Get Updates
Get notified of breaking news, exclusive insights, and must-see stories!
Live

Karnataka Poll 2023 LIVE: ನಾಳೆ (ಮೇ 6) ಕರ್ನಾಟಕ ಚುನಾವಣಾ ಕಣದಲ್ಲಿ ಸೋನಿಯಾ ಗಾಂಧಿ

ಕರ್ನಾಟಕ ವಿಧಾನಸಭಾ ಚುನಾವಣೆ 2023 ಲೈವ್ ಸುದ್ದಿ:ಕರ್ನಾಟಕ ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇನ್ನೇನು ಕೆಲವೇ ದಿನಗಳು ಉಳಿದಿವೆ. ಶನಿವಾರದ ದಿನದಂದು ಪ್ರಧಾನಿ ಮೋದಿಯವರು ಬೆಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ. ಇತ್ತ,ಸೋನಿಯಾ ಗಾಂಧಿಯವರು ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮೇ ಆರರಂದು ಬೆಳಗಾವಿ ಜಿಲ್ಲೆ ಯಮಕನಮರಡಿಯಲ್ಲಿ ಮಧ್ಯಾಹ್ನ 2.15ಕ್ಕೆ, ಚಿಕ್ಕೋಡಿಯಲ್ಲಿ ಮಧ್ಯಾಹ್ನ 3.45ಕ್ಕೆ ಪ್ರಚಾರ ನಡೆಸಲಿದ್ದಾರೆ. ಸಂಜೆ 5.30ಕ್ಕೆ ಹುಬ್ಬಳ್ಳಿಯಲ್ಲಿ ಸಾರ್ವಜನಿಕ ಸಭೆ ಆಯೋಜಿಸಲಾಗಿದ್ದು ಇದರಲ್ಲಿ ಸೋನಿಯಾ ಗಾಂಧಿ ಪಾಲ್ಗೊಳ್ಳಲಿದ್ದಾರೆ.

ಕೊನೆಯ ಹಂತಕ್ಕೆ ಬಂದು ತಲುಪಿರುವ ಬಹಿರಂಗ ಪ್ರಚಾರದಲ್ಲಿ ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರವನ್ನ ನಡೆಸುತ್ತಿದ್ದು, ಬಿಜೆಪಿ ಹೈಕಮಾಂಡ್‌ ತಂಡವೇ ಕರ್ನಾಟಕದಲ್ಲಿ ಸರ್ಕಾರ ರಚನೆಗೆ ನಾನಾ ಕಸರತ್ತುಗಳನ್ನ ನಡೆಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಬಳ್ಳಾರಿ ಹಾಗೂ ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ಪರ ಮತಬೇಟೆಯನ್ನ ನಡೆಸಲಿದ್ದಾರೆ. ಇನ್ನೂ ಕಾಂಗ್ರೆಸ್‌ ನಾಯಕರ ಮಲ್ಲಿಕಾರ್ಜುನ್‌ ಖರ್ಗೆ ಅವರು ಕಲಬುರಗಿ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರವನ್ನ ನಡೆಸಲಿದ್ದಾರೆ.

 Karnataka Poll 2023

ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದ ಚುನಾವಣೆ ನಡೆಯಲಿದ್ದು, ಮೇ 8ರಂದು ಬಹಿರಂಗ ಪ್ರಚಾರಕ್ಕೆ ಅಂತಿಮ ದಿನವಾಗಿದೆ. ಇನ್ನು ಮೇ 10 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ರಂದು ಶನಿವಾರ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ. ಮೇ 15 ರೊಳಗೆ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ.

'ಒನ್ ಇಂಡಿಯಾ ಕನ್ನಡ' ಜಾಲತಾಣ ಓದುಗರಿಗೆ ಚುನಾವಣಾ ಬೆಳವಣಿಗೆಯ ಮಾಹಿತಿಯನ್ನು ಲೈವ್ ಬ್ಲಾಗ್ ಮೂಲಕ ನೀಡಲಿದೆ. ನೀವು ಇಲ್ಲಿ ಪ್ರಮುಖ ರಾಜಕೀಯ ಪಕ್ಷಗಳ ನಾಯಕರ ಪ್ರಚಾರ, ಭರವಸೆ, ಸಾರ್ವಜನಿಕ ಸಭೆಗಳು, ಹೇಳಿಕೆಗಳು, ಚರ್ಚೆಗಳು, ಪ್ರಚಾರದ ಸದ್ದು-ಗದ್ದಲಗಳ ಕ್ಷಣ ಕ್ಷಣದ ಮಾಹಿತಿ ತಿಳಿದುಕೊಳ್ಳಬಹುದು.

May 05, 2023, 9:38 pm IST

ಕುಣಿಗಲ್ ನಲ್ಲಿ ಎಚ್.ಡಿ.ಕುಮಾರಸ್ವಾಮಿ ಪ್ರಚಾರ
May 05, 2023, 9:38 pm IST

ಬೆಳಗಾವಿಯಲ್ಲಿ ಶಿವಣ್ಣ ಮತಯಾಚನೆ

ಶಿವರಾಜಕುಮಾರ್ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಿ ಹೆಬ್ಬಾಳ್ಕರ್ ಪರವಾಗಿ ಪ್ರಚಾರ ನಡೆಸಲಿದ್ದಾರೆ. ಶನಿವಾರ, ಮೇ 6ರಂದು ಬೆಳಗಾವಿಗೆ ಆಗಮಿಸಲಿರುವ ಶಿವಣ್ಣ, ಬೆಳಗಾವಿ ಗ್ರಾಮೀಣ ಶಾಸಕಿ ಪರವಾಗಿ ಮತಯಾಚನೆ ಮಾಡಲಿದ್ದಾರೆ.
May 05, 2023, 8:00 pm IST

ರಾಹುಲ್ ಮತ್ತು ಸೋನಿಯಾ ಗಾಂಧಿ ಮೇ ಆರರಂದು ಪ್ರಚಾರ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮೇ ಆರರಂದು ಬೆಳಗಾವಿ ಜಿಲ್ಲೆ ಯಮಕನಮರಡಿಯಲ್ಲಿ ಮಧ್ಯಾಹ್ನ 2.15ಕ್ಕೆ, ಚಿಕ್ಕೋಡಿಯಲ್ಲಿ ಮಧ್ಯಾಹ್ನ 3.45ಕ್ಕೆ ಪ್ರಚಾರ. ಸಂಜೆ 5.30ಕ್ಕೆ ಹುಬ್ಬಳ್ಳಿಯಲ್ಲಿ ಸಾರ್ವಜನಿಕ ಸಭೆ. ಈ ಸಮಾವೇಶದಲ್ಲಿ ಸೋನಿಯಾ ಗಾಂಧಿ ಕೂಡ ಭಾಗಿ.
May 05, 2023, 7:55 pm IST

ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದಲ್ಲಿ ಜೋಷಿ ಪ್ರಚಾರ

ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದಲ್ಲಿ ಬಿಜೆಪಿ ಬತ್ತಳಿಕೆಯಿಂದ ಲಿಂಗಾಯತ ಮತಗಳು ಹೊರ ಬೀಳದಂತೆ ನೋಡಿಕೊಳ್ಳಲು ಎಚ್ಚರಿಕೆ ವಹಿಸಿರುವ ಪ್ರಲ್ಹಾದ್ ಜೋಶಿ, ವಿಜಯ್ ಸಂಕೇಶ್ವರ್ ಅವರ ಸಹಕಾರ ಪಡೆದಿದ್ದಾರೆ. ಹುಬ್ಬಳ್ಳಿ ಸೇರಿದಂತೆ ರಾಜ್ಯದ ಲಿಂಗಾಯತ ಸಮುದಾಯದಲ್ಲಿ ಪ್ರಮುಖ ಮುಖಂಡರಲ್ಲೊಬ್ಬರಾಗಿ ಪ್ರಭಾವ ಹೊಂದಿರುವ ಉದ್ಯಮಿಯೂ ಆಗಿರುವ ವಿಜಯ ಸಂಕೇಶ್ವರ ಬಿಜೆಪಿಗೆ ಬೆಂಬಲಿಸುವಂತೆ ಕರೆ ನೀಡಿದ್ದಾರೆ.
May 05, 2023, 5:36 pm IST

ವರುಣಾದಲ್ಲಿ ಸಿಎಂ ಭರ್ಜರಿ ರೋಡ್ ಶೋ

ಟಿ. ನರಸಿಪುರ ಕ್ಷೇತ್ರದ ಅಭ್ಯರ್ಥಿ ಡಾ. ರೇವಣ್ಣ ಅವರು ವೈದ್ಯ ವೃತ್ತಿ ಮಾಡಿ ಜನರ ಸೇವೆ ಮಾಡಿದ್ದಾರೆ. ಜನರ ಕಾಳಜಿ ಇರುವ ವೈದ್ಯರನ್ನು ಈ ಕ್ಷೇತ್ರದಲ್ಲಿ ನಿಲ್ಲಿಸಿದ್ದೇವೆ. ಆಯ್ಕೆ ನಿಮ್ಮದು. ಎಲ್ಲ ಕಾರ್ಯಕರ್ತರು ಕನಿಷ್ಟ 10 ಮತಗಳನ್ನು ಹಾಕಿಸಿದರೆ, ರೇವಣ್ಣ 10 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತಾರೆ. ಇನ್ನೂ ವರುಣಾ ಅಭ್ಯರ್ಥಿಯಾದ ವಿ. ಸೋಮಣ್ಣ ವಿಕ್ಟರಿ ಸೋಮಣ್ಣ ಎಂದು ಹೆಸರು ಪಡೆದವರು. ಇಲ್ಲಿ ಆಡಳಿತ ನಡೆಸಿದವರು ಜಿಡ್ಡುಗಟ್ಟಿದ ಆಡಳಿತ ನೀಡಿದ್ದಾರೆ‌. ನೀವು ಸೋಮಣ್ಣ ಅವರನ್ನು ಗೆಲ್ಲಿಸಿದರೆ, ಸಮೃದ್ಧಿಯ ಸುಭೀಕ್ಷ ಅಧಿಕಾರ ಸಿಗಲಿದೆ ಎಂದು ವರುಣಾ ಮತ್ತು ಟಿ ನರಸೀಪುರ ಕ್ಷೇತ್ರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ರೋಡ್ ಶೋ ಮೂಲಕ ಮತಯಾಚಿಸಿದರು.
May 05, 2023, 5:34 pm IST

ಮೋದಿ ರೋಡ್‌ ಶೋಗೆ ಹೈಕೋರ್ಟ್ ಸಮ್ಮತಿ

ಬೆಂಗಳೂರಿನಲ್ಲಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ರೋಡ್‌ ಶೋಗೆ ಹೈ ಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟಿದೆ. ಸಾರ್ವಜನಿಕರಿಗೆ ತೊಂದರೆಯಾಗುತ್ತದೆ, ರೋಡ್‌ ಶೋಗೆ ಅನುಮತಿ ನೀಡಬಾರದು ಎಂದು ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಲಾಗಿತ್ತು. ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಕೃಷ್ಣ ದೀಕ್ಷಿತ್, ನ್ಯಾ.ವಿಜಯ್ ಕುಮಾರ್ ಅವರಿದ್ದ ಪೀಠ, ಚುನಾವಣೆಯನ್ನು ಹಬ್ಬದ ರೀತಿಯಲ್ಲಿ ಆಚರಿಸಲಾಗುತ್ತಿದೆ ಎಂದು ಅಭಿಪ್ರಾಯಪಟ್ಟಿದೆ. ನೀಟ್ ಪರೀಕ್ಷೆಯ ಹಿನ್ನಲೆಯಲ್ಲಿ ಮೇ 7 ರಂದು ಭಾನುವಾರ ಬೆಳಗ್ಗೆ ಒಂಬತ್ತು ಗಂಟೆಯಿಂದ 11.30ರ ವರೆಗೆ ರೋಡ್ ಶೋಗೆ ಅನುಮತಿ ನೀಡಿದೆ.
May 05, 2023, 5:00 pm IST

ತುಮಕೂರಿನಲ್ಲಿ ಪಿಎಂ ಮೋದಿ

ತುಮಕೂರಿನ ಸರಕಾರೀ ಕಾಲೇಜು ಮೈದಾನದಲ್ಲಿ ಬಿಜೆಪಿ ಚುನಾವಣಾ ಸಮಾವೇಶ. ಸಭೆಯಲ್ಲಿ ಪ್ರಧಾನಿ ಮೋದಿ ಭಾಗಿ, ವೇದಿಕೆಯಲ್ಲಿ ರಾಜ್ಯಸಭಾ ಸದಸ್ಯ ಜಗ್ಗೇಶ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಜಿಲ್ಲೆಯ ಬಿಜೆಪಿ ಅಭ್ಯರ್ಥಿಗಳು ಸೇರಿದಂತೆ ಹಲವು ಮುಖಂಡರ ಉಪಸ್ಥಿತಿ.
May 05, 2023, 4:40 pm IST

ಶಿವರಾಜ್‌ ಕುಮಾರ್ ಎಲ್ಲರನ್ನೂ ಪ್ರೀತಿಸುವ ಮನುಷ್ಯ

ಶಿವರಾಜ್‌ ಕುಮಾರ್ ಎಲ್ಲರನ್ನೂ ಪ್ರೀತಿಸುವ ಮನುಷ್ಯ, ಯಾರೇ ಕರೆದರೂ ಅವರು ಹೋಗುತ್ತಾರೆ, ಅವರದ್ದು ದೇವರಂತ ಮನಸು. ಅಣ್ಣಾವ್ರ ಮನೆಯಲ್ಲಿ ಅವರು ದೊಡ್ಡ ಮಗ, ಅವರದ್ದು ದೊಡ್ಡ ಮನಸ್ಸು ಅವರ ಬಗ್ಗೆ ಯಾರೂ ಮಾತನಾಡಬಾರು. ಅವರ ಬಗ್ಗೆ ನಾವು ಮಾತನಾಡೋದೆ ತಪ್ಪು. ವರುಣಾದಲ್ಲಿ ಸಿದ್ದರಾಮಯ್ಯ ಪರ ಪ್ರಚಾರ ಮಾಡುತ್ತಾ ದುನಿಯಾ ವಿಜಯ್.
May 05, 2023, 3:33 pm IST

ಬಳ್ಳಾರಿಯಲ್ಲಿ ಮೋದಿ: ಭಾಷಣಕ್ಕೂ ಮೊದಲು ಹುಲಿಕುಂಟೆ ಆಂಜನೇಯ ಸ್ವಾಮಿ ನೆನೆದ ಪ್ರಧಾನಿ

ಬಳ್ಳಾರಿಯಲ್ಲಿ ನಡೆದ ನವ ಕರ್ನಾಟಕ ಸಂಕಲ್ಪ ಸಮಾವೇಶದಲ್ಲಿ ಬಿಜೆಪಿ ನಾಯಕರು ಬಳ್ಳಾರಿ ನಗರದ ಅಧಿದೇವತೆ ಆಗಿರುವ ಕನಕ ದುರ್ಗಮ್ಮ ದೇವಿಯ ಮೂರ್ತಿಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಗೆ ನೆನಪಿನ ಕಾಣಿಕೆಯಾಗಿ ನೀಡಿದರು. ಬಳ್ಳಾರಿ ಸಮಾವೇಶದಲ್ಲಿ ಭಜರಂಗ ಬಲಿ, ಆಂಜನೇಯ ಸ್ವಾಮಿಗೆ ಘೋಷಣೆ ಕೂಗುದರ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಷಣ ಆರಂಭಿಸಿದರು. ಬಳ್ಳಾರಿಯ ನನ್ನ ಸಹೋದರರ ಸಹೋದರಿಯರಿಗೆ ನನ್ನ ಸಮಸ್ಕಾರ ಎಂದು ಕನ್ನಡದಲ್ಲಿ ಹೇಳಿದ ಪ್ರಧಾನಿ ಮೋದಿ ದುರ್ಗಮ್ಮ, ಕುಮಾರಸ್ವಾಮಿ ದೇವರಿಗೆ ನಮಸ್ಕರಿಸಿದರು. ಈ ಜಿಲ್ಲೆಯ ಕ್ಷೇತ್ರಗಳಿಗೆ ಆಂಜನೇಯ ವಿಶೇಷ ಆಶೀರ್ವಾದ ಇದೆ ಎಂದು ಹುಲಿಕುಂಟೆ ಆಂಜನೇಯ ಸ್ವಾಮಿಯನ್ನು ನೆನೆದರು. ದೇಶದ ಆಡಳಿತದ ಭ್ರಷ್ಟಾಚಾರಕ್ಕೆ ಕಾಂಗ್ರೆಸ್ ಕಾರಣವಾಗಿದೆ. ಸುಳ್ಳು ಸರ್ವೇ ಮತ್ತು ಸುಳ್ಳು ಸುದ್ದಿ ಸೃಷ್ಟಿ ಮಾಡಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್‌ಗೆ ಆಗದು. ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯು ನಿಷೇಧ ಮತ್ತು ತುಷ್ಟೀಕರಣ ಬಂಡಲ್ ಆಗಿದೆ. ಪ್ರಣಾಳಿಕೆಯಲ್ಲಿ ಅದು ರದ್ದು ಮಾಡಬೇಕು, ನಿಷೇಧ ಮಾಡಬೇಕೆಂದು ಎಂದು ಹೇಳಿದೆ. ಕಾಂಗ್ರೆಸ್‌ ಬುಡವು ಅಲುಗಾಡುತ್ತಿದೆ. ದೇಶದ ಜನರು ನೋಡುತ್ತಿದ್ದಾರೆ ಎಂದು ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದರು.
May 05, 2023, 3:15 pm IST

"ಲಿಂಗಾಯತರ ಅಗತ್ಯವಿಲ್ಲ" ಎಂಬುದನ್ನು ಬಿಜೆಪಿ ಕ್ರಿಯೆಯಲ್ಲೂ ತೋರಿಸಿದೆ.
May 05, 2023, 2:37 pm IST

ಕಾಫಿನಾಡಲ್ಲಿ ದೇವೇಗೌಡರ ಮತ ಬೇಟೆ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಜೆಡಿಎಸ್‌ ಅಭ್ಯರ್ಥಿಗಳ ಪರ ಮತ ಬೇಟೆ ಆರಂಭಿಸಿದ್ದಾರೆ. ಇಂದು ಶೃಂಗೇರಿಗೆ ಆಗಮಿಸಿದ ಪ್ರಧಾನಿ ದೇವೇಗೌಡರು ಶೃಂಗೇರಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸುಧಾಕರ್ ಶೆಟ್ಟಿ ಪರ ಮತಯಾಚನೆ ಮಾಡಿದ್ದಾರೆ. ಶೃಂಗೇರಿ ಪಟ್ಟಣದ ಗೌರಿಶಂಕರ ಸಮುದಾಯದ ಭವನದಲ್ಲಿ ಜೆಡಿಎಸ್‌ ಕಾರ್ಯಕರ್ತರ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ದೇವೇಗೌಡರು ಸೇರಿದಂತೆ ಪಕ್ಷದ ಮುಖಂಡರು ಭಾಗಿಯಾಗಲಿದ್ದಾರೆ. ಮತಯಾಚನೆ ಬಳಿಕ ದೇವೇಗೌಡರು ಶೃಂಗೇರಿ ದೇವಸ್ಥಾನಕ್ಕೆ ತೆರಳಿ ಶಾರದಾಂಬೆಯ ದರ್ಶನ ಪಡೆಯಲಿದ್ದಾರೆ.
May 05, 2023, 2:30 pm IST

ಸಕಲೇಶಪುರದಲ್ಲಿ ಬಿಎಸ್‌ವೈ ರೋಡ್‌ ಶೋ: ಜೋಳದ ಹಾರ ಹಾಕಿ ಅದ್ಧೂರಿ ಸ್ವಾಗತ

ಹಾಸನ: ಜಿಲ್ಲೆಯ ಚುನಾವಣಾ ಕಣ ರಂಗೇರಿದ್ದು, ಸಕಲೇಶಪುರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಮಾಜಿ ಸಿಎಂ ‌ಯಡಿಯೂರಪ್ಪ ಭರ್ಜರಿ ಪ್ರಚಾರ ನಡೆಸಿದ್ದಾರೆ. ಬಿಜೆಪಿ ಅಭ್ಯರ್ಥಿ ಸಿಮೆಂಟ್ ಮಂಜು ಪರ ರೋಡ್ ಶೋ ನಡೆಸಿದ ‌ಯಡಿಯೂರಪ್ಪ ಬಿಜೆಪಿ ಅಭ್ಯರ್ಥಿಗೆ ಮತ ನೀಡುವಂತೆ ಮತದಾರರಲ್ಲಿ ಮನವಿ ಮಾಡಿದ್ದಾರೆ. ಸಕಲೇಶಪುರ ಪಟ್ಟಣದ ಹಳೇ ಬಸ್ ನಿಲ್ದಾಣ ಬಳಿ ಬಿಜೆಪಿ ಕಾರ್ಯಕರ್ತರು ತಮ್ಮ ನೆಚ್ಚಿನ ನಾಯಕ ಮಾಜಿ ಸಿಎಂ ‌ಯಡಿಯೂರಪ್ಪ ಅವರಿಗೆ ಕ್ರೇನ್ ಮೂಲಕ ಸುಮಾರು ಮುನ್ನೂರು ಕೆಜಿ ಜೋಳದ ಹಾರ ಹಾಕಿ ಅದ್ಧೂರಿಯಾಗಿ ಸ್ವಾಗತಿಸಿಕೊಂಡಿದ್ದಾರೆ.
May 05, 2023, 1:19 pm IST

Karnataka Elections : 4 ಲಕ್ಷಕ್ಕೂ ಅಧಿಕ ಮತದಾರರು ಇರುವ 8 ಕ್ಷೇತ್ರಗಳ ಪಟ್ಟಿ

ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಮೇ ಹತ್ತರಂದು ಚುನಾವಣೆ ನಡೆಯಲಿದ್ದು, ಮೇ 13ರಂದು ಫಲಿತಾಂಶ ಹೊರಬೀಳಲಿದೆ. ಕೇಂದ್ರ ಚುನಾವಣಾ ಆಯೋಗವು ಕ್ಷೇತ್ರಾವಾರು ಮತದಾರರ ಪಟ್ಟಿಯನ್ನು ಅಂತಿಮಗೊಳಿಸಿದೆ. ರಾಜ್ಯದ ಕೆಲವು ಕ್ಷೇತ್ರದಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚಿನ ಮತದಾರರು ಇದ್ದಾರೆ.
May 05, 2023, 1:16 pm IST

ಪ್ರಧಾನಿ ನರೇಂದ್ರ ಮೋದಿ ಶನಿವಾರ ಬೆಂಗಳೂರು ನಗರದಲ್ಲಿ ರೋಡ್ ಶೋ ನಡೆಸಿ ಚುನಾವಣಾ ಪ್ರಚಾರ ಮಾಡಲಿದ್ದಾರೆ.
May 05, 2023, 12:42 pm IST

ಮೋದಿ ರೋಡ್ ಶೋಗೆ ಅಡ್ಡಿಪಡಿಸಲು ಕಾಂಗ್ರೆಸ್ ಷಡ್ಯಂತ್ರ

ನಾಳೆಯ ರೋಡ್ ಶೋಗೆ ಅಡ್ಡಿಪಡಿಸಲು ಕಾಂಗ್ರೆಸ್ ಷಡ್ಯಂತ್ರ ಮಾಡುತ್ತಿದೆ. ಅವರದೇ ಕಾರ್ಯಕರ್ತರ ಆ್ಯಂಬುಲೆನ್ಸ್‍ಗಳನ್ನು ರೋಡ್ ಶೋ ಮಾರ್ಗದಲ್ಲಿ ಓಡಿಸುವುದಾಗಿ ತಿಳಿದು ಬಂದಿದೆ. ಈ ನಿಟ್ಟಿನಲ್ಲಿ ರೋಗಿಗಳಿರುವ ಆ್ಯಂಬುಲೆನ್ಸ್‍ಗಳನ್ನು ಪೊಲೀಸರು ಖುದ್ದು ಆಸ್ಪತ್ರೆಗಳವರೆಗೆ ಬಿಡುವಂತೆ ಮನವಿ ಮಾಡಲಾಗಿದೆ ಎಂದು ಶೋಭಾ ಕರಂದ್ಲಾಜೆ ತಿಳಿಸಿದರು.
May 05, 2023, 12:42 pm IST

ರಾಜ್ಯದ ಅತ್ಯಂತ ಶ್ರೀಮಂತ ಅಭ್ಯರ್ಥಿಗಳು

ಎಡಿಆರ್ ಶ್ರೀಮಂತ ಅಭ್ಯರ್ಥಿಗಳ ವಿವರವನ್ನು ಬಹಿರಂಗಪಡಿಸಿದ್ದು, ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಯೂಸುಫ್ ಷರೀಫ್ ಅಲಿಯಾಸ್ ಕೆಜಿಎಫ್ ಬಾಬು 1633 ಕೋಟಿ ರುಪಾಯಿ ಕೋಟಿ ರು. ಆಸ್ತಿ ಹೊಂದಿದ್ದು ಅತ್ಯಂತ ಶ್ರೀಮಂತ ಅಭ್ಯರ್ಥಿ ಎನಿಸಿಕೊಂಡಿದ್ದಾರೆ. ಹೊಸಕೋಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎನ್‌ ನಾಗರಾಜು 1609 ಕೋಟಿ ರುಪಾಯಿ ಆಸ್ತಿ ಹೊಂದಿದ್ದರೆ, ಕನಕಪುರ ಕ್ಷೇತ್ರದ ಅಭ್ಯರ್ಥಿ ಡಿ.ಕೆ. ಶಿವಕುಮಾರ್ 1413 ಕೋಟಿ ರುಪಾಯಿ ಮೌಲ್ಯದ ಆಸ್ತಿ ಹೊಂದಿದ್ದಾರೆ.
May 05, 2023, 12:16 pm IST

ಹಿರಿಯೂರು ವಿಧಾನಸಭಾ ಕ್ಷೇತ್ರದ ಶಾಸಕಿ ಹಾಗೂ ಬಿಜೆಪಿ ಅಭ್ಯರ್ಥಿ ಕೆ. ಪೂರ್ಣಿಮಾ ಶ್ರೀನಿವಾಸ್ ಅವರು ಕಮಿಷನ್ ಪಡೆದು ವಿಧಾನಸೌಧಕ್ಕೆ ಹೋಗುತ್ತಾರೆ ಎಂದು ಬಿಹಾರ ರಾಜ್ಯಸಭೆ ಸದಸ್ಯೆ ರಂಜೀತ್ ರಂಜನ್ ಯಾದವ್ ಆರೋಪಿಸಿದ್ದಾರೆ.
May 05, 2023, 12:03 pm IST

ಬಿಜೆಪಿಗೆ BSYಅವರ ಅಗತ್ಯ ಇನ್ನು ಕೆಲವೇ ದಿನ
May 05, 2023, 11:09 am IST

ನೀಟ್‌ ಪರೀಕ್ಷೆ ಹಿನ್ನೆಲೆ ಮೋದಿ ರೋಡ್‌ ಶೋ ಅದಲು-ಬದಲು; ಇಲ್ಲಿದೆ ಹೊಸ ರೂಟ್ ಮ್ಯಾಪ್​

ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರವನ್ನ ಶತಾಯುಗತಯ ಅಧಿಕಾರಕ್ಕೆ ತರಲು ಪ್ರಧಾನಿ ನರೇಂದ್ರ ಮೋದಿ ಪಣ ತೊಟ್‌ಟಿದ್ದು, ಬಿಜೆಪಿಯ ಹೈಕಮಾಂಡ್‌ ನಾಯಕರ ದಂಡು ರಾಜ್ಯಾದ್ಯಾಂತ ಅಬ್ಬರದ ಪ್ರವಾಸವನ್ನ ನಡೆಸುತ್ತಿದೆ. ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಮಾತ್ರ ಬಾಕಿ ಉಳಿದಿದ್ದು, ಕಮಲ ಕಲಿಗಳು ರಾಜ್ಯದ ಉದ್ದಗಲಕ್ಕೂ ದಂಡಯಾತ್ರೆ ಕೈಗೊಂಡಿದ್ದಾರೆ.
May 05, 2023, 11:06 am IST

ಕೊಪ್ಪಳದಲ್ಲಿ ನಿಗದಿಯಾಗಿದ್ದ ಅಮಿತ್‌ ಶಾ ಕಾರ್ಯಕ್ರಮಗಳು ರದ್ದು

ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿರುವ ಕಾರಣ ಕರ್ನಾಟಕದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭಾಗಿಯಾಗಬೇಕಿದ್ದ ಚುನಾವಣಾ ಪ್ರಚಾರ ಕಾರ್ಯಕ್ರಮಗಳು ರದ್ದಾಗಿದೆ. ಅಮಿತ್ ಶಾ ಮಧ್ಯಾಹ್ನ 2.30ಕ್ಕೆ ಮಸ್ಕಿಯಿಂದ ಕಾರಟಗಿಗೆ ಬಂದು ಎಪಿಎಂಸಿ ಗೇಟ್‌ನಿಂದ ಪುರಸಭೆ ಕಾರ್ಯಾಲಯದ ತನಕ ಒಂದು ಕಿ.ಮೀ. ರೋಡ್ ಶೋ ನಡೆಸಿ ಬಳಿಕ ಕನಕಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ದಡೇಸೂಗೂರು ಪರ ಮತಯಾಚನೆ ಮಾಡಬೇಕಿತ್ತು. ಬಳಿಕ ಹೆಲಿಕಾಪ್ಟರ್ ಮೂಲಕ ಸಂಜೆ 4 ಗಂಟೆಗೆ ಕುಷ್ಟಗಿಗೆ ಬಂದು ವೇದಿಕೆ ಕಾರ್ಯಕ್ರಮದ ಮೂಲಕ ಬಿಜೆಪಿ ಅಭ್ಯರ್ಥಿ ದೊಡ್ಡನಗೌಡ ಪಾಟೀಲ ಪರ ಮತಯಾಚಿಸಬೇಕಿತ್ತು. 5.30ಕ್ಕೆ ಕೊಪ್ಪಳದಲ್ಲಿ ರೋಡ್ ಶೋ ನಿಗದಿಯಾಗಿತ್ತು. ಆದರೆ ಸದ್ಯ ಅಮಿತ್ ಶಾ ಅವರ ಜಿಲ್ಲೆಯ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ ಎಂದು ವರದಿಯಾಗಿದೆ.
May 05, 2023, 10:50 am IST

ಚಿಕ್ಕಬಳ್ಳಾಪುರ ಮಾತ್ರವಲ್ಲ, ರಾಜ್ಯದ ಅಭಿವೃದ್ಧಿಗೆ ಸಹಕರಿಸಿ: ಸಚಿವ ಸುಧಾಕರ್ ಪರ ನಟ ದರ್ಶನ್ ಮತ ಬೇಟೆ

ಮೇ 10ರಂದು ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರಿಗೆ ಮತ ನೀಡುವ ಮೂಲಕ ಚಿಕ್ಕಬಳ್ಳಾಪುರ ಮಾತ್ರವಲ್ಲದೆ, ಇಡೀ ರಾಜ್ಯದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಸ್ಯಾಂಡಲ್‌ವುಡ್ ನಟ ದರ್ಶನ್ ಮನವಿ ಮಾಡಿದರು.
May 05, 2023, 10:46 am IST

ತುಮಕೂರಿನಲ್ಲಿ ಮೋದಿ : ವಾಹನ ಸಂಚಾರಕ್ಕೆ ನಿರ್ಬಂಧ

ಕರ್ನಾಟಕ ಚುನಾವಣೆ ರಂಗೇರಿದೆ, ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ, ಮೇ 5ರಂದು ತುಮಕೂರಿಗೆ ಭೇಟಿ ನೀಡಲಿದ್ದು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ನರೇಂದ್ರ ಮೋದಿ ತುಮಕೂರು ಭೇಟಿ ಹಿನ್ನಲೆಯಲ್ಲಿ ಭಾರಿ ಬಿಗಿಬಂದೋಬಸ್ತ್ ಮಾಡಲಾಗಿದೆ. ವಾಹನಗಳ ಸಂಚಾರದಲ್ಲಿ ಬದಲಾವಣೆ ಮಾಡಿದ್ದು, ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಆದೇಶ ಹೊರಡಿಸಿದ್ದಾರೆ. ಬೆಳಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ನಗರದ ಬಟವಾಡಿ ಜಂಕ್ಷನ್‌ನಿಂದ ಬಿಜಿಎಸ್ ಸರ್ಕಲ್‌ವರೆಗೆ ಬಿಹೆಚ್ ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.
May 05, 2023, 10:09 am IST

ಮೇ 18 ರಂದು ಕುಮಾರಸ್ವಾಮಿ ಪ್ರಮಾಣ ವಚನ :ಎಚ್‌ ಡಿ ದೇವೇಗೌಡ

ಮೇ 10ರಂದು ಮತದಾನ ನಡೆಯಲಿದ್ದು,ಮೇ 13ಕ್ಕೆ ಮತ ಎಣಿಕೆನಡೆಯಲಿದೆ. ಇನ್ನೂ ಮೇ 18ರಂದು ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿ ಪ್ರಮಾಣ ಸ್ವೀಕರಿಸುವುದು ಶತಃಸಿದ್ಧ ಎಂದು ಜೆಡಿಎಸ್‌ ವರಿಷ್ಟ ಹೆಚ್‌ ಡಿ ದೇವೇಗೌಡರು ಭವಿಷ್ಯ ನುಡಿದಿದ್ದಾರೆ.
May 05, 2023, 9:20 am IST

ಬಿಜೆಪಿ ವಿರುದ್ಧ ಜಗದೀಶ್ ಶೆಟ್ಟರ್‌ ಕಿಡಿ

ಗದಗ: ನರಗುಂದದಲ್ಲಿ ನನ್ನ ಸಂಬಂಧಿಕರು ಹಲವು ಜನ ಇದ್ದಾರೆ. ಹಲವಾರು ಬಾರಿ ನರಗುಂದಕ್ಕೆ ಬಂದಿದ್ದೇನೆ. ಆವಾಗ ಬಿಜೆಪಿ ನಾಯಕನಾಗಿ ಬರುತ್ತಿದೆ. ಇಂದು ಕಾಂಗ್ರೆಸ್ ನಾಯಕನಾಗಿ ಬಂದಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ, ಹು-ಧಾ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹೇಳಿದರು. ನರಗುಂದ ಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಆರ್ ಯಾವಗಲ್ ಪರ ಬಹಿರಂಗ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, 30 ವರ್ಷ ತಪಸ್ಸು ಮಾಡಿ ಬಿಜೆಪಿ ಪಕ್ಷ ಕಟ್ಟಿ ಬೆಳೆಸಿದ್ದೆ. ಅಂತಹ ವ್ಯಕ್ತಿಯನ್ನು ಒತ್ತಾಯ ಪೂರ್ವಕವಾಗಿ ಹೊರಗೆ ಹಾಕಿದರು. ಅವರದ್ದು ಹಿಡನ್ ಅಜೆಂಡಾ. ಷಡ್ಯಂತ್ರ ಮಾಡಿ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ಇಲ್ಲದಂತೆ ಮಾಡಿದರು. ಏ. 12ನೇ ರಂದು ಚುನಾವಣೆ ಉಸ್ತುವಾರಿಗಳು ನನಗೆ ಕಾಲ್ ಮಾಡಿ ಹೇಳಿದಾಗ ಬಹಳ ಅಚ್ಚರಿ ಆಯ್ತು. ಜೊತೆಗೆ ಬೇಜಾರು ಆಯ್ತು ಎಂದರು.
May 05, 2023, 8:38 am IST

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರಿಂದ ವರುಣಾದಲ್ಲಿ ಮತಬೇಟೆ
May 05, 2023, 8:37 am IST

ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ 11 ಗಂಟೆಗೆ ಹೊನ್ನಾಳಿ, 1 ಗಂಟೆಗೆ ಚನ್ನಗಿರಿ, ಮಧ್ಯಾಹ್ನ 3 ಗಂಟೆಗೆ ಭದ್ರಾವತಿ ಮತ್ತು ಸಂಜೆ 5.30ಕ್ಕೆ ಮೂಡಿಗೆರೆಯಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.
May 05, 2023, 8:35 am IST

ದೇವೇಗೌಡ್ರ ಚುನಾವಣಾ ಪ್ರಚಾರ

ಕೆ.ಆರ್.ಪೇಟೆ, ಶೃಂಗೇರಿ, ಮೂಡಿಗೆರೆ, ಚನ್ನಪಟ್ಟಣ ,ರಾಮನಗರದಲ್ಲಿ ಹೆಚ್‌. ಡಿ. ದೇವೇಗೌಡರ ಪ್ರಚಾರ. ಚಾಮುಂಡೇಶ್ವರಿ, ತಿ.ನರಸೀಪುರ, ಹನೂರು, ಕೊಳ್ಳೆಗಾಲ, ಚಾಮರಾಜನಗರ, ನಂಜನಗೂಡಿನಲ್ಲಿ ಇಂದು ಸುದೀಪ್‌ ಪ್ರಚಾರ. ಹೊನ್ನಾಳಿ, ಚನ್ನಗಿರಿ, ಭದ್ರಾವತಿ, ಮೂಡಿಗೆರೆಯಲ್ಲಿ ಡಿ.ಕೆ.ಶಿವಕುಮಾರ್‌ ಪ್ರಚಾರ
May 05, 2023, 8:34 am IST

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ 12 ಗಂಟೆಗೆ ಅಫಜಲಪುರ, 2.30 ಯಡ್ರಾಮಿ, 5 ಗಂಟೆಗೆ ಗುಲ್ಬರ್ಗ ದಕ್ಷಿಣ ಮತ್ತು 6.30ಕ್ಕೆ ಗುಲ್ಬರ್ಗ ಉತ್ತರದಲ್ಲಿ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದು, ಪಕ್ಷದ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಲಿದ್ದಾರೆ.
May 05, 2023, 8:10 am IST

ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ರಾಜ್ಯಕ್ಕೆ ಆಗಮಿಸಲಿದ್ದಾರೆ. ಬಳ್ಳಾರಿಯಲ್ಲಿ ಅವರು ಮಧ್ಯಾಹ್ನ 2 ಗಂಟೆಗೆ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ಸಂಜೆ 4.30ಕ್ಕೆ ತುಮಕೂರಿನಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲಿದ್ದಾರೆ.
May 05, 2023, 8:05 am IST

ಮಾಜಿ ಮುಖ್ಯಮಂತ್ರಿ, ವರುಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಕ್ಷೇತ್ರದ ಹಲವು ಕಡೆ ಶುಕ್ರವಾರ ರೋಡ್ ಶೋ ಮೂಲಕ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಮತ್ತೊಂದು ಕಡೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹ ವರುಣದಲ್ಲಿ ಇಂದು ಬಿಜೆಪಿಯ ಅಭ್ಯರ್ಥಿ ವಿ. ಸೋಮಣ್ಣ ಪರವಾಗಿ ಮತಯಾಚನೆ ಮಾಡಲಿದ್ದಾರೆ.
READ MORE

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+