ಕರ್ನಾಟಕದಲ್ಲಿ ತೃತೀಯ ಲಿಂಗಿಗಳು KSRP & IRB ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶ
ಬೆಂಗಳೂರು, ಡಿ. 21: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ ವಿಶೇಷ ಮೀಸಲು ಪಡೆಯ 70 ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಮಂಗಳಮುಖಿಯರ ನೇಮಕಕ್ಕೆ ಅವಕಾಶ ನೀಡಿದ್ದು, ಪೊಲೀಸ್ ಇಲಾಖೆಯ ಈ ಮಹತ್ವದ ಹೆಜ್ಜೆ ಸಾರ್ವಜನಿಕ ಮೆಚ್ಚುಗೆಗೆ ಪಾತ್ರವಾಗಿದೆ. ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ತೃತೀಯ ಲಿಂಗಿಗಳಿಗೆ ಸಮಾನ ಅವಕಾಶ ಕಲ್ಪಿಸಿದ ಹೆಗ್ಗಳಿಕೆಗೆ ಪೊಲೀಸ್ ಇಲಾಖೆ ಪಾತ್ರವಾಗಿದೆ.
ಡಿಸೆಂಬರ್ 20 ರಿಂದ ಪೊಲೀಸ್ ಇಲಾಖೆಯ ವಿಶೇಷ ಮೀಸಲು ಪಡೆ (KSRP & IRB) ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಕ್ಕೆ ಅರ್ಜಿ ಸಲ್ಲಿಸಬಹುದು. 2022 ಜನವರಿ 18 ಅರ್ಜಿ ಸಲ್ಲಿಸಲು ಕೊನೆ ದಿನಾಂಕ. ಆನ್ಲೈನ್ನಲ್ಲಿ ಅರ್ಜಿ ಶುಲ್ಕ ಪಾವತಿಸಲು 2022 ಜ. 20 ಕೊನೆ ದಿನಾಂಕ ನಿಗದಿ ಪಡಿಸಲಾಗಿದೆ.
ಪ್ರಥಮ ಬಾರಿಗೆ ಮಂಗಳ ಮುಖಿಯರಿಗೆ ಅವಕಾಶ: ಇದೇ ಮೊದಲ ಭಾರಿಗೆ ಪೊಲೀಸ್ ಸೇವೆಗೆ ಸೇರಲು ಮಂಗಳ ಮುಖಿಯರಿಗೂ ಅವಕಾಶ ಕಲ್ಪಿಸಲಾಗಿದೆ. ಡಿ. 20 ರಂದು ಹೊರಡಿಸಿರುವ ನೇಮಕಾತಿ ಅಧಿಸೂಚನೆಯಲ್ಲಿ ಮಂಗಳಮುಖಿಯರಿಗೆ ಶೇ. 1 ರಷ್ಟು ಹುದ್ದೆ ಮೀಸಲಿಡಲಾಗಿದೆ. ಈ ಮೂಲಕ ಮುಂದಿನ ಪೊಲೀಸ್ ಇಲಾಖೆಯ ನೇಮಕಾತಿಯಲ್ಲಿ ತೃತೀಯ ಲಿಂಗಿಗಳಿಗೆ ಅವಕಾಶ ಕಲ್ಪಿಸುವ ಸುಳಿವು ಪೊಲೀಸ್ ಇಲಾಖೆ ನೀಡಿದೆ.

ನಿಶಾ ಗೂಳೂರು ಅವರು ಸಲ್ಲಿಸಿದ್ದ ಅರ್ಜಿ
ತೃತೀಯ ಲಿಂಗಗಳಿಗೆ ಸರ್ಕಾರಿ ಸೇವೆಯಲ್ಲಿ ಅವಕಾಶ ನೀಡುವ ಸಂಬಂಧ ಸಂಗಮ ಸ್ವಯಂ ಸೇವಾ ಸಂಸ್ಥೆ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಸಾಮಾಜಿಕ ಹೋರಾಟಗಾರ್ತಿ ನಿಶಾ ಗೂಳೂರು ಅವರು ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದ್ದ ಹೈಕೋರ್ಟ್ ಕಳೆದ ಜುಲೈನಲ್ಲಿ ಸರ್ಕಾರಕ್ಕೆ ಮಹತ್ವದ ನಿರ್ದೇಶನ ನೀಡಿತ್ತು. ಸರ್ಕಾರಿ ಹುದ್ದೆಗಳಲ್ಲಿ ತೃತೀಯ ಲಿಂಗಿಗಳಿಗೆ ಮೀಸಲಾತಿ ನೀಡುವಂತೆ ಕಳೆದ ಜುಲೈನಲ್ಲಿ ಹೈಕೋರ್ಟ್ ಸೂಚಿಸಿತ್ತು.
ಇದೀಗ ಪೊಲೀಸ್ ಇಲಾಖೆ ಹೊರಡಿಸಿರುವ KSRP- IRB ಸಬ್ ಇನ್ಸ್ಪೆಕ್ಟರ್ 70 ಹುದ್ದೆಗಳ ನೇಮಕ ಅಧಿಸೂಚನೆಯಲ್ಲಿ ತೃತೀಯ ಲಿಂಗಿಗಳಿಗೆ ಐದು ಹುದ್ದೆಗಳನ್ನು ಮೀಸಲಿಡಲಾಗಿದೆ. ಈ ಮೂಲಕ ಕರ್ನಾಟಕ ಪೊಲೀಸ್ ಇಲಾಖೆ ದೇಶದಲ್ಲಿ ಪ್ರಥಮ ಬಾರಿಗೆ ತೃತೀಯ ಲಿಂಗಿಗಳಿಗೆ ನೇಮಕಾತಿಯಲ್ಲಿ ಸಮಾನ ಅವಕಾಶ ಕಲ್ಪಿಸಿಕೊಟ್ಟ ಹೆಗ್ಗಳಿಕೆಗೆ ಪಾತ್ರವಾಗಿದೆ.

ದೇಹದಾರ್ಢ್ಯ ಪರೀಕ್ಷೆ
ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ದೇಹದಾರ್ಢ್ಯ ಪರೀಕ್ಷೆ ನಡೆಯಲಿದ್ದು, ಅದರಲ್ಲಿ ಅಯ್ಕೆಯಾದವರಿಗೆ ಲಿಖಿತ ಪರೀಕ್ಷೆಗೆ ಅವಕಾಶ ಕಲ್ಪಿಸಲಾಗುತ್ತದೆ. ತೃತೀಯ ಲಿಂಗಿಗಳಿಗೆ ಸಹ ದೇಹದಾರ್ಢ್ಯಪರೀಕ್ಷೆ ಆಯೋಜಿಸಲಾಗಿದೆ. ಪುರುಷ ತೃತೀಯ ಲಿಂಗಿಗಳಿಗೆ ಪುರುಷ ಅಭ್ಯರ್ಥಿಗಳಿಗೆ ಇರುವ ಮಾನದಂಡ ಅನುಸರಿಸಲಾಗುತ್ತದೆ. ಮಹಿಳಾ ತೃತೀಯ ಲಿಂಗಿಗಳಿಗೆ ಮಹಿಳಾ ಅಭ್ಯರ್ಥಿಗಳಿಗೆ ಪರೀಕ್ಷೆಗೆ ನಿಗದಿ ಮಾಡಿರುವ ಮಾನದಂಡಗಳನ್ನು ಅನುಸರಿಸಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ವಯೋಮಿತಿ
ವಿಶೇಷ ಮೀಸಲು ಪಡೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಈ ಕೆಳಕಂಡಂತೆ ವಯೋಮಿತಿ ನಿಗದಿ ಮಾಡಲಾಗಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ, ಗರಿಷ್ಠ 26 ವರ್ಷ, ಹಿಂದುಳಿದ ಮತ್ತು ಪರಿಶಿಷ್ಟ ಜಾತಿ ಮತ್ತು ವರ್ಗದ ವಿದ್ಯಾರ್ಥಿಗಳಿಗೆ ಗರಿಷ್ಠ 28 ವರ್ಷ ನಿಗದಿ ಮಾಡಲಾಗಿದೆ. ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ, ಹಿಂದುಳಿದ ಮತ್ತು ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ.

ವಿದ್ಯಾರ್ಹತೆ
ಇನ್ನು ಕೆಎಸ್ಆರ್ಪಿ ಸಬ್ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವರು ಯಾವುದೇ ಅಂಗೀಕೃತ ವಿವಿಯಿಂದ ತತ್ಸಮಾನ ಪದವಿ ಪಡೆದಿರಬೇಕು. ಡಿಪ್ಲೋಮಾಗಳನ್ನು ಪದವಿ ಎಂದು ಅಂಗೀಕರಿಸಲಾಗದು. ಪ್ರಸಕ್ತ ಸಾಲಿನಲ್ಲಿ ಪದವಿ ಪರೀಕ್ಷೆ ಬರೆದು ಅಂಕ ಪಟ್ಟಿ ಇಲ್ಲದವರು ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ತೃತೀಯ ಲಿಂಗಿಗೆ ಈ ಪ್ರಮಾಣ ಪತ್ರ ಅಗತ್ಯ
ತೃತೀಯ ಲಿಂಗಿಗಳ ಹಕ್ಕುಗಳ ರಕ್ಷಣಾ ಅಧಿನಿಯಮ 2020 ರ ಅನ್ವಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ತೃತೀಯ ಲಿಂಗಿಗಳು ಜಿಲ್ಲಾ ಮಾಜಿಸ್ಟ್ರೇಟ್ ಅವರಿಂದ ಪ್ರಮಾಣ ಪತ್ರವನ್ನು ಪಡೆದಿರಬೇಕು. ಇಲ್ಲದಿದ್ದರೆ ಅವರನ್ನು ಮೀಸಲಾತಿಯನ್ನು ನೇಮಕಾತಿಗೆ ಪರಿಗಣಿಸುವುದಿಲ್ಲ ಎಂದು ಪೊಲೀಸ್ ಇಲಾಖೆ ಸೂಚಿಸಿದೆ. ಇನ್ನು ಖಾಲಿ ಇರುವ 70 ಹುದ್ದೆಗಳ ಪೈಕಿ ಐದು ಹುದ್ದೆಗಳನ್ನು ತೃತೀಯ ಲಿಂಗಿಗಳಿಗೆ ಮೀಸಲಿಡಲಾಗಿದೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ.http://siksrp21.ksponline.co.in
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications