಾಧೀಕರಣದ ನೀಡಿರುವ ತೀರ್ಪು ನಮಗೆ ಆಘಾತ ತಂದಿದೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಎಚ್ ಕೆ ಪಾಟೀಲ್ ಹೇಳಿದ್ದಾರೆ.[ಉತ್ತರ ಕರ್ನಾಟಕದಲ್ಲಿ ಭುಗಿಲೆದ್ದ ರೈತರ ಆಕ್ರೋಶ]

ಸಿಎಂ ಕಾನೂನು ಪಂಡಿತರ ಜೊತೆ ಚರ್ಚೆ ಮಾಡಿ, ನಂತರ ನ್ಯಾಯಾಧಿಕರಣದ ಮೊರೆ ಹೋದರೂ ರಾಜ್ಯಕ್ಕೆ ಸೋಲಾಗಿದೆ. ಆದರೆ ಜನ ಆತಂಕ್ಕೆ ಒಳಗಾಗಬೇಕಿಲ್ಲ. ರಾಜ್ಯದ ನೀರಿನ ಪಾಲನ್ನು ನಮಗೆ ನೀಡಲೇಬೇಕಾಗುತ್ತದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಕೈ ಕಟ್ಟಿ ಕುಳಿತುಕೊಳ್ಳುವುದಿಲ್ಲ, ನಾವು ರಾಜಕೀಯ ಮತ್ತು ಕಾನೂನು ಹೋರಾಟ ಮಾಡುತ್ತೇವೆ. ಈ ವಿಷಯದಲ್ಲಿ ಕೇಂದ್ರ ಸರ್ಕಾರ ಮುತುವರ್ಜಿ ವಹಿಸಬೇಕು ಎಂದು ಒತ್ತಾಯ ಮಾಡಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+