Karnataka Polls 2023: ಕೇವಲ ಎರಡೇ ಗಂಟೆಯಲ್ಲಿ ಶೇ.8.26ರಷ್ಟು ಮತದಾನ, ವಿವರ
ಬೆಂಗಳೂರು, ಮೇ 10: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಇಂದು (ಮೇ 10) ಬೆಳಗ್ಗೆ 7ಗಂಟೆಯಿಂದ ಆರಂಭವಾಗಿದೆ. ಅಲ್ಲಿಂದ 9 ಗಂಟೆವರೆಗೆ ಕೇವಲ ಎರಡು ಗಂಟೆಯಲ್ಲಿ ರಾಜ್ಯಾದ್ಯಂತ ಶೇಕಡಾ 8.26 ರಷ್ಟು ಮತದಾನ ನಡೆದಿದೆ. ಈ ಮೂಲಕ ಮತದಾನ ನಿರೀಕ್ಷಿತ ಪ್ರಮಾಣದ ವೇಗದಲ್ಲಿ ಸಾಗುತ್ತಿದೆ ಎಂದು ತಿಳಿದು ಬಂದಿದೆ.
ಬೆಳಗ್ಗೆಯಿಂದ 7ಗಂಟೆಗೆ ಮತದಾರ ಪ್ರಭುಗಳು ತಮ್ಮ ಹತ್ತಿರದ ಮತಗಟ್ಟೆಗೆ ತೆರಳಿ ಅತ್ಯುತ್ಸಾಹದಿಂದ ಮತದಾನ ಮಾಡಿದ್ದು ಕಂಡು ಬಂತು. ವಿಶೇಷವೆಂದರೆ ಮತದಾನ ಆರಂಭವಾದ ಒಂದು ಗಂಟೆಯಲ್ಲಿ ಸುಮಾರು 11ಸಾವಿರ ಯುವ ಮತದಾರರು ಹಾಗೂ 15ಸಾವಿರದಷ್ಟು ಹಿರಿಯ ನಾಗರಿಕರು ಹತ್ತಿರ ಮತಗಟ್ಟೆಗೆ ತೆರಳಿ ಮತದಾನ ಮಾಡಿದರು. ಈ ಮೂಲಕ ವೃದ್ಧರು ಇನ್ನಿತರರಿಗೆ ಮತದಾನ ಮಾಡುವಂತೆ ಪ್ರೇರೆಪಿಸಿದ್ದಾರೆ.

ರಾಜಕೀಯ ನಾಯಕರು, ನಟ-ನಟಿಯರು, ವೃದ್ಧರು, ಹೊಸ ಮತದಾರರು ಹಾಗೂ ಸಾರ್ವಜನಿಕರು ಸೇರಿದಂತೆ ಮತದಾನ ಮಾಡಿದ್ದಾರೆ. ಇದರಿಂದ ಕೇವಲ ಎರಡೇ ಗಂಟೆಯಲ್ಲಿ ಶೇಕಡಾ 8.26 ರಷ್ಟು ಮತದಾನ ವಾಗಿದೆ. ಇದೇ ರೀತಿಯ ಬಿರುಸಿನ ಮತದಾನ ಮುಂದುವರಿದೇ ಆದಷ್ಟು ಬೇಗ ಮತದಾನ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎನ್ನಲಾಗಿದೆ.
ಜನರಿಗೆ ಮಳೆಯ ಭಯ ಸಹ ಇದೆ. ಹವಾಮಾನ ಇಲಾಖೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಿದೆ. ಇದರ ಪರಿಣಾಮವಾಗಿ ಸಹ ಬೆಳ್ಳಂಬೆಳಗ್ಗೆ ಮತಗಟ್ಟೆಗೆ ಬಂದು ಜನರು ಮತ ಚಲಾಯಿಸಿದ್ದಾರೆ.

ವಧುವಿನ ನಡೆಗೆ ಪ್ರಶಂಸೆ
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯ ಮಾಕೋನಹಳ್ಳಿಯಲ್ಲಿ ಮತದಾನ ಮಾಡಿ ನಂತರ ಮಧುಮಗಳು ಹಸೆ ಮಣೆ ಏರಿದ ಅಪರೂಪದ ಹಾಗೂ ಸ್ಪೂರ್ತಿದಾಯಕ ಘಟನೆ ನಡೆದಿದೆ. ಮತದಾನ ನಮ್ಮ ಹಕ್ಕು ಎಂದು ಅರಿತಿರುವ ಆ ಮಧುಮಗಳು (ವಧು) ಹಸೆಮಣೆಗೂ ಮುನ್ನ ತಮ್ಮ ಜವಾಬ್ದಾರಿ ಮೆರೆದಿದ್ದಾರೆ. ಮದುವೆ ಸಂದರ್ಭದಲ್ಲೂ ಮತದಾನ ಮಾಡುವ ಮೂಲಕ ಅವರು ಮಾದರಿಯಾಗಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಪ್ರಶಂಸೆ ವ್ಯಕ್ತವಾಗಿದೆ.
ರಾಜರಾಜೇಶ್ವರಿ ನಗರದ ಮತಗಟ್ಟೆಗೆ ತೆರಳಿದ ನಟ ಗೋಲ್ಡನ್ ಸ್ಟಾರ್ ಗಣೇಶ್ ದಂಪತಿ ಮತದಾನ ಮಾಡಿದರು. ಅಭಿವೃದ್ಧಿ ಮಾಡಿದವರಿಗೆ ಮತ ನೀಡಿ. ಮತದಾನ ಮಾಡಿದರೆ ನಿಮ್ಮ ಸ್ಥಳದಲ್ಲಿ ಅಭಿವೃದ್ಧಿ ಆಗದಿದ್ದರೆ ಕೇಳಬಹುದು. ಆದ್ದರಿಂದ ಎಲ್ಲರೂ ಮತದಾನ ಮಾಡಿ. ಆಮಿಷಕ್ಕೆ ಒಳಗಾಗದೇ ಎಲ್ಲರೂ ಕಡ್ಡಾಯವಾಗಿ ಮತ ಹಾಕಬೇಕು ಎಂದು ಮನವಿ ಮಾಡಿದರು. ಅಲ್ಲದೇ ಮತದಾನ ಮಾಡದಿದ್ದರೆ ಅಂತವರಿಗೆ ಸರ್ಕಾರದಿಂದ ಸಿಗುವ ಸೌಲಭ್ಯ ಸ್ಥಗಿತಗೊಳಸಬೇಕು ಎನ್ನುವ ಮೂಲಕ ಮತದಾನ ಮಹತ್ವ ಸಾರಿದರು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications