ಜೂ 4, ಪೊಲೀಸ್ ಸಾಮೂಹಿಕ ರಜೆ: ನಾನ್ ಬೇಲ್ ಪ್ರಕರಣ, ಎಚ್ಚರಿಕೆ
ಬೆಂಗಳೂರು, ಮೇ 28: ಜೂನ್ ನಾಲ್ಕರಂದು ' ರಜೆ ಬೇಕು' ಎಂದು ಪೊಲೀಸರು ಸಲ್ಲಿಸುವ ರಜಾ ಅರ್ಜಿಗಳನ್ನು ಸಾರಾಸಗಾಟ ತಿರಸ್ಕರಿಸುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಸಂಬಂಧಪಟ್ಟ ಎಲ್ಲಾ ಹಿರಿಯ ಅಧಿಕಾರಿಗಳಿಗೆ ಮತ್ತು ಪೊಲೀಸ್ ಠಾಣೆಗಳಿಗೆ ಸೂಚನೆ ನೀಡಿದ್ದಾರೆ.
ಇತರೆ ರಾಜ್ಯಗಳಿಗೆ ಹೋಲಿಸಿದರೆ, ಕರ್ನಾಟಕ ಪೊಲೀಸರಿಗೆ ಹೆಚ್ಚಿನ ಸೌಲಭ್ಯ, ಸವಲತ್ತುಗಳಿವೆ, ಅದನ್ನು ಮೊದಲು ಎಲ್ಲರೂ ತಿಳಿದುಕೊಳ್ಳಬೇಕು.
ಯಾರೋ ಎತ್ತಿಕಟ್ಟಿದ್ದಾರೆಂದು ಅವರ ಮಾತನ್ನು ಕೇಳಬಾರದು ಎಂದು ಸಾಮೂಹಿಕ ರಜೆಯ ಮೂಲಕ ಪ್ರತಿಭಟನೆ ಸಲ್ಲಿಸಲು ಮುಂದಾಗಿರುವ ಪೊಲೀಸರಿಗೆ, ಪೊಲೀಸ್ ಮಹಾ ನಿರ್ದೇಶಕರು ತಿಳಿಸಿದ್ದಾರೆ. (ಸಾಮೂಹಿಕ ರಜೆಗೆ 50 ಸಾವಿರ ಪೊಲೀಸರ ನಿರ್ಧಾರ)

ಶಾಂತಿ, ಸುವ್ಯವಸ್ಥೆ ಮತ್ತು ಸಾರ್ವಜನಿಕರ ಆಸ್ತಿ ಕಾಪಾಡುವುದು ಪೊಲೀಸರ ಕರ್ತವ್ಯ. ಅದನ್ನು ಬಿಟ್ಟು ಪ್ರತಿಭಟನೆ ನಡೆಸಿದರೆ, ಅಂತಹ ಪೊಲೀಸರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು. ಅಲ್ಲದೇ, ಜಾಮೀನುರಹಿತ ಪ್ರಕರಣ ದಾಖಲಿಸಲಾಗುವುದು ಎಂದು ಓಂ ಪ್ರಕಾಶ್ ಎಚ್ಚರಿಕೆ ನೀಡಿದ್ದಾರೆ.
ಮೊದಲು ಪೊಲೀಸರು ಪ್ರತಿಭಟನೆ ನಿರ್ಧಾರ ಹಿಂದಕ್ಕೆ ಪಡೆದುಕೊಳ್ಳಲಿ, ಆಮೇಲೆ ಚರ್ಚಿಸೋಣ ಎಂದು ಈಗಾಗಲೇ ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು ಭರವಸೆ ನೀಡಿದ್ದಾರೆ.
ಹಾಗಾಗಿ ಪೊಲೀಸರು ಜೂನ್ ನಾಲ್ಕರಂದು ಸಾಮೂಹಿಕ ರಜೆ ಹಾಕಬಾರದು ಎಂದು ಪೊಲೀಸ್ ನಿರ್ದೇಶಕರು ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.
ಜೂನ್ ನಾಲ್ಕರ ಪ್ರತಿಭಟನೆಯಲ್ಲಿ ಸಿವಿಲ್ ಪೊಲೀಸರು ಮಾತ್ರ ಭಾಗಿಯಾಗುತ್ತಿದ್ದಾರೆ. ಮೀಸಲು ಪಡೆ, ನಗರ ಮೀಸಲು ಪಡೆ, ಜಿಲ್ಲಾ ಮೀಸಲು ಸಿಬ್ಬಂದಿ ಪ್ರತಿಭಟನೆಯಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ.
ಈಗಾಗಲೇ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆಯ ರೂಪುರೇಷೆಯ ಬಗ್ಗೆ ಚರ್ಚಿಸಲಾಗಿದೆ ಎನ್ನುವ ಮಾಹಿತಿಯನ್ನು ಗುಪ್ತಚರ ಇಲಾಖೆ ಸರ್ಕಾರಕ್ಕೆ ನೀಡಿದೆ. (ಜೂನ್ 2ಕ್ಕೆ ಸರ್ಕಾರಿ ನೌಕರರ ಮುಷ್ಕರ)
ವೇತನ ತಾರತಮ್ಯ, ರಜೆ ಸೌಲಭ್ಯ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಅಖಿಲ ಕರ್ನಾಟಕ ಪೊಲೀಸ್ ಮಹಾಸಂಘ ಜೂನ್ 4ರಂದು ಪ್ರತಿಭಟನೆ ನಡೆಸಲು ಮುಂದಾಗಿದೆ.
ಪೊಲೀಸ್ ಮಹಾ ನಿರ್ದೇಶಕರ ಸೂಚನೆಯನ್ನು ಮೀರಿ ಪೊಲೀಸರು ಪ್ರತಿಭಟನೆ ನಡೆಸಿದರೆ ಅವರ ವಿರುದ್ಧ ಕೈಗೊಳ್ಳಬಹುದಾದ ಶಿಸ್ತು ಕ್ರಮಗಳನ್ನು ವಿವರಿಸುವ ಕೈಪಿಡಿಯ ಪ್ರತಿಯನ್ನು ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೆ ಕಳುಹಿಸಿಕೊಡಲಾಗಿದೆ.
-
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ದುಬೈಗೂ ಮೊದಲೇ ನಟಿ ರನ್ಯಾ ರಾವ್ಗೆ ಉಗಾಂಡಾ ಏಜೆಂಟ್ ಕೋಟ್ಯಂತರ ರೂಪಾಯಿ ವಂಚನೆ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ -
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್












Click it and Unblock the Notifications