2023ನೇ ಸಾಲಿನ 'ಗಳಿಕೆ ರಜೆ ನಗದೀಕರಣ'ಕ್ಕೆ ಪೊಲೀಸರಿಗೆ ಅವಕಾಶ- ಪೂರ್ಣ ಮಾಹಿತಿ ಇಲ್ಲಿದೆ
ಬೆಂಗಳೂರು, ಜನವರಿ 14: 2023 ಸಾಲಿನಲ್ಲಿ ಪೊಲೀಸರ ಗಳಿಕೆ ರಜೆ (EL) ನಗದೀಕರಣ ಅವಕಾಶ ಕಲ್ಪಿಸಿ ಸರ್ಕಾರ ಆದೇಶ ಹೊರಡಿಸಿದೆ. 2023ನೇ ಸಾಲಿನ ಅವಧಿಯಲ್ಲಿ ಪೊಲೀಸರು ಗರಿಷ್ಠ 15 ದಿನಗಳಿಗೆ ಮೀರದ ಗಳಿಕೆ ರಜೆಯನ್ನು ರಜಾ ವೇತನಕ್ಕೆ ಸಮನಾದ ನಗದೀಕರಣಕ್ಕೆ ಅವಕಾಶ ನೀಡಿ ಸರ್ಕಾರ ಆದೇಶಿಸಿದೆ.
ಕರ್ನಾಟಕ ರಾಜ್ಯಪಾಲರ ಆದೇಶದ ಅನುಸಾರ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಜಯ್ ಎಸ್ ಕೊರಡೆ ಅವರು ಈ ಆದೇಶ ಪತ್ರವನ್ನು ಹೊರಡಿಸಿದ್ದಾರೆ.

ಈ ಪ್ರಸ್ತಾವಣೆಯು ಹೀಗಿದೆ...
ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಯ ನಿಯಮ 118 (2) (i) ರಲ್ಲಿ ಸರ್ಕಾರಿ ನೌಕರರು ಪ್ರತಿ ಕ್ಯಾಲೆಂಡರ್ ವರ್ಷದಲ್ಲಿ (ಆಯಾ ವರ್ಷದ ಜನವರಿ 1 ರಿಂದ ಆರಂಭಗೊಂಡಂತೆ ಡಿಸೆಂಬರ್ 31ರ ವರೆಗೆ ) 15 ದಿನಗಳಿಗೆ ಮೀರದಂತೆ ಗಳಿಕೆ ರಜೆಯನ್ನು ಅಧ್ಯರ್ಪಿಸಲು ಮತ್ತು ರಜೆ ವೇತನದ ನಗದೀಕರಕ್ಕೆ ಸೌಲಭ್ಯ ಪಡೆಯಲು ಅವಕಾಶವನ್ನು ಕಲ್ಪಿಸಲಾಗಿರುತ್ತದೆ. ಮೇಲೆ ಓದಲಾದ ಸರ್ಕಾರಿ ಆದೇಶದಲ್ಲಿ 2022 ನೇ ಸಾಲಿನ ಬ್ಲಾಕ್ ಅವಧಿಗೆ ಸರ್ಕಾರಿ ಅಧಿಕಾರಿ ನೌಕರರು ಗಳಿಕೆ ರಜೆ ಅಧ್ಯರ್ಪಿಸಿ ನಗದೀಕರಣ ಪಡೆಯಲಿ ಅವಕಾಶ ಕಲ್ಪಿಸಲಾಗಿತ್ತು. ಸದರಿ ಬ್ಲಾಕ್ ಅವಧಿಯ ದಿನಾಂಕ: 31 /12/ 2022 ರಂದು ಮುಕ್ತಾಯಗೊಳ್ಳುವ ಹಿನ್ನೆಲೆಯಲ್ಲಿ ಸರ್ಕಾರವು 2023ನೇ ಸಾಲಿನ ಬ್ಲಾಕ್ ಅವಧಿಯಲ್ಲಿ 15 ದಿನಗಳ ಗಳಿಕೆ ರಜೆಯನ್ನು ಅಧ್ಯರ್ಪಿಸಿ ರಜೆ ವೇತನಕ್ಕೆ ಸಮನಾಗಿ ನಗದೀಕರಣ ಅವಕಾಶವನ್ನು ಕಲ್ಪಿಸುವ ಹಾಗೂ ಈ ಸೌಲಭ್ಯವನ್ನು ಸರ್ಕಾರದಿಂದ ಸಹಾಯಾನುದಾನ ಪಡೆಯುವ ಅಥವಾ ಅನುದಾನ ಪಡೆಯುವ ಅಥವಾ ಪಡೆಯದಿರುವ ಕರ್ನಾಟಕ ಸರ್ಕಾರದ ಎಲ್ಲಾ ಸಂಸ್ಥೆಗಳ/ ಉದ್ಯಮಗಳ ನೌಕರರಿಗೂ ಸಂಬಂಧಿತ ಸಂಸ್ಥೆ, ಉದ್ಯಮಗಳ ಆರ್ಥಿಕ ಸ್ಥಿತಿಗೆ ಒಳಪಟ್ಟು ನಿಯತಗೊಳಿಸಲು ಅವಕಾಶವನ್ನು ಕಲ್ಪಿಸಲು ಉದ್ದೇಶಿಸಿದೆ ಎಂದು ತಿಳಿಸಿದೆ.

ರಜೆ ನಗದೀಕರಣ ನಿಯಂತ್ರಣಕ್ಕೆ ಸಂಬಂಧಿಸಿದ ಇತರೆ ಷರತ್ತುಗಳು ಅನ್ವಯವಾಗುತ್ತವೆ ಎಂದು ಹೇಳಿದೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ದುಬೈಗೂ ಮೊದಲೇ ನಟಿ ರನ್ಯಾ ರಾವ್ಗೆ ಉಗಾಂಡಾ ಏಜೆಂಟ್ ಕೋಟ್ಯಂತರ ರೂಪಾಯಿ ವಂಚನೆ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ -
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
ಆಂಧ್ರಪ್ರದೇಶದಲ್ಲಿ ಕಲಬೆರಕೆ ಹಾಲು ಸೇವಿಸಿ 16 ಮಂದಿ ಸಾವು: ಹಲವು ರಾಜ್ಯಗಳಲ್ಲಿ ಅಧಿಕಾರಿಗಳಿಂದ ದಾಳಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್












Click it and Unblock the Notifications