ಕರ್ನಾಟಕದಲ್ಲಿ ಬಿಜೆಪಿ ಆಡಳಿತವನ್ನು ಮಾರಾಟ ಮಾಡಿದೆ: ಕಾಂಗ್ರೆಸ್
ನವದೆಹಲಿ, ಮೇ 5: ಕರ್ನಾಟಕದಲ್ಲಿ ನಿರ್ಗಮಿಸುತ್ತಿರುವ ಬಿಜೆಪಿ ಸರ್ಕಾರವನ್ನು ಭ್ರಷ್ಟ ಎಂದು ಶುಕ್ರವಾರ ಬಣ್ಣಿಸಿರುವ ಕಾಂಗ್ರೆಸ್ ರಾಜ್ಯದಲ್ಲಿ ಆಡಳಿತವನ್ನು ಪಕ್ಷ ಮಾರಾಟ ಮಾಡಿದೆ ಎಂದು ಆರೋಪಿಸಿದೆ.
ಇದು ಕರ್ನಾಟಕದಲ್ಲಿ ಬಿಜೆಪಿಯು ಆಡಳಿತವನ್ನು ಮಾರಿಕೊಂಡ ದರ.
— Jairam Ramesh (@Jairam_Ramesh) May 5, 2023
ಇದುವೇ ಬಿಜೆಪಿಯ ದೆಹಲಿಯ ಸುಳ್ಳು ಸರಕಾರ ಮತ್ತು ಬೆಂಗಳೂರಿನ ಲೂಟಿ ಸರಕಾರದ ಡಬಲ್ ಎಂಜಿನ್! pic.twitter.com/hRQ90UkBlL
ಮೇ 10 ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ, ಬಿಜೆಪಿ ಸರ್ಕಾರವನ್ನು "ಟ್ರಬಲ್ ಇಂಜಿನ್" ಎಂದು ಕರೆದಿರುವ ಕಾಂಗ್ರೆಸ್ 2019 ಮತ್ತು 2023 ರ ನಡುವೆ ರಾಜ್ಯದಲ್ಲಿ ಭ್ರಷ್ಟಾಚಾರದ ದರವನ್ನು ಪಟ್ಟಿ ಮಾಡುವ ಪೋಸ್ಟರ್ಗಳನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ.

ಚುನಾವಣೆಗೆ ಪ್ರಚಾರ ಆರಂಭಕ್ಕಿಂತಲೂ ಮುಂಚೆಯಿಂದಲೂ 40 ಪರ್ಸೆಂಟ್ ಕಮಿಷನ್ ಸರ್ಕಾರ್ ಎಂದು ಕರ್ನಾಟಕದ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸುತ್ತಿದೆ. ಈ ಹಿಂದೆ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಾವು ಕೈಗೊಂಡಿರುವ ಸಿವಿಲ್ ಕಾಮಗಾರಿಗಳಿಗೆ ಶೇ.40ರಷ್ಟು ಕಮಿಷನ್ ನೀಡುವಂತೆ ಒತ್ತಾಯಿಸಿದ್ದರು ಎಂದು ಆರೋಪಿಸಿರುವ ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಸಾವಿನ ನಂತರ ದಕ್ಷಿಣ ರಾಜ್ಯದಲ್ಲಿ ಶೇ.40 ಕಮಿಷನ್ ಆರೋಪ ನಡೆಯುತ್ತಾ ಬಂದಿದೆ.
ಕಾಂಗ್ರೆಸ್, ಸಂವಹನ, ಪ್ರಧಾನ ಕಾರ್ಯದರ್ಶಿ ಬಿಡುಗಡೆ ಮಾಡಿರುವ ಭ್ರಷ್ಟಾಚಾರದ ಪೋಸ್ಟರ್ನ ಫೋಟೋವನ್ನು ಪೋಸ್ಟ್ ಮಾಡಿದ ಜೈರಾಮ್ ರಮೇಶ್, "ಕರ್ನಾಟಕದಲ್ಲಿ ಬಿಜೆಪಿ ಆಡಳಿತವನ್ನು ಮಾರಾಟ ಮಾಡಿದ ದರ. ಇದು ದೆಹಲಿ ಜೂಟ್' ಮತ್ತು ಬೆಂಗಳೂರು ಲೂಟ್" ಬಿಜೆಪಿ ಡಬಲ್ ಎಂಜಿನ್ ಆಗಿದೆ ಎಂದು ಆರೋಪಿಸಿದ್ದಾರೆ.
ಕರ್ನಾಟಕ ಉಸ್ತುವಾರಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಟ್ವೀಟ್ ಮಾಡಿ, "ಬಿಜೆಪಿಯಲ್ಲಿ '40' ಅಂಕಿ ಬೇರೂರಿದೆ! ಇಂದು ಬೆಂಗಳೂರಿನಲ್ಲಿ ಪ್ರಧಾನಿ ನಡೆಸಿದ 40 ಕಿಮೀ ರೋಡ್ಶೋ 40 ಪ್ರತಿಶತ ಬಿಜೆಪಿ ಸರ್ಕಾರದ ಸಂಕೇತವನ್ನು ಬಿಂಬಿಸುವಂತಿದೆ. ಮಣಿಪುರ ಹೊತ್ತಿ ಉರಿಯುತ್ತಿದ್ದರೂ ಪ್ರಧಾನಿ ಮೋದಿ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದಾರೆ. ಇದು ಪ್ರಧಾನಿ ರಾಜಧರ್ಮವನ್ನು ಅನುಸರಿಸುತ್ತಿದೆಯೇ?" ಎಂದು ಪ್ರಶ್ನಿಸಿದ್ದಾರೆ.
ದಕ್ಷಿಣ ಭಾರತದಲ್ಲಿ ಕೇಸರಿ ಪಕ್ಷ ಅಧಿಕಾರದಲ್ಲಿರುವ ಏಕೈಕ ರಾಜ್ಯವಾದ ಕರ್ನಾಟಕದಲ್ಲಿ ಬಿಜೆಪಿಯಿಂದ ಅಧಿಕಾರವನ್ನು ಕಸಿದುಕೊಳ್ಳಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಕರ್ನಾಟಕ ವಿಧಾನಸಭಾ ಚುನಾವಣೆ ಮೇ 10ರಂದು ನಡೆಯಲಿದ್ದು, 13ಕ್ಕೆ ಫಲಿತಾಂಶ ಹೊರಬೀಳಲಿದೆ.












Click it and Unblock the Notifications