Govt Employees: ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಪೊಲೀಸ್ ಕ್ಯಾಂಟೀನ್ ಮಾದರಿಯಲ್ಲಿ ಸೂಪರ್ ಮಾರ್ಕೆಟ್
ಬೆಂಗಳೂರು, ಅಕ್ಟೋಬರ್ 15: ಪೊಲೀಸ್ ಮತ್ತು ಸೇನಾ ಕ್ಯಾಂಟೀನ್ ಮಾದರಿಯಲ್ಲೇ ಕರ್ನಾಟಕ ರಾಜ್ಯ ಸರಕಾರಿ ನೌಕರರಿಗೆ ದಿನನಿತ್ಯದ ಬದುಕಿಗೆ ಅಗತ್ಯವಿರುವ ಪ್ರತಿಯೊಂದು ವಸ್ತುವೂ ರಿಯಾಯಿತಿ ದರದಲ್ಲಿ ಸಿಗಬೇಕು. ಈ ಉದ್ದೇಶದೊಂದಿಗೆ ಸರ್ಕಾರಿ ಸ್ವಾಮ್ಯದ ಎಂಎಸ್ಐಎಲ್ ವತಿಯಿಂದ ಸೂಪರ್ ಮಾರ್ಕೆಟ್ ಆರಂಭಿಸುವ ಚಿಂತನೆ ಇದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತಿಳಿಸಿದರು.
ಈ ಸಂಬಂಧ ಅವರು ಖನಿಜ ಭವನದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಎಂಎಸ್ಐಎಲ್ ವ್ಯವಸ್ಥಾಪಕ ನಿರ್ದೇಶಕ ಮನೋಜ ಕುಮಾರ ಸೇರಿದಂತೆ ಇತರ ಹಿರಿಯ ಅಧಿಕಾರಿಗಳೊಂದಿಗೆ ಬುಧವಾರ ಪ್ರಾಥಮಿಕ ಸುತ್ತಿನ ಸಭೆ ನಡೆಸಿದರು.

ಸಭೆ ಬಳಿಕ ಮಾತನಾಡಿದ ಅವರು, ರಾಜ್ಯದ ಪೊಲೀಸ್, ಅರೆ ಸೇನಾ ಪಡೆಗಳ ನೌಕರರಿಗೆ ಈ ರೀತಿಯ ಕ್ಯಾಂಟೀನ್ ಸೌಲಭ್ಯವಿದೆ. ರಾಜ್ಯದಲ್ಲಿ 6 ಲಕ್ಷ ಸರಕಾರಿ ನೌಕರರಿದ್ದಾರೆ. ಅವರ ಕುಟುಂಬಗಳ ಹಿತದೃಷ್ಟಿಯಿಂದ ಇಂಥದ್ದೊಂದು ಉಪಕ್ರಮ ಆರಂಭಿಸುವುದು ನಮ್ಮ ಚಿಂತನೆಯಾಗಿದೆ. ಇದಕ್ಕೆ ಸಬ್ಸಿಡಿ ಅಥವಾ ತೆರಿಗೆ ವಿನಾಯಿತಿ ಪಡೆದುಕೊಳ್ಳುವುದು ಹೇಗೆಂದು ಆರ್ಥಿಕ ಇಲಾಖೆಯ ಜತೆ ಚರ್ಚಿಸಲಾಗುವುದು. ಒಟ್ಟಿನಲ್ಲಿ ಇಂತಹ ಸೂಪರ್ ಮಾರ್ಕೆಟ್ ಮಳಿಗೆ ಆರಂಭಿಸುವ ಸಾಧ್ಯಾ ಸಾಧ್ಯತೆ ಕುರಿತು ತಮಗೆ ಒಂದು ತಿಂಗಳಲ್ಲಿ ವಿಸ್ತೃತ ವರದಿ ಸಲ್ಲಿಸುವಂತೆ ಎಂಎಸ್ಐಎಲ್ಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಉದ್ದೇಶಿತ ಎಂಎಸ್ಐಎಲ್ ಸೂಪರ್ ಮಾರ್ಕೆಟ್ನಲ್ಲಿ ನಮ್ಮ ಸರ್ಕಾರಿ ನೌಕರರ ದಿನನಿತ್ಯದ ಬದುಕಿಗೆ ಬೇಕಾದ ದವಸ-ಧಾನ್ಯದಿಂದ ಹಿಡಿದು ಎಫ್ಎಂಸಿಜಿ ವಲಯದಲ್ಲಿ ಬರುವ ಪ್ರತಿಯೊಂದು ಪದಾರ್ಥವೂ ರಿಯಾಯಿತಿ ದರದಲ್ಲಿ ಸಿಗುವಂತಾಗಬೇಕು. ಮೊದಲ ಹಂತದಲ್ಲಿ ಬೆಂಗಳೂರಿನಲ್ಲಿ 4-5 ಮಳಿಗೆಗಳನ್ನು ತೆರೆಯುವ ಆಲೋಚನೆ ಇದೆ. ನಂತರದ ದಿನಗಳಲ್ಲಿ ಜಿಲ್ಲಾ ಕೇಂದ್ರಗಳಲ್ಲೂ ಇಂತಹ ಸೌಲಭ್ಯ ವಿಸ್ತರಣೆಗೆ ಮುಂದಾಗಬಹುದು. ಒಟ್ಟಿನಲ್ಲಿ ಅಧ್ಯಯನ ವರದಿ ಬಂದ ನಂತರ ತೀರ್ಮಾನಿಸಲಾಗುವುದು ಎಂದರು.
ಇದರಿಂದ ಸರಕಾರಿ ಸ್ವಾಮ್ಯದ ಎಂಎಸ್ಐಎಲ್ ಚಟುವಟಿಕೆಯೂ ವಿಸ್ತಾರಗೊಂಡು, ಆದಾಯದ ಮೂಲವೊಂದು ಸಿಗಲಿದೆ. ಅಲ್ಲದೆ, ಲಕ್ಷಾಂತರ ಸರಕಾರಿ ನೌಕರರ ಕುಟುಂಬಗಳಿಗೂ ಇದರಿಂದ ಪ್ರಯೋಜನವಾಗಲಿದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರಿ ನೌಕರರ ಸಂಘಟನೆಗಳ ಜತೆ ಮಾತುಕತೆ ನಡೆಸುವಂತೆಯೂ ಅವರು ಸೂಚಿಸಿದ್ದಾರೆ.
ಎಂಎಸ್ಐಎಲ್ನ ಚಟುವಟಿಕೆಗಳು ಈಗ ಸೀಮಿತ ಪ್ರಮಾಣದಲ್ಲಿವೆ. ಇದಕ್ಕೆ ಮತ್ತಷ್ಟು ಕಸುವು ತುಂಬಿ, ಆರ್ಥಿಕವಾಗಿ ಮತ್ತಷ್ಟು ಸದೃಢಗೊಳಿಸಬೇಕೆಂಬ ಆಲೋಚನೆ ತಮ್ಮದಾಗಿದೆ. ಇದರಿಂದ ಅಪಾರ ಸಂಖ್ಯೆಯಲ್ಲಿ ಪ್ರತ್ಯಕ್ಷ ಮತ್ತು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
-
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು










Click it and Unblock the Notifications