ರಾಜಕೀಯ ವಿದ್ಯಮಾನಗಳು: ತಿರುಪತಿಯಲ್ಲಿ ಬೊಮ್ಮಾಯಿ-ಬಿಎಸ್ವೈ ಸಂಜೆ ಮೀಟಿಂಗ್!
ಬೆಂಗಳೂರು ಆಗಸ್ಟ್ 18: ಬಿಬಿಎಂಪಿ ವಾರ್ಡ್ ವಿಂಗಡಣೆ ವಿರುದ್ಧ ಪ್ರತಿಭಟನೆ ಹಾಗೂ ರಾಜಕೀಯ ನಾಯಕರ ಇನ್ನಿತರ ಕಾರ್ಯಕ್ರಮಗಳ ಮಾಹಿತಿ ಬಗ್ಗೆ ಇಲ್ಲಿ ಪರಿಶೀಲಿಸಿ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಳಗ್ಗೆ 10: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನ ಎಚ್ಎಎಲ್ ನಿಲ್ದಾಣದಿಮ್ದ ವಿಶೇಷ ವಿಮಾನದ ಮೂಲಕ ತಮಿಳುನಾಡು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.
ಮುಖ್ಯಮಂತ್ರಿ ಬೊಮ್ಮಾಯಿ ವಿರುದ್ಧವೇ ರಾಜ್ಯಪಾಲರಿಗೆ ದೂರು
ಬೆಳಗ್ಗೆ 10: ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ, ಬಿಜೆಪಿ ರಾಜ್ಯಾಧ್ಯಕ್ಷರು ನಳಿನ್ಕುಮಾರ್ ಕಟೀಲ್, ಕರ್ನಾಟಕದ ಉಸ್ತುವಾರಿ ಸಚಿವ ಅರುಣ್ ಸಿಂಗ್ ಭಾಗಿ, ಸ್ಥಳ: ಬಿಜೆಪಿ ರಾಜ್ಯ ಕಾರ್ಯಾಲಯ, ಜಗನ್ನಾಥ ಭವನ, ಮಲ್ಲೇಶ್ವರಂ, ಬೆಂಗಳೂರು.
ಬೆಳಗ್ಗೆ 10: ಬೆಂಗಳೂರು ಕೇಂದ್ರ, ದಕ್ಷಿಣ ಮತ್ತು ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಅವೈಜ್ಞಾನಿಕ ಜನವಿರೋಧಿ ಬಿಬಿಎಂಪಿ ವಾರ್ಡ್ ಮೀಸಲಾತಿ ವಿರೋಧಿಸಿ ಮುಖ್ಯಮಂತ್ರಿ ನಿವಾಸದ ಎದುರು ಪ್ರತಿಭಟನೆ, ಸಿಎಂ ನಿವಾಸದವರೆಗೆ ಬೃಹತ್ ಮೆರವಣಿ, ಕೆಪಿಸಿಸಿ ಕಾರ್ಯಾಧ್ಯಕ್ಷ, ಪದಾಧಿಕಾರಿಗಳು ಭಾಗಿ, ಸ್ಥಳ: ಸ್ವಾತಂತ್ರ್ಯ ಉದ್ಯಾನ, ಕೆ.ಆರ್. ವೃತ್ತದ ಬಳಿ, ಬೆಂಗಳೂರು ಹಾಗೂ ಮುಖ್ಯಮಂತ್ರಿ ನಿವಾಸ, ರೇಸ್ಕೋರ್ಸ್ ರಸ್ತೆ, ಬೆಂಗಳೂರು.
ಬೆಳಗ್ಗೆ 11: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸುತ್ತಿರುವ 'ಅಮೃತ ಭಾರತಿಗೆ ಕನ್ನಡದಾರತಿ' ಅಭಿಯಾನ ಅಂಗವಾಗಿ 'ರಂಗಾಯಣ ನಾಟಕ ತಿರುಗಾಟ' ಉದ್ಘಾಟನಾ ಕಾರ್ಯಕ್ರಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್, ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಉಪಸ್ಥಿತಿ, ಸ್ಥಳ: ನಯನ ರಂಗಮಂದಿರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು.
ಮಧ್ಯಾಹ್ನ 1: ಕಾಂಗ್ರೆಸ್ ನಾಯಕರ ಸುದ್ದಿಗೋಷ್ಠಿ, ಮಾಜಿ ಕೇಂದ್ರ ಸಚಿವ ಮಣಿಶಂಕರ್ ಅಯ್ಯರ್, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ ಮತ್ತು ಸಲೀಂ ಅಹ್ಮದ್ ಭಾಗಿ, ಸ್ಥಳ: ಕೆಪಿಸಿಸಿ ಕಚೇರಿ, ಕ್ವೀನ್ಸ್ ರಸ್ತೆ, ಬೆಂಗಳೂರು.
ಸಂಜೆ ವೇಳೆಗೆ ಚೆನ್ನೈ ಪ್ರವಾಸ ಮುಗಿಸಿಕೊಂಡು ತಿರುಮಲ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಸಂಜೆ ವೇಳೆಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಜೊತೆಗೂಡಲಿದ್ದು, ಇಬ್ಬರು ದೇಗುಲ ಭೇಟಿ ನೀಡಲಿದ್ದು, ನಂತರ ಮಹತ್ವದ ಮಾತುಕತೆ ನಡೆಸಲಿದ್ದಾರೆ..
Recommended Video