Karnataka Cabinet Expansion Live: ನೂತನ ಸಚಿವರುಗಳಿಗೆ ಖಾತೆ ಹಂಚಿಕೆ ಕಸರತ್ತು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟ ವಿಸ್ತರಣೆ ಕಾರ್ಯಕ್ರಮದ ಅಪ್ಡೇಟ್ ಇಲ್ಲಿದೆ. ಆಗಸ್ಟ್ 4 ರಂದು ಬೊಮ್ಮಾಯಿ ಸಂಪುಟ ರಚನೆ, ವಿಸ್ತರಣೆ ನಿಗದಿಯಂತೆ 2:15ಕ್ಕೆ ರಾಜಭವನದಲ್ಲಿ ಸಂಪನ್ನವಾಗಿದೆ. 29 ಸಚಿವರುಗಳು ಪ್ರಮಾಣ ವಚನ ಸ್ವೀಕರಿಸಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಯಡಿಯೂರಪ್ಪ ಸಂಪುಟದಲ್ಲಿದ್ದ ಏಳು ಮಂದಿ ಹಿರಿಯರಿಗೆ ಕೊಕ್ ನೀಡಲಾಗಿದೆ. ಹೈಕಮಾಂಡ್ ಅಣತಿಯಂತೆ ಹೊಸಬರು, ಅನುಭವವುಳ್ಳರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದೆ. ಬೊಮ್ಮಾಯಿ ಸಂಪುಟಕ್ಕೆ ಆಯ್ಕೆಯಾದವರ ಪೈಕಿ 8 ಲಿಂಗಾಯತ, 7 ಒಬಿಸಿ, 7 ಒಕ್ಕಲಿಗ, 3 ದಲಿತ, 1 ಎಸ್ ಟಿ ಮತ್ತು ಒಬ್ಬ ಮಹಿಳೆಗೆ ಸ್ಥಾನ ಕಲ್ಪಿಸಲಾಗಿದೆ.
ವಿಧಾನಸೌಧದಲ್ಲಿ ಜುಲೈ 26ರಂದು ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ 2ನೇ ವರ್ಷದ ಸಂಭ್ರಮಾಚರಣೆ ಬಳಿಕ ರಾಜಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದರು. ಜುಲೈ 27ರಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಿಗ್ಗಾಂವ್ ಕ್ಷೇತ್ರದ ಶಾಸಕ ಬಸವರಾಜ ಬೊಮ್ಮಾಯಿಯನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಯಿತು. ಬುಧವಾರ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಅಗಸ್ಟ್ 4ರಂದು ಬೊಮ್ಮಾಯಿ ಸಂಪುಟಕ್ಕೆ 29 ಮಂದಿ ಸೇರ್ಪಡೆಗೊಂಡಿದ್ದಾರೆ.
ಬೊಮ್ಮಾಯಿ ಸಚಿವ ಸಂಪುಟ ಪ್ರಮಾಣ ವಚನ ಲೈವ್
ಪ್ರಮಾಣ ವಚನ ಸಮಾರಂಭದ ಅಪ್ಡೇಟ್ಸ್ ಈ ಪುಟದಲ್ಲಿ ನಿಮಗೆ ಸಿಗಲಿದೆ...