ಹಿನ್ನೆಡೆಯಲ್ಲಿ ಬಿಜೆಪಿ: ಬೆಳ್ಳಂಬೆಳಿಗ್ಗೆಯೇ ಎದ್ದು ಕಾಣುತ್ತಿದೆ ಜಗದೀಶ್‌ ಶೆಟ್ಟರ್ 'ಒಳಹೊಡತ'ದ ಮಾತು

ಬೆಂಗಳೂರು, ಮೇ 13: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ( Karnataka Assembly Election Results ) ಹೊರಬರುತ್ತಿದೆ. ಆರಂಭದ ಹಂತದಲ್ಲಿ ಕಾಂಗ್ರೆಸ್‌ ಮುನ್ನೆಡೆ ಸಾಧಿಸುತ್ತಿದೆ. ಅದರಲ್ಲೂ ಉತ್ತರ ಕರ್ನಾಟಕದಲ್ಲಿ ಬಿಜೆಪಿಗೆ ಹಿನ್ನೆಡೆಯಾಗಿದೆ. ಲಿಂಗಾಯತ ಪ್ರಭಾವವಿರುವ ಪ್ರದೇಶದಲ್ಲಿ ಕೇಸರಿ ಪಾಳಯಕ್ಕೆ ಹಿನ್ನಡೆ ಉಂಟಾಗಿರುವುದು ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ.

ಲಿಂಗಾಯತ ನಾಯಕರನ್ನು ಬಿಜೆಪಿ ಕಡೆಗಣಿಸಿದೆ ಎಂಬ ಮಾತುಗಳು ಚುನಾವಣೆಗೂ ಮುನ್ನ ಕೇಳಿಬಂದಿದ್ದವು. ಮಾಜಿ ಸಿಎಂ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಲಾಯಿತು. ಆ ನಂತರ ಮಾಜಿ ಸಿಎಂ ಜಗದೀಶ್ ಅವರಿಗೆ ಟಿಕೆಟ್‌ ನಿರಾಕರಿಸಲಾಯಿತು. ಮತ್ತೊಬ್ಬ ಪ್ರಮುಖ ಲಿಂಗಾಯತ ನಾಯಕ ಲಕ್ಷ್ಮಣ ಸವದಿ ಅವರಿಗೂ ಟಿಕೆಟ್‌ ನಿರಾಕರಿಸಲಾಯಿತು. ಅವರಿಬ್ಬರೂ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಗೊಂಡರು. ಇದು ಬಿಜೆಪಿಗೆ ಭಾರೀ ಆಘಾತವನ್ನು ಉಂಟುಮಾಡಿದೆ.

Karnataka Poll Results BJP Trailing

ಚುನಾವಣಾ ಪೂರ್ವ ಹಿನ್ನಡೆಯು ಈಗ ಫಲಿತಾಂಶದಲ್ಲೂ ಎದ್ದು ಕಾಣುತ್ತಿದೆ. ಕಾಂಗ್ರೆಸ್‌ನಿಂದ ಸ್ಪರ್ಧಿಸಿರುವ ಜಗದೀಶ್‌ ಶೆಟ್ಟರ್‌ ಅವರು ಈ ಭಾರಿ ಕಾಂಗ್ರೆಸ್‌ ಜಯಭೇರಿ ಬಾರಿಸಲಿದೆ. ಬಿಜೆಪಿಗೆ ಒಳಹೊಡೆತ ಹಾಗೂ ಹೊರಹೊಡೆತ ಎರಡೂ ಬೀಳಲಿವೆ ಎಂದಿದ್ದರು. ಅದು ಮೊದಲ ಹಂತದ ಮತ ಎಣಿಕೆ ಪ್ರಕ್ರಿಯೆಯಲ್ಲಿ ಎದ್ದು ಕಾಣುತ್ತಿದೆ.

ಬಿಜೆಪಿ ವಿರುದ್ಧ ಹರಿಹಾಯ್ದಿರುವ ಅವರು, 'ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈಗ 73 ವರ್ಷ. ಅವರು ನಾಲ್ಕು ಬಾರಿ ಗುಜರಾತ್ ಮುಖ್ಯಮಂತ್ರಿಯಾಗಿದ್ದರು ಮತ್ತು ಎರಡನೇ ಅವಧಿಗೆ ಪ್ರಧಾನಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು ರಾಜಕೀಯವನ್ನು ತ್ಯಜಿಸುವರೇ?' ಎಂದು ಪ್ರಶ್ನಿಸಿದ್ದಾರೆ.

Karnataka Poll Results BJP Trailing

ವಾಸ್ತವವಾಗಿ ಅವರು ಇನ್ನೊಂದು ಅವಧಿಗೆ ಪ್ರಧಾನಿಯಾಗಿ ಮುಂದುವರಿಯಬೇಕೆಂದು ನಾನು ಬಯಸುತ್ತೇನೆ. ಅದೇ ರೀತಿ, ನಾನು ಬಯಸುತ್ತೇನೆ ಜನಬೆಂಬಲ ಪಡೆಯುವವರೆಗೂ ರಾಜಕೀಯದಲ್ಲಿ ಮುಂದುವರಿಯುತ್ತೇನೆ ಎಂದು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕಾಂಗ್ರೆಸ್ ಅಭ್ಯರ್ಥಿ ಜಗದೀಶ ಶೆಟ್ಟರ್ ಗುರುವಾರ ಹೇಳಿದ್ದಾರೆ.

ಶೆಟ್ಟರ್ ಅವರು ಪಕ್ಷ ಮತ್ತು ಸರ್ಕಾರದಲ್ಲಿ ಪ್ರಮುಖ ಹುದ್ದೆಗಳನ್ನು ಅನುಭವಿಸಿ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ ಎಂಬ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಆರೋಪದ ಕುರಿತು ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.

'ಪ್ರಹ್ಲಾದ ಜೋಶಿ ಅವರು ಸಂಸದರಾಗಿ ನಾಲ್ಕನೇ ಅವಧಿಯನ್ನು ಆನಂದಿಸುತ್ತಿದ್ದಾರೆ ಮತ್ತು ಕೇಂದ್ರ ಸಚಿವರಾಗಿದ್ದಾರೆ. ಅವರು ರಾಜಕೀಯದಿಂದ ನಿವೃತ್ತಿ ಹೊಂದುತ್ತಾರೆಯೇ?' ಅವರು ಹೇಳಿದರು.

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಹಲವೆಡೆ ಬಿಜೆಪಿ ಮತದಾರರಿಗೆ ಹಣದ ಆಮಿಷ ಒಡ್ಡುತ್ತಿದೆ ಎಂದು ಶೆಟ್ಟರ್ ಆರೋಪಿಸಿದರು. 'ಚುನಾವಣೆಯಲ್ಲಿ ಸೋಲುವ ಭಯದಿಂದ ಬಿಜೆಪಿಯವರು ಮತದಾರರಿಗೆ ಹಣ ಹಂಚಿದರು. ಹಲವು ಸ್ಲಂಗಳಲ್ಲಿ ಪ್ರತಿ ವೋಟಿಗೆ 500 ರಿಂದ 1000 ರೂ.ವರೆಗೆ ಹಣ ನೀಡಿದ್ದಾರೆ ಎನ್ನಲಾಗಿದೆ. ನಾನು ಬಿಜೆಪಿಯಲ್ಲಿದ್ದಾಗ ಇಂತಹ ಚಟುವಟಿಕೆಗಳಿಗೆ ಕೈ ಹಾಕಿರಲಿಲ್ಲ, ಗೆಲ್ಲುತ್ತಿದ್ದೆ. ಚುನಾವಣಾ ಅವ್ಯವಹಾರಗಳಲ್ಲಿ ಪಾಲ್ಗೊಳ್ಳದೆ ಚುನಾವಣೆ ನಡೆಸಬೇಕು' ಎಂದು ಏಳನೇ ಬಾರಿಗೆ ಮರು ಆಯ್ಕೆ ಬಯಸಿರುವ ಶೆಟ್ಟರ್ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+