ಜುಲೈ 18ಕ್ಕೆ ಕುಮಾರಸ್ವಾಮಿ ವಿಶ್ವಾಸಮತ ಯಾಚನೆ
ಬೆಂಗಳೂರು, ಜುಲೈ 15: ಕರ್ನಾಟಕ ರಾಜಕೀಯ ತೂಗುಯ್ಯಾಲೆ ಮೇಲಿದ್ದು ಯಾವ ಕ್ಷಣದಲ್ಲಿ ಏನು ಬೇಕಾದರೂ ಆಗಬಹುದು ಎಂಬ ಸ್ಥಿತಿ ನಿರ್ಮಾಣವಾಗಿದೆ.
ಕಾಂಗ್ರೆಸ್ ನಾಯಕರಿಂದ ರಕ್ಷಿಸಿ: ಅತೃಪ್ತ ಶಾಸಕರಿಂದ ಪೊಲೀಸ್ ದೂರು
ಜೆಡಿಎಸ್-ಕಾಂಗ್ರೆಸ್ನ ಒಟ್ಟು 16 ಶಾಸಕರು ರಾಜೀನಾಮೆ ನೀಡಿದ್ದು, ಇಬ್ಬರು ಪಕ್ಷೇತರರು ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದಿದ್ದಾರೆ. ಮೈತ್ರಿ ಸರ್ಕಾರದ ಬಲ ಬಿಜೆಪಿಯ ಮುಂದೆ ಕುಸಿದಿದ್ದು, ಸರ್ಕಾರ ಪತನದ ಅಂಚಿನಲ್ಲಿದೆ.
ಅತೃಪ್ತರ ಕರೆತರಲು ಮುಂಬೈಗೆ ತೆರಳಲಿದ್ದಾರೆ ಖರ್ಗೆ, ದೇವೇಗೌಡ
ಮುಂಬೈ ಸೇರಿರುವ 13 ಶಾಸಕರು ಸುತಾರಾಂ ರಾಜೀನಾಮೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಅವರ ಮನವೊಲಿಸಲು ಡಿಕೆಶಿ ಮಾಡಿದ ಪ್ರಯತ್ನ ವ್ಯರ್ಥವಾಗಿದ್ದು, ಇಂದು ದೋಸ್ತಿ ಪಕ್ಷಗಳ ಟಾಪ್ ನಾಯಕರು ಮುಂಬೈಗೆ ತೆರಳಲಿದ್ದಾರೆ.
ವಿಶ್ವಾಸಮತ ಯಾಚನೆ ಮಾಡುವುದಾಗಿ ಕುಮಾರಸ್ವಾಮಿ ಅವರು ಸದನದಲ್ಲಿ ಈಗಾಗಲೇ ಘೋಷಿಸಿದ್ದು, ಸಮಯ ನಿಗದಿ ಮಾಡಬೇಕಿದೆ. ಇಂದು ಅಧಿವೇಶನದ ಎರಡನೇ ದಿನವಾಗಿದ್ದು, ಇಂದೇ ವಿಶ್ವಾಸ ಮತ ಯಾಚನೆ ಮಾಡುವಂತೆ ಬಿಜೆಪಿಯು ಪಟ್ಟು ಹಿಡಿಯಲಿದೆ.