ಪ್ರತಿಭಟನೆಗೆ ಮುಂದಾಗಿರುವ ಪೊಲೀಸರಿಂದ ಬಲವಂತದ ಮುಚ್ಚಳಿಕೆ?
ಬೆಂಗಳೂರು, ಜೂ 2: ಇದೇ ಜೂನ್ ನಾಲ್ಕರಂದು ಸಾಮೂಹಿಕ ರಜೆಯ ಮೂಲಕ ಪ್ರತಿಭಟನೆಗೆ ಮುಂದಾಗಿರುವ ರಾಜ್ಯ ಪೊಲೀಸರನ್ನು ಹತ್ತಿಕ್ಕಲು ಹಿರಿಯ ಪೊಲೀಸ್ ಅಧಿಕಾರಿಗಳು ಬಲವಂತದಿಂದ ಮುಚ್ಚಳಿಕೆ ಬರೆಸಿಕೊಳ್ಳುತ್ತಿದ್ದಾರೆಂದು ವರದಿಯಾಗಿದೆ.
ದೇಶದ ಇತಿಹಾಸದಲ್ಲೇ ಅಪರೂಪ ಎನ್ನುವಂತಹ ಪೊಲೀಸರ ಪ್ರತಿಭಟನಾ ನಿರ್ಧಾರದಿಂದ ನಿದ್ದೆಗೆಟ್ಟಿರುವ ಸಿಎಂ ಸಿದ್ದರಾಮಯ್ಯ, ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಬುಧವಾರ (ಜೂ 1) ಮಾತುಕತೆ ನಡೆಸಿದ್ದಾರೆ. (ಪ್ರತಿಭಟನೆಗೆ ಮುಂದಾದ ಪೊಲೀಸರ 31 ಬೇಡಿಕೆಗಳು)
ಪ್ರತಿಭಟನೆ ನಡೆಯಲು ಅವಕಾಶ ನೀಡಲೇ ಬಾರದು ಎನ್ನುವ ನಿರ್ಧಾರಕ್ಕೆ ಬಂದಿರುವ ಸರಕಾರ, ಈಗಾಗಲೇ ಎಸ್ಮಾ ಜಾರಿಗೆಗೊಳಿಸಿದ್ದು, ಕಡ್ಡಾಯವಾಗಿ ಮೂರು ದಿನ ಕರ್ತವ್ಯಕ್ಕೆ ಹಾಜರಾಗಲೇ ಬೇಕು ಎನ್ನುವ ಮೌಕಿಕ ಆದೇಶ ನೀಡಿದೆ.
ಪ್ರತೀ ಠಾಣೆಗೆ ತೆರಳುತ್ತಿರುವ ಹಿರಿಯ ಅಧಿಕಾರಿಗಳು, ಪೊಲೀಸರಿಂದ ಮುಚ್ಚಳಿಕೆ ಬರೆಸಿಕೊಳ್ಳುತ್ತಿದ್ದಾರೆ ಎನ್ನುವ ಮಾಹಿತಿಯಿದೆ. ಒಂದು ವೇಳೆ ಮುಚ್ಚಳಿಕೆಗೆ ಸಹಿಹಾಕಲು ಹಿಂದೇಟು ಹಾಕಿದರೆ ಸಸ್ಪೆಂಡ್ ಮಾಡಲಾಗುವುದು ಎನ್ನುವ ಎಚ್ಚರಿಕೆ ನೀಡಲಾಗುತ್ತಿದೆ ಎಂದು ಬಿಟಿವಿ ವರದಿ ಮಾಡಿದೆ.
ನಾಳೆಯಿಂದ ಬೆಳಗ್ಗೆ 7ಗಂಟೆಗೆ ಬಂದು, ರಾತ್ರಿ 10 ಗಂಟೆಗೆ ಹೋಗಬೇಕೆಂದು ಮೌಖಿಕವಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಹಾಜರಾತಿ ಪುಸ್ತಕದಲ್ಲಿ ಕಡ್ಡಾಯವಾಗಿ ಮೂರು ದಿನಗಳ ಕಾಲ ಸಹಿ ಮಾಡಬೇಕೆಂದು ಅಧಿಕಾರಿಗಳು ಸೂಚಿಸಿದ್ದಾರೆ ಎಂದು ಪಬ್ಲಿಕ್ ಟಿವಿ ಕೂಡಾ ವರದಿ ಮಾಡಿದೆ. (ಮರೆಯಲಾದಿತೇ ಪೊಲೀಸಪ್ಪನವರ ಜೊತೆಗಿನ ಒಡನಾಟ)
ಸಿಎಂ ಸಮ್ಮುಖದಲ್ಲಿ, ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ ಗೃಹ ಸಚಿವ ಪರಮೇಶ್ವರ್, ಪ್ರತಿಭಟನೆಗೆ ಮುಂದಾಗಿರುವ ಪೊಲೀಸರಿಗೆ ನೀಡಿದ ಎಚ್ಚರಿಕೆ ಮತ್ತು ಮನವಿ ಏನು? ಸ್ಲೈಡಿನಲ್ಲಿ...

ನಿಮ್ಮ ಬೇಡಿಕೆಗೆ ಸ್ಪಂದಿಸುತ್ತೇವೆ
ನಿಮ್ಮ ಬೇಡಿಕೆ ನಮಗೆ ಅರ್ಥವಾಗಿದೆ, ಅದಕ್ಕೆ ಖಂಡಿತ ಸ್ಪಂದಿಸುತ್ತೇವೆ. ಆದರೆ ಮೊದಲು ಪ್ರತಿಭಟನೆಯ ನಿರ್ಧಾರವನ್ನು ಕೈಬಿಡಿ. ನಿಮ್ಮ ಜೊತೆ ನಾವಿದ್ದೇವೆ, ಮಾತುಕತೆಗೂ ಸಿದ್ದರಿದ್ದೇವೆ ಎಂದು ಗೃಹ ಸಚಿವರು ಪೊಲೀಸ್ ಅಧಿಕಾರಿಗಳ ಜೊತೆ ಮಾತುಕತೆಯ ನಂತರ ಮಾಧ್ಯಮದವರ ಮೂಲಕ ಪೊಲೀಸರಲ್ಲಿ ಮನವಿ ಮಾಡಿದ್ದಾರೆ.

ನೀವು ಶಿಸ್ತಿನ ಸಿಪಾಯಿಗಳು
ಪೊಲೀಸ್ ಇಲಾಖೆ ಎಂದರೆ ಅದು ಶಿಸ್ತಿನ ಇಲಾಖೆ, ಪೊಲೀಸರು ಶಿಸ್ತಿನ ಸಿಪಾಯಿಗಳು. ಅವರೇ ಪ್ರತಿಭಟನೆ ನಡೆಸಿದರೆ ಹೇಗೆ? ಪೊಲೀಸ್ ಕಲ್ಯಾಣಕ್ಕಾಗಿ ಹಿಂದೆ ಸಮಿತಿ ನೀಡಿದ್ದ ವರದಿಯಲ್ಲಿನ ಮೂವತ್ತು ಶಿಫಾರಸುಗಳಲ್ಲಿ ಹತ್ತನ್ನು ಈಗಾಗಲೇ ಕಾರ್ಯರೂಪಕ್ಕೆ ತರಲಾಗಿದೆ - ಪರಮೇಶ್ವರ್.

ಪಟ್ಟಭದ್ರ ಹಿತಾಶಕ್ತಿಗಳು
ಕೆಲವು ಪಟ್ಟಭದ್ರ ಹಿತಾಶಕ್ತಿಗಳು ಅಹಿತಕರ ವಾತಾವರಣ ನಿರ್ಮಾಣ ಮಾಡುತ್ತಿದ್ದಾರೆ. ಎಲ್ಲಾ ಪೊಲೀಸ್ ಸಿಬ್ಬಂದಿಗಳು ಮತ್ತು ಅವರ ಕುಟುಂಬಗಳಲ್ಲಿ ನನ್ನ ಪ್ರಾಮಾಣಿಕ ಮನವಿ ಏನೆಂದರೆ ಸುಳ್ಳು ಪ್ರಚಾರಕ್ಕೆ ಕಿವಿಗೊಡಬೇಡಿ. ಒಂದು ವೇಳೆ ಪ್ರತಿಭಟನೆಗೆ ಮುಂದಾದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಪರಮೇಶ್ವರ್ ಮನವಿ, ಎಚ್ಚರಿಕೆ ನೀಡಿದ್ದಾರೆ.

1966ರ ಪೊಲೀಸ್ ಕಾಯ್ದೆ
1966ರ ಪೊಲೀಸ್ ಕಾಯ್ದೆಯ ಕಲಂ 3 (ಹಕ್ಕುಗಳ ಪ್ರತಿಭಟನೆಯ ಅನ್ವಯ) ಪೊಲೀಸರು ಸಂಘಟನೆಯನ್ನು ಹೊಂದುವುದು ಮತ್ತು ಪ್ರತಿಭಟನೆ ಮಾಡುವುದರಿಂದ ನಿರ್ಬಂಧಿಸಲಾಗಿದೆ. ನಮ್ಮ ಸರಕಾರ ಪೊಲೀಸ್ ಸಿಬ್ಬಂದಿಗಳ ಜೀವನಶೈಲಿಯನ್ನು ಉನ್ನತೀಕರಿಸಲು ಕಟಿಬದ್ದವಾಗಿದೆ - ಗೃಹ ಸಚಿವ ಪರಮೇಶ್ವರ್.

ಪೇಜಾವರ ಶ್ರೀಗಳು
ಪೊಲೀಸರ ಬೇಡಿಗೆಗಳಿಗೆ ಸರಕಾರ ಸ್ಪಂದಿಸಬೇಕು ಜೊತೆಗೆ ಪೊಲೀಸರು ಕಾನೂನು, ಸುವ್ಯವಸ್ಥೆ ಮತ್ತು ಸಾರ್ವಜನಿಕರ ಹಿತಾದೃಷ್ಟಿಯಿಂದ ಪ್ರತಿಭಟನೆಯನ್ನು ಕೈಬಿಡಬೇಕೆಂದು ಉಡುಪಿ ಪರ್ಯಾಯ ಪೇಜಾವರ ಶ್ರೀಗಳು ಸರಕಾರಕ್ಕೆ ಮತ್ತು ಪೊಲೀಸರಲ್ಲಿ ಮನವಿ ಮಾಡಿದ್ದಾರೆ.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications