Get Updates
Get notified of breaking news, exclusive insights, and must-see stories!

BJPvsBJP: ವಿಜಯೇಂದ್ರರನ್ನು ಬಾಚಿ ತಬ್ಬಿದ ಸಿಟಿ ರವಿ ಪ್ರಮಾಣ ವಚನ ಸಮಾರಂಭಕ್ಕೆ ತೆರಳಲ್ಲವೆಂದರು

ಬೆಂಗಳೂರು, ನವೆಂಬರ್‌ 14: ಕರ್ನಾಟಕ ಬಿಜೆಪಿ ಅಧ್ಯಕ್ಷರಾಗಿ ಬಿವೈ ವಿಜಯೇಂದ್ರ ಅವರು ನೇಮಕಗೊಂಡಿದ್ದಾರೆ. ಇದರ ಬೆನ್ನಲ್ಲೇ ಬಿಜೆಪಿಯೊಳಗೆ ಅಸಮಾಧಾನದ ಕೂಗು ಕೇಳಿಬಂದಿದೆ. ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಮಾಜಿ ಸಚಿವ ಸಿಟಿ ರವಿ ಅವರು ಹೈಕಮಾಂಡ್ ನಿರ್ಧಾರದ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ. ವಿಜಯೇಂದ್ರ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ತಾವು ಹೋಗುವುದಿಲ್ಲವೆಂದು ಸಿಟಿ ರವಿ ಹೇಳಿದ್ದಾರೆ. ಇದು ರಾಜ್ಯ ಬಿಜೆಪಿಯನ್ನು ಮುಜುಗುರಕ್ಕೆ ಈಡು ಮಾಡಿದೆ.

ಸೋಮವಾರ ರಾತ್ರಿ ವಿಜಯೇಂದ್ರ ಅವರು ಸಿಟಿ ರವಿ ಅವರನ್ನು ಭೇಟಿಯಾಗಿ ಸಹಕಾರ ಕೋರಿದ್ದಾರೆ. ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರನ್ನು ಸಿಟಿ ರವಿ ಅವರು ಅಭಿನಂದಿಸಿದ್ದಾರೆ.

Karnataka Politics: BJP Leader CT Ravi hugs partys state president BY Vijayendra

ರಾಜ್ಯಾಧ್ಯಕ್ಷ ಸ್ಥಾನ ತಪ್ಪಿದ ಅಸಮಾಧಾನ ಮತ್ತು ಕೋಪವಿದ್ದರೂ ವಿಜಯೇಂದ್ರ ಅವರನ್ನು ಬಾಚಿ ತಬ್ಬಿರುವ ಸಿಟಿ ರವಿ ಅವರ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿವೆ.

ಕಳೆದ ಕೆಲವು ತಿಂಗಳುಗಳಿಂದ ಸಿಟಿ ರವಿ ಸತತ ಹಿನ್ನಡೆ ಎದುರಿಸುತ್ತಿದ್ದಾರೆ. ಮೇ ತಿಂಗಳಲ್ಲಿ ನಡೆದ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ರವಿ ಅವರು ತಮ್ಮ ಶಿಷ್ಯನಿಂದಲೇ ಪರಾಭವಗೊಂಡಿದ್ದರು. ಇತ್ತೀಚೆಗೆ ಅವರನ್ನು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ತೆಗೆದುಹಾಕಲಾಗಿತ್ತು. ಅವರು ಪಕ್ಷದ ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿದ್ದರು. ಆದರೆ ಪಕ್ಷವು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಮತ್ತು ಶಿಕಾರಿಪುರ ಶಾಸಕ ಬಿವೈ ವಿಜಯೇಂದ್ರ ಅವರನ್ನು ರಾಜ್ಯ ಘಟಕದ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಿದೆ.

ವಿಜಯೇಂದ್ರರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಗೈರಾಗಲಿದ್ದಾರೆ ಸಿಟಿ ರವಿ

ನವೆಂಬರ್ 15 ರಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆಯಲಿರುವ ತಮ್ಮ ಪ್ರಮಾಣ ವಚನ ಸಮಾರಂಭಕ್ಕೆ ಹಾಜರಾಗುವಂತೆ ವಿಜಯೇಂದ್ರ ರವಿ ಅವರಿಗೆ ಆಹ್ವಾನ ನೀಡಿದ್ದಾರೆ. ಆದರೆ, ಪೂರ್ವನಿಯೋಜಿತ ಕಾರ್ಯಕ್ರಮ ಇರುವುದರಿಂದ ರವಿ ಅವರು ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗುತ್ತಿಲ್ಲವೆಂದು ಹೇಳಿದ್ದಾರೆ. ಸಿಟಿ ರವಿ ಅವರು ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಧ್ಯಪ್ರದೇಶ ವಿಧಾನಸಭೆ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.

ವಿಜಯೇಂದ್ರ ಅವರು ಬುಧವಾರ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಅಧಿಕಾರ ಸ್ವೀಕರಿಸುವ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಆಗಮಿಸುವಂತೆ ಹಲವು ಹಿರಿಯ ನಾಯಕರಿಗೆ ಆಹ್ವಾನ ನೀಡಿದ್ದಾರೆ. ರಾಜ್ಯ ಬಿಜೆಪಿ ನವೆಂಬರ್ 23-30 ರ ನಡುವೆ ಬೆಂಗಳೂರಿನ ಅರಮನೆ ರೌಂಡ್ಸ್‌ನಲ್ಲಿ ಮೆಗಾ ರ್ಯಾಲಿಯನ್ನು ಆಯೋಜಿಸಿದೆ.

ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿದಾಗಿನಿಂದ ರವಿ ಅವರು ಈ ನಿರ್ಧಾರದ ವಿರುದ್ಧ ಬಹಿರಂಗವಾಗಿಯೇ ಭಿನ್ನಾಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಪಕ್ಷ ನನಗೆ ಯಾವುದೇ ಜವಾಬ್ದಾರಿ ನೀಡದಿದ್ದರೂ ಪಕ್ಷದ ಪರ ಪ್ರಚಾರ ಮುಂದುವರಿಸುತ್ತೇನೆ. ನಾನು ಬೇರೆ ಪಕ್ಷದ ಬಗ್ಗೆ ಯೋಚಿಸಿಲ್ಲ. ರಾಜಕೀಯದಿಂದ ಬೇಸತ್ತಿದ್ದರೆ ಮನೆಯಲ್ಲಿ ಕೂರುತ್ತೇನೆ. ಆದರೆ ಬೇರೆ ಪಕ್ಷ ಸೇರುವುದಿಲ್ಲ ಎಂದು ರವಿ ಸೋಮವಾರ ಹೇಳಿದ್ದಾರೆ.

2024ರ ಮೇ ತಿಂಗಳ ಲೋಕಸಭೆ ಚುನಾವಣೆ ನಂತರ ವೈಯಕ್ತಿಕ ರಾಜಕಾರಣ ಮಾಡುವುದಾಗಿ ಈ ಹಿಂದೆ ಹೇಳಿದ್ದರು. ಈ ಇಬ್ಬರು ನಾಯಕರು ಈ ಹಿಂದೆ ಉತ್ತಮ ಬಾಂಧವ್ಯವನ್ನು ಹಂಚಿಕೊಂಡಿರುವುದು ಕಂಡುಬಂದಿಲ್ಲ. ಈ ವರ್ಷ ಮೇನಲ್ಲಿ ನಡೆದ ವಿಧಾನಸಭೆ ಚುನಾವಣೆ ವೇಳೆ ಟಿಕೆಟ್ ಹಂಚಿಕೆ ವಿಚಾರದಲ್ಲಿ ರವಿ ಮತ್ತು ವಿಜಯೇಂದ್ರ ನಡುವೆ ಮಾತಿನ ಚಕಮಕಿ ನಡೆದಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+