Get Updates
Get notified of breaking news, exclusive insights, and must-see stories!

ಪರಮೇಶ್ವರ್‌ ಮೇಲೆ ಹಲ್ಲೆ: ಕರ್ನಾಟಕದಲ್ಲಿ ರಕ್ತಸಿಕ್ತ ರಾಜಕಾರಣ ಆರಂಭ, ಶಾ- ಬೊಮ್ಮಾಯಿಯೇ ಉತ್ತರದಾಯಿಗಳು

ಬೆಂಗಳೂರು, ಏಪ್ರಿಲ್‌ 29: ಕರ್ನಾಟಕದಲ್ಲಿ ಚುನಾವಣೆ ದಿನ ಹತ್ತಿರವಾಗುತ್ತಿದೆ. ಈ ಸಂದರ್ಭದಲ್ಲಿ ಚುನಾವಣಾ ರಣಕಣ ಪ್ರಕ್ಷುಬ್ದವಾಗುವ ಭೀತಿ ಕಾಡುತ್ತಿದೆ. ನಿನ್ನೆ ಮಾಜಿ ಡಿಸಿಎಂ ಜಿ ಪರಮೇಶ್ವರ್‌ ಅವರ ಮೇಲೆ ಕಲ್ಲಿನಿಂದ ಹಲ್ಲೆ ಮಾಡಲಾಗಿದೆ. ತುಮಕೂರಿನ ಕೊರಟಗೆರೆಯಲ್ಲಿ ನಡೆದ ಈ ಘಟನೆಯನ್ನು ಕಾಂಗ್ರೆಸ್‌ ಪಕ್ಷದ ನಾಯಕರು ತೀವ್ರವಾಗಿ ವಿರೋಧಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್‌ ನಾಯಕ ಪ್ರಿಯಾಂಕ್‌ ಖರ್ಗೆ, 'ನಮ್ಮ ಪಕ್ಷದ ಹಿರಿಯ ನಾಯಕರಾದ ಡಾ ಜಿ ಪರಮೇಶ್ವರ್‌ ಅವರ ಮೇಲೆ ನಡೆದ ಹಲ್ಲೆಯ ಮೂಲಕ ಕರ್ನಾಟಕದ ರಾಜಕಾರಣದಲ್ಲಿ ರಕ್ತಸಿಕ್ತ ಅಧ್ಯಾಯ ಬರೆಯಲು ಹೊರಟಂತಿದೆ ನಮ್ಮ ಎದುರಾಳಿಗಳು. ಸೋಲಿನ ಭೀತಿಯಲ್ಲಿರುವವರ ಹೇಡಿತನದ ರಾಜಕೀಯ ಇದು. ಗಲಭೆಯ ಬೆದರಿಕೆ ಹಾಕಿದ್ದ ಅಮಿತ್ ಶಾ ಅವರು ಹಾಗೂ ಸಿಎಂ ಬೊಮ್ಮಾಯಿಯವರು ಈ ಘಟನೆಗೆ ಉತ್ತರದಾಯಿಗಳಾಗಿದ್ದಾರೆ' ಎಂದು ವಾಗ್ದಾಳಿ ನಡೆಸಿದ್ದಾರೆ.

Karnataka Polls: Attack on Parameshwar: Hate Politics Begins in Karnataka- Priyank Kharge

ಕರ್ನಾಟಕ ಕಾಂಗ್ರೆಸ್‌ ಕಿಡಿ

'ರಾಜ್ಯದ ಕಾನೂನು ಸುವ್ಯವಸ್ಥೆಯನ್ನ ಯಾವ ಹಂತಕ್ಕೆ ತಂದಿಟ್ಟಿದ್ದೀರಿ ಆರಗ ಜ್ಞಾನೇಂದ್ರ ಅವರೇ, ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ದಾಳಿ ಮಾಡಿದವರ ಮೇಲೆ ಕ್ರಮವಿಲ್ಲ, ಜಿ ಪರಮೇಶ್ವರ ಅವರಿಗೆ ಸೂಕ್ತ ರಕ್ಷಣೆ ಇಲ್ಲ. ಇದೆಲ್ಲವೂ ಬಿಜೆಪಿಯ ವೈಫಲ್ಯವೋ, ಷಡ್ಯಂತ್ರವೋ? ಅಮಿತ್ ಶಾ ಅವರ ನಿರ್ದೇಶನದಂತೆ ಗಲಭೆಯುಕ್ತ ಕರ್ನಾಟಕ ಮಾಡಲು ತಯಾರಿಯೇ?' ಎಂದು ಪ್ರಶ್ನಿಸಿದೆ.

'ಜಿ. ಪರಮೇಶ್ವರ್ ಅವರ ಮೇಲೆ ಷಡ್ಯಂತ್ರ ರೂಪಿಸಿ ಕಲ್ಲು ತೂರಿದ ಘಟನೆಯು ಕರ್ನಾಟಕವೇ ತಲೆತಗ್ಗಿಸುವಂತಹದ್ದು. ವಿರೋಧ ಪಕ್ಷಗಳ ನಾಯಕರ ಮೊದಲಿಂದಲೂ ಮೇಲೆ ವ್ಯವಸ್ಥಿತವಾಗಿ ದಾಳಿ ನಡೆಸಲಾಗುತ್ತಿದೆ. ಇದು ಅಮಿತ್ ಶಾ ಅವರ "ಗಲಭೆ ನಡೆಯುತ್ತದೆ" ಎಂಬ ಎಚ್ಚರಿಕೆಯ ಹಿಂದಿನ ಪೂರ್ವಭಾವಿ ತಯಾರಿಗಳೇ?' ಎಂದು ಕೆಪಿಸಿಸಿ ಕೇಳಿದೆ.

'ಯುಪಿ, ಬಿಹಾರದಿಂದ ಬಿಜೆಪಿ ಬಾಡಿಗೆ ಗೂಂಡಾಗಳನ್ನು ಕರೆಸಿ ಪ್ರತಿ ಕ್ಷೇತ್ರಗಳಲ್ಲಿ ಬಿಟ್ಟಿರುವುದು ವರದಿಯಾಗಿದೆ. ಈ ಗೂಂಡಾಪಡೆ ಕಾಂಗ್ರೆಸ್ ಅಭ್ಯರ್ಥಿಗಳ ವಿರುದ್ಧ ವಿಧ್ವಂಸಕ ಕೃತ್ಯಗಳನ್ನು ನಡೆಸುವ ಷಡ್ಯಂತ್ರ ನಡೆಸಿರುವುದಕ್ಕೆ ಜಿ. ಪರಮೇಶ್ವರ್ ಅವರ ಮೇಲಿನ ಹಲ್ಲೆಯೇ ಸಾಕ್ಷಿ. ಚುನಾವಣಾ ಆಯೋಗ ಶಾಂತಿಯುತ ಮತದಾನ ನಡೆಸಲು ಕ್ರಮವಹಿಸಬೇಕು. ದಲಿತ ನಾಯಕರ ಮೇಲೆ ಬಿಜೆಪಿಗೆ ಏಕಿಷ್ಟು ದ್ವೇಷ?' ಎಂದು ಕೇಳಿದೆ.

Karnataka Polls: Attack on Parameshwar: Hate Politics Begins in Karnataka- Priyank Kharge

ಕೊರಟಗೆರೆಯ ಭೈರೇನಹಳ್ಳಿಯಲ್ಲಿ ಪರಮೇಶ್ವರ ಅವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು. ಕಾಂಗ್ರೆಸ್ನ ಮಾಜಿ ಡಿಸಿಎಂ ಮೇಲೆ ಕಲ್ಲು ತೂರಾಟ ನಡೆದಿತ್ತು. ದಾಳಿಯಲ್ಲಿ ಅವರು ಗಾಯಗೊಂಡಿದ್ದರು. 2023 ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೊರಟಗೆರೆ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ಸ್ಪರ್ಧಿಸುತ್ತಿದ್ದಾರೆ.

ಪರಮೇಶ್ವರ ಅವರು ಕೊರಟಗೆರೆಯಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ಕಲ್ಲು ತೂರಾಟ ನಡೆದಿದೆ ಎಂದು ವರದಿಯಾಗಿದೆ. ಅವರ ತಲೆಗೆ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಅವರಿಗೆ ಪ್ರಥಮ ಚಿಕಿತ್ಸೆ ನೀಡಲಾಯಿತು.

ಮೊನ್ನೆ ಏಪ್ರಿಲ್ 19 ರಂದು ಕೂಡ ಪರಮೇಶ್ವರ ಅವರು ಕೊರಟಗೆರೆ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲು ಮುಂದಾದಾಗ ಕಲ್ಲು ತೂರಾಟ ನಡೆದಿತ್ತು. ಈ ವೇಳೆ ಕಾಂಗ್ರೆಸ್ ಮುಖಂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಒಂದು ಕಲ್ಲು ಪೊಲೀಸರಿಗೆ ಬಡಿದಿದೆ. ಪ್ರಕರಣ ದಾಖಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+