ಪೊಲೀಸರ ಪ್ರತಿಭಟನೆ : ಶಶಿಧರ್ ವೇಣುಗೋಪಾಲ್ ಬಂಧನ
ಬೆಂಗಳೂರು, ಜೂನ್ 02 : ಪೊಲೀಸರು ರಜೆ ಹಾಕಿ ಜೂನ್ 4ರಂದು ಪ್ರತಿಭಟನೆ ನಡೆಸುವಂತೆ ಅಖಿಲ ಕರ್ನಾಟಕ ಪೊಲೀಸ್ ಮಹಾ ಸಂಘ ಕರೆ ನೀಡಿದೆ. ಮಧ್ಯರಾತ್ರಿ ನಡೆದ ಬೆಳವಣಿಗೆಯಲ್ಲಿ ಮಹಾ ಸಂಘದ ಅಧ್ಯಕ್ಷ ಶಶಿಧರ್ ವೇಣುಗೋಪಾಲ್ ಅವರನ್ನು ಬಂಧಿಸಲಾಗಿದೆ. ಸದ್ಯ, ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.
ಬೆಂಗಳೂರಿನ ಯಲಹಂಕ ನ್ಯೂಟೌನ್ ಆರ್ಟಿಓ ಕಚೇರಿ ಹಿಂಭಾಗದಲ್ಲಿರುವ ಶಶಿಧರ್ ಅವರ ಮನೆಗೆ ಮಧ್ಯರಾತ್ರಿ ಆಗಮಿಸಿದ 30ಕ್ಕೂ ಹೆಚ್ಚು ಪೊಲೀಸರು ಶಶಿಧರ್ ವೇಣುಗೋಪಾಲ್ ಅವರನ್ನು ಬಂಧಿಸಿ, ಕರೆದುಕೊಂಡು ಹೋಗಿದ್ದಾರೆ. [ಪೊಲೀಸರ ಪ್ರತಿಭಟನೆ, 31 ಬೇಡಿಕೆಗಳು]

ಶಶಿಧರ್ ಪತ್ನಿ ಪೂರ್ಣಿಮಾ ಅವರು ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಶಶಿಧರ್ ಅವರ ಪುತ್ರ ಈ ಕುರಿತು ಫೇಸ್ಬುಕ್ ಪುಟದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಧ್ಯರಾತ್ರಿ 1.15ರ ಸುಮಾರಿಗೆ ಪುನಃ ಆಗಮಿಸಿದ ಪೊಲೀಸರು ಪ್ರತಿಭಟನೆಯ ಕರಪತ್ರ, ಮನೆಯಲ್ಲಿದ್ದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. [ಪ್ರತಿಭಟನೆ : ಪೊಲೀಸರಿಂದ ಬಲವಂತದ ಮುಚ್ಚಳಿಕೆ]
ನ್ಯಾಯಾಂಗ ಬಂಧನ : ಶಶಿಧರ್ ವೇಣುಗೋಪಾಲ್ ಅವರನ್ನು ಬಂಧಿಸಿರುವುದನ್ನು ಪೊಲೀಸರು ಖಚಿತ ಪಡಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಬೆಂಗಳೂರು ನಗರದ ಹೆಚ್ಚುವರಿ ಪೊಲೀಸ್ ಆಯುಕ್ತ ಪಿ.ಹರಿಶೇಖರನ್ ಅವರು, ಸರ್ಕಾರದ ವಿರುದ್ಧ ಸಮರ, ಒಳಸಂಚು ರೂಪಿಸಿದ ಆರೋಪದಡಿ ಬಂಧಿಸಲಾಗಿದೆ. ನ್ಯಾಯಾಧೀಶರ ಮುಂದೆ ಅವರನ್ನು ಹಾಜರುಪಡಿಸಿದ್ದು, ಜೂನ್ 16ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ' ಎಂದು ಹೇಳಿದರು. [ಮರೆಯಲಾದಿತೇ ಪೊಲೀಸಪ್ಪನವರ ಜೊತೆಗಿನ ನನ್ನ ಒಡನಾಟ?]
ಕಾಂಪೌಂಡ್ ಹಾರಿ ಬಂದರು : ಶಶಿಧರ್ ಅವರನ್ನು ಬಂಧಿಸಲು ಬಂದ ಪೊಲೀಸರು ಕಾಂಪೌಂಡ್ ಹಾರಿ ಅವರ ಮನೆ ಪ್ರವೇಶಿಸಿದರು. ಗೇಟ್ ಬೀಗ ಹಾಕಿದ್ದರಿಂದ 30ಕ್ಕೂ ಹೆಚ್ಚು ಪೊಲೀಸರು ಕಾಂಪೌಂಡ್ ಹಾರಿ ಒಳ ಬಂದರು. ಈ ಸಮಯದಲ್ಲಿ ಜೋರಾಗಿ ನಾಯಿ ಬೊಗಳಿದ್ದನ್ನು ಕೇಳಿದ ಶಶಿಧರ್ ಮನೆಯಿಂದ ಹೊರಬಂದರು.
'ನಾನು ಪೊಲೀಸರ ಜೊತೆ ಹೋಗುತ್ತೇನೆ, ವಕೀಲರಿಗೆ ಈ ಕುರಿತು ಮಾಹಿತಿ ನೀಡಿ' ಎಂದು ಹೇಳಿದ ಶಶಿಧರ್ ಪೊಲೀಸರ ಜೊತೆ ಹೋದರು. ನಂತರ ಬಂದ ಪೊಲೀಸರು ಮನೆಯಲ್ಲಿದ್ದ ಕರಪತ್ರ, ಕಂಪ್ಯೂಟರ್ ಅನ್ನು ತೆಗೆದುಕೊಂಡು ಹೋದರು' ಎಂದು ಶಶಿಧರ್ ಪತ್ನಿ ಪೂರ್ಣಿಮಾ ಮಾಧ್ಯಮಗಳಿಗೆ ಮಾಹಿತಿ ನೀಡಿದರು.
-
Cylinder Shortage: ರಾಜ್ಯದಲ್ಲಿ ಅನಿಲ ಪೂರೈಕೆ ಸಮಸ್ಯೆಗೆ ಮುಕ್ತಿ? ಸಚಿವ ಮುನಿಯಪ್ಪ ಮಹತ್ವ ಮಾಹಿತಿ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion












Click it and Unblock the Notifications