ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಂಜೆ ತನಕ ಕಾದುನೋಡಿ: ಹೊಸ ಬಾಂಬ್ ಸಿಡಿಸಿದ ಡಿ.ಕೆ. ಶಿವಕುಮಾರ್

|
Google Oneindia Kannada News

Recommended Video

ಕರ್ನಾಟಕ ರಾಜಕೀಯದ ಬಗ್ಗೆ ಕುತೂಹಲಕಾರಿ ಹೇಳಿಕೆ ನೀಡಿದ ಡಿ ಕೆ ಶಿವಕುಮಾರ್ | Oneindia Kannada

ಬೆಂಗಳೂರು, ಜುಲೈ 11: ಸಮ್ಮಿಶ್ರ ಸರಕಾರವನ್ನು ಹೇಗಾದರೂ ಉಳಿಸಿಕೊಳ್ಳಲೇ ಬೇಕು ಎನ್ನುವ ಹಠಕ್ಕೆ ಬಿದ್ದಿರುವ ಸಚಿವ ಡಿ ಕೆ ಶಿವಕುಮಾರ್, ಸಂಜೆಯೊಳಗೆ ಕಾದು ನೋಡಿ ಎನ್ನುವ ಹೊಸ ಬಾಂಬ್ ಸಿಡಿಸಿದ್ದಾರೆ.

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ, ಮುಂಬೈನಲ್ಲಿರುವ ಅತೃಪ್ತ ಶಾಸಕರು, ಬೆಂಗಳೂರಿಗೆ ಬಂದು ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿಯಾಗಬೇಕಿದೆ, ನೋಡೋಣ ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಫಲಿತಾಂಶ ಏನೇ ಬರಲಿ ಡಿ ಕೆ ಶಿವಕುಮಾರ್ 'ಖದರ್' ಗೊಂದು ಭಲೇ..ಭಲೇ..ಫಲಿತಾಂಶ ಏನೇ ಬರಲಿ ಡಿ ಕೆ ಶಿವಕುಮಾರ್ 'ಖದರ್' ಗೊಂದು ಭಲೇ..ಭಲೇ..

ಅವರೆಲ್ಲರೂ ನಮ್ಮವರೇ, ಅವರು ಬೆಂಗಳೂರಿಗೆ ಬಂದಾಗ ಅವರ ಜೊತೆ ಮಾತನಾಡಿ, ಅವರ ಮನವೊಲಿಕೆಯ ಪ್ರಯತ್ನವನ್ನು ಮಾಡಲಾಗುವುದು ಎನ್ನುವ ಆಶಾಭಾವನೆಯನ್ನು ಡಿ ಕೆ ಶಿವಕುಮಾರ್ ಹೊರಹಾಕಿದ್ದಾರೆ.

Karnataka political development: Wait till evening, Minister DK Shivakumar

ಸರಕಾರಕ್ಕೆ ಏನೂ ತೊಂದರೆಯಾಗುವುದಿಲ್ಲ ಎಂದು ಹೇಳಿಕೊಂಡು ಬರುತ್ತಲೇ ಇರುವ ಡಿ ಕೆ ಶಿವಕುಮಾರ್, ಅತೃಪ್ತರು ಬೆಂಗಳೂರಿಗೆ ಬಂದಾಗ ಯಾವ ರೀತಿ ಹೆಜ್ಜೆಯಿಡಲಿದ್ದಾರೆ ಎನ್ನುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

ಸಂಜೆ ಆರು ಗಂಟೆಯೊಳಗೆ ಎಲ್ಲರ ರಾಜೀನಾಮೆ ಇತ್ಯರ್ಥ ಮಾಡಲು ಸಾಧ್ಯವಿಲ್ಲ, ಸಮಯಾವಕಾಶ ಬೇಕಿದೆ ಎಂದು ಸ್ಪೀಕರ್ ರಮೇಶ್ ಕುಮಾರ್, ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಾಳೆ (ಜುಲೈ 12) ಕೈಗೆತ್ತಿಕೊಳ್ಳಲಿದೆ.

ಮುಂಬೈ ಹೋಟೆಲ್ ವಿರುದ್ಧ ಕಾನೂನು ಕ್ರಮ: ಡಿಕೆ ಶಿವಕುಮಾರ್ ಮುಂಬೈ ಹೋಟೆಲ್ ವಿರುದ್ಧ ಕಾನೂನು ಕ್ರಮ: ಡಿಕೆ ಶಿವಕುಮಾರ್

ಡಿ ಕೆ ಶಿವಕುಮಾರ್, ಸಿದ್ದರಾಮಯ್ಯ, ಸಿಎಂ ಕುಮಾರಸ್ವಾಮಿ ಆದಿಯಾಗಿ, ಸಮ್ಮಿಶ್ರ ಸರಕಾರದ ಮುಖಂಡರು, ಅತ್ಟುಪ್ತ ಶಾಸಕರು ಮುಂಬೈನಿಂದ ಬೆಂಗಳೂರಿಗೆ ಬಂದಾಗ, ಮತ್ತೆ ಮನವೊಲಿಕೆಗೆ ಮುಂದಾಗುವ ಸಾಧ್ಯತೆಯಿದೆ.

English summary
Karnataka political development: Wait till evening, Minister DK Shivakumar statement. Discident MLAs are coming to Bengaluru today (July 11) from Mumbai to resubmit their resignation to Speaker Ramesh Kumar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X