ಗಡ್ಡಕ್ಕೆ ಬೆಂಕಿ : ಅತೃಪ್ತರ ಆಕ್ರೋಶ ತಣಿಸಲು ಹಿರಿಯ ಕಾಂಗ್ರೆಸ್ ಮಂತ್ರಿಗಳ ರಾಜೀನಾಮೆ?
ಬೆಂಗಳೂರು, ಜುಲೈ 06 : ಗಡ್ಡಕ್ಕೆ ಧಗಧಗನೆ ಬೆಂಕಿ ಹತ್ತಿರುವ ಸಂದರ್ಭದಲ್ಲಿ, ಭುಗಿಲೆದ್ದಿರುವ ಆಕ್ರೋಶದ ಜ್ವಾಲೆಯನ್ನು ತಣಿಸಲು ಬಾವಿಯನ್ನು ತೋಡಲು ಕಾಂಗ್ರೆಸ್ ಮುಂದಾಗಿದೆ. ಕ್ರೈಮ್ಯಾಕ್ಸ್ ಹಂತಕ್ಕೆ ತಲುಪಿರುವ ಕರ್ನಾಟಕ ರಾಜಕೀಯ ಬೃಹನ್ನಾಟಕ ಬಹುರೋಚಕ ಹಂತಕ್ಕೆ ತಲುಪಿದೆ.
ರಾಜಕೀಯ ಅಂಗಳದಲ್ಲಿ ಹಾಗಾಗಬಹುದು, ಹೀಗಾಗಬಹುದು ಎಂದು ಹಲವಾರು ಸುದ್ದಿಗಳು ಹರಿದಾಡುತ್ತಿವೆ. ಡಿಕೆ ಶಿವಕುಮಾರ್ ಅವರು ಅತೃಪ್ತರನ್ನು ಮನವೊಲಿಸುತ್ತಾರಾ? ಡಿಕೆಶಿ ಮನವೊಲಿಕೆಗೆ ಬಗ್ಗಿ ರಾಜೀನಾಮೆ ಹಿಂದೆ ಪಡೆಯುತ್ತಾರಾ? ಅತೃಪ್ತರು ಬಿಜೆಪಿ ಸೇರುತ್ತಾರಾ? ಅಥವಾ ರಾಜ್ಯಪಾಲರು ಯಡಿಯೂರಪ್ಪ ಅವರನ್ನು ಸರಕಾರ ರಚಿಸಲು ಆಹ್ವಾನಿಸುತ್ತಾರಾ?
ಇವುಗಳಲ್ಲಿ ಯಾವುದೇ ಸಾಧ್ಯತೆಗಳನ್ನು ತಳ್ಳಿಹಾಕುವಂತಿಲ್ಲ. ಆದರೆ, ಅಷ್ಟರಲ್ಲಿ ಒಂದು ಸುದ್ದಿ ವಿಧಾನಸೌಧದ ಮೊಗಸಾಲೆಯಿಂದ ಹೊರಬಿದ್ದಿದೆ. ಅದೇನೆಂದರೆ, ಅತೃಪ್ತರನ್ನು ತೃಪ್ತಿಪಡಿಸಲು ಸಂಪುಟದಲ್ಲಿರುವ ಕೆಲ ಹಿರಿಯ ಸಚಿವರಿಗೆ ರಾಜೀನಾಮೆ ನೀಡಲು ಕಾಂಗ್ರೆಸ್ ಹೈಕಮಾಂಡ್ ಆದೇಶಿಸಿದ್ದು, ಅತೃಪ್ತರಿಗೆ ಆ ಸ್ಥಾನಗಳನ್ನು ಕೊಟ್ಟು ಬಾಯಿ ಮುಚ್ಚಿಸುವ ನಿರ್ಧಾರಕ್ಕೆ ಬಂದಿದೆ.

ಆದರೆ, ಈ ಆಮಿಷಗಳಿಗೆ ಬಂಡಾಯ ಶಾಸಕರು ಒಪ್ಪುತ್ತಾರಾ? ರಾಮಲಿಂಗಾ ರೆಡ್ಡಿ ಅಂಥ ಹಿರಿಯ, ನಿಷ್ಠಾವಂತ ನಾಯಕರೇ ರಾಜೀನಾಮೆ ಬಿಸಾಕಿದ್ದಾರೆಂದರೆ, ಕಾಂಗ್ರೆಸ್ಸಿನಲ್ಲಿನ ಆಂತರಿಕ ಕಚ್ಚಾಟ ಯಾವ ಮಟ್ಟಿಗೆ ತಲುಪಿದೆ ಎಂಬುದನ್ನು ಊಹಿಸಬಹುದು. ಹಲವಾರು ತಿಂಗಳುಗಳ ಕಾಲ ತಮ್ಮಲ್ಲಿ ಹುದುಗಿಸಿಟ್ಟಿದ್ದ ಕುರ್ಚಿಯ ಆಸೆ ಸಿಗದಿದ್ದರಿಂದ ಬಂಡಾಯ ಶಾಸಕರು ಜ್ವಾಲಾಮುಖಿಯಂತೆ ಸ್ಫೋಟಿಸಿದ್ದಾರೆ.
ಮೂಲಗಳ ಪ್ರಕಾರ, ಮೈತ್ರಿ ಸರಕಾರದಲ್ಲಿ ಮಂತ್ರಿಗಳಾಗಿರುವ ಹಿರಿಯ ಶಾಸಕರಾದ ಕೆಜೆ ಜಾರ್ಜ್, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಯುಟಿ ಖಾದರ್ ಮುಂತಾದವರಿಗೆ ರಾಜೀನಾಮೆ ನೀಡಲು ನಿರ್ದೇಶನ ನೀಡಲಾಗಿದೆ ಎಂಬ ಮಾತು ಕೇಳಿಬಂದಿದೆ. ಕೆಲ ತಿಂಗಳ ಹಿಂದೆಯಷ್ಟೇ, ಬಂಡಾಯದ ಬಿಸಿ ಮುಟ್ಟಿಸಿದ್ದ ಎಂಬಿ ಪಾಟೀಲ, ಆರ್ ವಿ ದೇಶಪಾಂಡೆ ಮುಂತಾದವರನ್ನು ಸಂಪುಟದಲ್ಲಿ ಸೇರಿಸಿಕೊಳ್ಳಲಾಗಿತ್ತು.
ಆದರೆ, ಕಳೆದ ಬಾರಿ ಸಂಪುಟ ವಿಸ್ತರಣೆ ಮಾಡಿದಾಗ ಕಾಂಗ್ರೆಸ್ ಶಾಸಕರಿಗೆ ಮಂತ್ರಿ ಸ್ಥಾನ ನೀಡುವ ಬದಲು ಸ್ವತಂತ್ರವಾಗಿ ಗೆದ್ದಿದ್ದ ಶಾಸಕರಿಗೆ ಕಾಂಗ್ರೆಸ್ ಮಣೆ ಹಾಕಿತೋ, ಆವಾಗಲೇ ಅತೃಪ್ತಿಯ ನೀರು ಕುದಿಯಲು ಆರಂಭಿಸಿತ್ತು. ಇದೀಗ ಎಲ್ಲವೂ ಸ್ಪೋಟಗೊಂಡಿದ್ದು, ಇದನ್ನು ಶಮನ ಮಾಡಲು ವಿಭಿನ್ನ ಯತ್ನಕ್ಕೆ ಕಾಂಗ್ರೆಸ್ ಹೈಕಮಾಂಡ್ ಕೈಹಾಗಬೇಕಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications