ಬೆಂಗಳೂರು ವಿಮಾನ ನಿಲ್ದಾಣ ಬಳಿ ಕೆಂಪೇಗೌಡರ ಬೃಹತ್ ಪ್ರತಿಮೆ ಸ್ಥಾಪನೆ
ಬೆಂಗಳೂರು, ಜೂನ್ 27 : ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಇಂದು (ಜೂನ್ 27) ರಾಜ್ಯ ಸರ್ಕಾರದಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಯಿತು.
ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, "ವಿಶ್ವ ಮಾನ್ಯತೆ ಪಡೆದ ಬೆಂಗಳೂರು ನಗರಕ್ಕೆ ಭದ್ರ ಬುನಾದಿ ಹಾಕಿದ್ದು ಕೆಂಪೇಗೌಡ, ಬೆಂಗಳೂರು ವಿಸ್ತಾರವಾಗಿ ಬೆಳೆಯಲು ಅವರ ಕೊಡುಗೆ ಮಹತ್ತರವಾದುದು. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಡಪ್ರಭು ಕೆಂಪೇಗೌಡರ ಹೆಸರಿಡುವಂತೆ ನಮ್ಮ ಸರ್ಕಾರ ಈಗಾಗಲೇ ಶಿಫಾರಸ್ಸು ಮಾಡಿದ್ದು, ಅಲ್ಲಿ ಬೃಹತ್ ಕೆಂಪೇಗೌಡರ ಬೃಹತ್ ಪ್ರತಿಮೆಯನ್ನು ಸ್ಥಾಪಿಸಲಾಗುವುದು ಎಂದರು.
ಕೆಂಪೇಗೌಡರ ಸ್ಮರಣೆಗೆ 5 ಕಾರಣಗಳು (ಕೆಂಪೇಗೌಡ ಜಯಂತಿ ವಿಶೇಷ)
ಉತ್ತಮ ಹವಾಮಾನಕ್ಕೆ ಮಾದರಿಯಾಗಿರುವ ಬೆಂಗಳೂರು ಜಗತ್ತಿನಲ್ಲಿಯೇ 'ಕ್ರಿಯಾಶಿಲ ನಗರ' ಎಂದು ಖ್ಯಾತಿಗಳಿಸಿದೆ. ಮಾಗಡಿಯಲ್ಲಿ ಕೆಂಪೇಗೌಡರ ಸಮಾದಿ ಸ್ಮಾರಕವನ್ನು ಅಭಿವೃದ್ದಿ ಪಡಿಸಲಾಗುವುದು.
2020ರ ಹೊತ್ತಿಗೆ ಮೆಟ್ರೋ ಕಾಮಗಾರಿಗಳು ಪೂರ್ಣಗೊಳ್ಳಲಿವೆ, ಏರ್ ಪೋರ್ಟ್ ಸಂಪರ್ಕವು ಸಿಗುವುದು ಆಗ ಮೆಟ್ರೋ ಬಳಕೆದಾರರ ಸಂಖ್ಯೆ 20ಲಕ್ಷಕ್ಕೆ ಹೆಚ್ಚಲಿದೆ ಎಂದರು.