ಸಂಜೆ ತನಕ ಕಾದುನೋಡಿ: ಹೊಸ ಬಾಂಬ್ ಸಿಡಿಸಿದ ಡಿ.ಕೆ. ಶಿವಕುಮಾರ್

Recommended Video

      ಕರ್ನಾಟಕ ರಾಜಕೀಯದ ಬಗ್ಗೆ ಕುತೂಹಲಕಾರಿ ಹೇಳಿಕೆ ನೀಡಿದ ಡಿ ಕೆ ಶಿವಕುಮಾರ್ | Oneindia Kannada

      ಬೆಂಗಳೂರು, ಜುಲೈ 11: ಸಮ್ಮಿಶ್ರ ಸರಕಾರವನ್ನು ಹೇಗಾದರೂ ಉಳಿಸಿಕೊಳ್ಳಲೇ ಬೇಕು ಎನ್ನುವ ಹಠಕ್ಕೆ ಬಿದ್ದಿರುವ ಸಚಿವ ಡಿ ಕೆ ಶಿವಕುಮಾರ್, ಸಂಜೆಯೊಳಗೆ ಕಾದು ನೋಡಿ ಎನ್ನುವ ಹೊಸ ಬಾಂಬ್ ಸಿಡಿಸಿದ್ದಾರೆ.

      ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ, ಮುಂಬೈನಲ್ಲಿರುವ ಅತೃಪ್ತ ಶಾಸಕರು, ಬೆಂಗಳೂರಿಗೆ ಬಂದು ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿಯಾಗಬೇಕಿದೆ, ನೋಡೋಣ ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ.

      ಅವರೆಲ್ಲರೂ ನಮ್ಮವರೇ, ಅವರು ಬೆಂಗಳೂರಿಗೆ ಬಂದಾಗ ಅವರ ಜೊತೆ ಮಾತನಾಡಿ, ಅವರ ಮನವೊಲಿಕೆಯ ಪ್ರಯತ್ನವನ್ನು ಮಾಡಲಾಗುವುದು ಎನ್ನುವ ಆಶಾಭಾವನೆಯನ್ನು ಡಿ ಕೆ ಶಿವಕುಮಾರ್ ಹೊರಹಾಕಿದ್ದಾರೆ.

      Karnataka political development: Wait till evening, Minister DK Shivakumar

      ಸರಕಾರಕ್ಕೆ ಏನೂ ತೊಂದರೆಯಾಗುವುದಿಲ್ಲ ಎಂದು ಹೇಳಿಕೊಂಡು ಬರುತ್ತಲೇ ಇರುವ ಡಿ ಕೆ ಶಿವಕುಮಾರ್, ಅತೃಪ್ತರು ಬೆಂಗಳೂರಿಗೆ ಬಂದಾಗ ಯಾವ ರೀತಿ ಹೆಜ್ಜೆಯಿಡಲಿದ್ದಾರೆ ಎನ್ನುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

      ಸಂಜೆ ಆರು ಗಂಟೆಯೊಳಗೆ ಎಲ್ಲರ ರಾಜೀನಾಮೆ ಇತ್ಯರ್ಥ ಮಾಡಲು ಸಾಧ್ಯವಿಲ್ಲ, ಸಮಯಾವಕಾಶ ಬೇಕಿದೆ ಎಂದು ಸ್ಪೀಕರ್ ರಮೇಶ್ ಕುಮಾರ್, ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಾಳೆ (ಜುಲೈ 12) ಕೈಗೆತ್ತಿಕೊಳ್ಳಲಿದೆ.

      ಡಿ ಕೆ ಶಿವಕುಮಾರ್, ಸಿದ್ದರಾಮಯ್ಯ, ಸಿಎಂ ಕುಮಾರಸ್ವಾಮಿ ಆದಿಯಾಗಿ, ಸಮ್ಮಿಶ್ರ ಸರಕಾರದ ಮುಖಂಡರು, ಅತ್ಟುಪ್ತ ಶಾಸಕರು ಮುಂಬೈನಿಂದ ಬೆಂಗಳೂರಿಗೆ ಬಂದಾಗ, ಮತ್ತೆ ಮನವೊಲಿಕೆಗೆ ಮುಂದಾಗುವ ಸಾಧ್ಯತೆಯಿದೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+