ಸಾಮೂಹಿಕ ರಜೆಗೆ 50 ಸಾವಿರ ಪೊಲೀಸರ ನಿರ್ಧಾರ
ಬೆಂಗಳೂರು, ಮೇ, 26: ಒಂದು ದಿನ ಪೊಲೀಸ್ ವ್ಯವಸ್ಥೆ ಇಲ್ಲದಿದ್ದರೆ ಏನಾಗುತ್ತದೆ? ಹೌದು ಅಂಥದ್ದೊಂದು ದಿನ ಹತ್ತಿರ ಬಂದಿದೆ. ಹೌದು ಜೂನ್ 4 ರಂದು ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಸ್ತಬ್ಧ ಮಾಡಲು ಪೊಲೀಸರೇ ಸಿದ್ಧತೆ ಮಾಡಿಕೊಂಡಿದ್ದಾರೆ.
ಹಿರಿಯ ಅಧಿಕಾರಿಗಳ ಕಿರುಕುಳ ಖಂಡಿಸಿ ರಾಜ್ಯದಾದ್ಯಂತ ಪೊಲೀಸ್ ಪೇದೆಗಳು ಪ್ರತಿಭಟನೆ ನಡೆಸಲಿದ್ದಾರೆ. ವಾರಕ್ಕೊಂದು ರಜೆ,ಕೆಲಸಕ್ಕೆ ತಕ್ಕ ಸಂಬಳ ಮುಂತಾದ ಬೇಡಿಕೆಗಳಿಗೆ ಆಗ್ರಹಿಸಿ ಅಖಿಲ ಕರ್ನಾಟಕ ಪೊಲೀಸ್ ಮಹಾ ಸಂಘ ಜೂನ್ 4ರಂದು ಪ್ರತಿಭಟನೆ ನಡೆಸಲಿದೆ.[ಪೊಲೀಸರ ಲಂಚಾವತಾರ ಬಿಚ್ಚಿಟ್ಟ ಶಾಕಿಂಗ್ ವರದಿ]

ಪ್ರತಿಭಟನೆ ಎಂದ ಮಾತ್ರಕ್ಕೆ ಪೊಲೀಸರು ಬೀದಿಗಿಳಿದು ಘೊಷಣೆ ಕೂಗುವುದಿಲ್ಲ. ಬದಲಾಗಿ ರಾಜ್ಯದ 50 ಸಾವಿರಕ್ಕೂ ಅಧಿಕ ಪೊಲೀಸರು ಸಾಮೂಹಿಕ ರಜೆ ತೆಗೆದುಕೊಳ್ಳಲಿದ್ದಾರೆ.[ಪುಟ್ಟ ಬಾಲಕಿನಿಗೆ ಪೊಲೀಸ್ ಅಧಿಕಾರಿಗಳ ಸೆಲ್ಯೂಟ್]
ಒನ್ ಇಂಡಿಯಾದೊಂದಿಗೆ ಮಾತನಾಡಿದ ಅಖಿಲ ಕರ್ನಾಟಕ ಪೊಲೀಸ್ ಮಹಾ ಸಂಘದ ಅಧ್ಯಕ್ಷ ವಿ ಶಶಿಧರ್, ಕಿರುಕುಳದ ರಜೆ ಹೆಸರಿನಲ್ಲಿ ರಜೆ ತೆಗೆದುಕೊಳ್ಳಲಿದ್ದೇವೆ. ನಮ್ಮ ಸಮಸ್ಯೆಗಳನ್ನು ಶಾಂತರೀತಿಯಿಂದ ಗೃಹ ಸಚಿವರು ಮತ್ತು ಸರ್ಕಾರದ ಮುಂದೆ ಇಡುತ್ತಿದ್ದೇವೆ ಎಂದು ಹೇಳಿದರು.
ಪ್ರತಿಭಟನೆ ಯಶಸ್ವಿಯಾಗುವುದರಲ್ಲಿ ಅನುಮಾನವಿಲ್ಲ. ಸರ್ಕಾರ ನಮ್ಮ ಪ್ರಾಮಾಣಿಕ ಬೇಡಿಕೆಗಳಿಗೆ ಸ್ಪಂದಿಸಲೇಬೇಕಿದೆ ಎಂದು ಶಶಿಧರ್ ಒತ್ತಾಯ ಮಾಡಿದ್ದಾರೆ.
ಪೇದೆಗಳು ಕನಿಷ್ಠ ಮೂಲ ಸೌಕರ್ಯದಿಂದಲೂ ವಂಚಿತರಾಗಿದ್ದಾರೆ. ಸರ್ಕಾರ ಬೇಡಿಕೆ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟದ ಹಾದಿಯನ್ನು ಬದಲಾವಣೆ ಮಾಡಿಕೊಳ್ಳಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
ಯಾರೂ ರಜೆಗೆ ಅರ್ಜಿ ಹಾಕಿಲ್ಲ
ಯಾರೂ ರಜೆಗೆ ಅರ್ಜಿ ಹಾಕಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಒಂದು ವೇಳೆ ಪೊಲೀಸರು ಸಾಮೂಹಿಕ ರಜೆಗೆ ಮುಂದಾದರೆ ಸರ್ಕಾರ ಮತ್ತು ಇಲಾಖೆ ಎಸ್ಮಾ (Essential Services Maintenance Act 1968) ಜಾರಿಗೆ ಮುಂದಾದರೂ ಆಶ್ಚರ್ಯವಿಲ್ಲ.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ











Click it and Unblock the Notifications