ಬಿಸಿಲಿನ ಹೊಡೆತಕ್ಕೆ ಕರುನಾಡ ಮಂದಿ ತತ್ತರ; ಶುರುವಾಯ್ತು ಚರ್ಮ ರೋಗದ ಕಾಟ- ಎಚ್ಚರವಾಗಿರಿ
ಬೆಂಗಳೂರು, ಮೇ 02: ಕರ್ನಾಟಕದಲ್ಲಿ ದಾಖಲೆಯ ತಾಪಮಾನ ಹೆಚ್ಚಳದೊಂದಿಗೆ ಕರುನಾಡ ಮಂದಿ ಹೈರಾಣಾಗಿದ್ದಾರೆ. ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲಿನ ಬೇಗೆ ಹೆಚ್ಚಾಗುತ್ತಿದ್ದು, ರಾಜ್ಯಾದ್ಯಂತ ಬಿಸಿಲ ಬೇಗೆಗೆ ಜನ ಹೈರಾಣಾಗಿದ್ದಾರೆ.
ಹೌದು, ಕಳೆದ ವರ್ಷ ವಾಡಿಕೆಯಂತೆ ಮಳೆಯಾಗದೆ ರಾಜ್ಯದಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಯುಗಾದಿಯ ಬಳಿಕ ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗಿತ್ತು. ಆದರೆ, ಕಳೆದೆರಡು ತಿಂಗಳಿನಿಂದ ರಣ ಬಿಸಿಲಿನಿಂದ ಕರುನಾಡ ಮಂದಿ ರೋಸಿ ಹೋಗಿದ್ದು, ಬಿಸಿಲಿನ ಬೇಗೆಗೆ ಕುಸಿದು ರಾಜ್ಯದಲ್ಲಿ ಇಬ್ಬರು ಮಂದಿ ಸಾವನ್ನಾಪಿರುವ ಕುರಿತು ವರದಿಯಾಗಿದೆ. ಅಲ್ಲದೇ ಬಿಸಿಲಿನಿಂದ ತಪ್ಪಿಸಿಕೊಳ್ಳಲು ಜನರು ಹೆಚ್ಚಾಗಿ ಕೂಲರ್ ಹಾಗೂ ಎಸಿಗಳಿಗೆ ಮೊರೆ ಹೋಗಿದ್ದು, ಇತ್ತ ಸೋರಿಯಾಸಿಸ್, ಮೊಡವೆಗಳು ಸೇರಿ 10ಕ್ಕೂ ಹೆಚ್ಚು ಚರ್ಮದ ರೋಗಗಳು ಜನರನ್ನ ಕಾಡುತ್ತಿವೆ.

ಸೂರ್ಯನ ಉರಿಗಣ್ಣಿನಿಂದ ರಾಜ್ಯದ ಬಹುತೇಕ ಜಿಲ್ಲೆಗಳು ಕಾದ ಹಂಚಿನಂತಾಗಿದೆ. ಬಿಸಿಲಿನ ಝಳಕ್ಕೆ ಜನತೆ ರೋಸಿ ಹೋಗಿದ್ದಾರೆ. ಬಿಸಿನಿಂದಾಗಿ ರೋಗ ನಿರೋಧಕ ಶಕ್ತಿ ಕಡಿಮೆ ಆಗುತ್ತಿರುವುದರಿಂದ ಸೋರಿಯಾಸಿಸ್ ಸೇರಿ ಅನೇಕ ಸಮಸ್ಯೆಗಳು ಹೆಚ್ಚಾಗಿವೆ. ದಗೆ ತಡೆಯಲಾರದೇ ಜನರು ತಂಪು ಪಾನೀಯಗಳತ್ತ ಮುಖ ಮಾಡಿದ್ದು, ಜ್ಯೂಸ್ ಹಾಗೂ ಎಳೆನೀರಿಗೆ ಮೊರೆ ಹೋಗಿದ್ದಾರೆ.
ಇನ್ನೂ ಬಿಸಿಲಿನ ಹೊಡೆತದಿಂದ ರಕ್ತದಾನಿಗಳ ಸಂಖ್ಯೆಯೂ ಕುಂಠಿತವಾಗಿದೆ. ಬಿಸಿಲಿನ ಶಾಖ ಹೆಚ್ಚಾಗಿರುವ ಸಂದರ್ಭದಲ್ಲಿ ರಕ್ತದಾನ ಮಾಡಿದರೆ ಸುಸ್ತು, ಆಯಾಸವಾಗುತ್ತದೆ ಎಂಬ ಸುಳ್ಳು ಸುದ್ದಿಯಿಂದ ಹೆದರಿ ಜನರ ರಕ್ತದಾನಕ್ಕೆ ಹಿಂದೇಟು ಹಾಕುತ್ತಿದ್ದಾರೆ. ರೆಡ್ ಕ್ರಾಸ್ ಹಾಗೂ ರಾಷ್ಟ್ರೋತ್ಥಾನ ಬ್ಲಡ್ ಬ್ಯಾಂಕ್ಗಳಲ್ಲಿ ಪ್ರತಿ ತಿಂಗಳು 2,500 ರಿಂದ 3,000 ಸಾವಿರ ಯೂನಿಟ್ ರಕ್ತ ಸಂಗ್ರಹವಾಗುತ್ತಿತ್ತು. ಆದರೀಗ 1,500 ಯೂನಿಟ್ ಮಾತ್ರ ರಕ್ತ ಸಂಗ್ರಹವಾಗುತ್ತಿದೆ. ಇನ್ನೂ ರಸ್ತ ಸಿಗದೇ ಬೆಂಗಳೂರಿನಲ್ಲಿ ಮಕ್ಕಳು ಹಾಗೂ ರೋಗಿಗಳು ಪರದಾಡುವಂತಾಗಿದೆ.
-
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್












Click it and Unblock the Notifications