ಎಕ್ಸಿಟ್ ಸಮೀಕ್ಷೆಗೂ ಎಕ್ಸಾಕ್ಟ್ ಸಮೀಕ್ಷೆಗೂ ಸಾಕಷ್ಟು ವ್ಯತ್ಯಾಸವಿದೆ: ಈ ಬಾರಿ ಮತ್ತೆ ಜನಾದೇಶ: ಮುರುಗೇಶ್ ನಿರಾಣಿ
ಬೆಂಗಳೂರು,ಮೇ13: ಯಾವುದೇ ಪಕ್ಷದ ಬೆಂಬಲವಿಲ್ಲದೆ ರಾಜ್ಯದಲ್ಲಿ ಬಿಜೆಪಿ ಸ್ವತಃ ಬಲದ ಮೇಲೆ ಅಧಿಕಾರಕ್ಕೆ ಬರಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶುಕ್ರವಾರ ಬೆಂಗಳೂರಿನಲ್ಲಿ ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಮ್ಮ ಪಕ್ಷದ ವತಿಯಿಂದ ನಡೆಸಿರುವ ಬೂತ್ ಮಟ್ಟದ ಸಮೀಕ್ಷೆಯ ಆಧಾರದಲ್ಲಿ ಬಿಜೆಪಿಗೆ 120 ಸ್ಥಾನಗಳು ಲಭಿಸಲಿವೆ. ಹೀಗಾಗಿ ನಾವೇ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಎಕ್ಸಿಟ್ ಸಮೀಕ್ಷೆಗೂ ಎಕ್ಸಾಕ್ಟ್ ಸಮೀಕ್ಷೆಗೂ ಸಾಕಷ್ಟು ವ್ಯತ್ಯಾಸವಿದೆ. ಬಿಜೆಪಿಗೆ ಈ ಬಾರಿ ಮತ್ತೆ ಜನಾದೇಶ ಬರಲಿದೆ. ನನ್ನ ಪ್ರಕಾರ ಕಲ್ಯಾಣ ಕರ್ನಾಟಕದಲ್ಲಿ15ಕ್ಕಿಂತ ಕಡಿಮೆ ಬರುವುದಿಲ್ಲ. ಬೆಂಗಳೂರಿನಲ್ಲಿ ಕೂಡ 15ಕ್ಕಿಂತ ಹೆಚ್ಚು ಸ್ಥಾನ ಗಳಿಸುತ್ತೇವೆ. ಕರಾವಳಿಯಲ್ಲಿ ಅತಿ ಹೆಚ್ಚು ಗೆಲ್ಲುತ್ತೇವೆ. ಒಟ್ಟಾರೆ ರಾಜ್ಯದ ವಿಚಾರ ತೆಗೆದುಕೊಂಡರೆ, 115 ಕ್ಕಿಂತ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ನಿಶ್ಚಿತ. ಕಾಂಗ್ರೆಸ್ ಏನೇ ಹೇಳಬಹುದು, ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ಹೇಳಿದರು
ಈಗಾಗಲೇ ಚುನಾವಣೋತ್ತರ ಸಮೀಕ್ಷೆಗಳು ಬಂದಿವೆ. ಬಹುತೇಕ ಸಮೀಕ್ಷೆಗಳು ಅತಂತ್ರ ವಿಧಾನಸಭೆಯ ಸೂಚನೆ ನೀಡಿದ್ದು, ಕೆಲವು ಕಾಂಗ್ರೆಸ್ ಮತ್ತೆ ಕೆಲವು ಬಿಜೆಪಿ ಸರ್ಕಾರದ ಸೂಚನೆ ನೀಡಿವೆ. ಆದರೆ ಈ ಹಿಂದಿನ ಸಮೀಕ್ಷೆಗಳೆಲ್ಲಾ ಸುಳ್ಳಾಗಿವೆ. 2018ರಲ್ಲಿಯೂ ಬಿಜೆಪಿಗೆ 100 ಸ್ಥಾನ ಯಾವ ಸಮೀಕ್ಷಾ ವರದಿಗಳೂ ನೀಡಿರಲಿಲ್ಲ. ಆದರೆ ನಾವು 104 ಬಂದಿದ್ದೆವು. ಹಾಗಾಗಿ 2023ರ ಮತಗಟ್ಟೆ ಸಮೀಕ್ಷೆಗಳು ಸತ್ಯಕ್ಕೆ ದೂರವಾದವು ಎಂದರು.

ಫಲಿತಾಂಶ ಪ್ರಕಟವಾಗುವ ಶನಿವಾರದ ನಂತರ ಹೊಸ ಸರ್ಕಾರ ರಚನೆ ಮಾಡುತ್ತೇವೆ. ಹಿರಿಯರ ಜೊತೆ ಕುಳಿತು ಮುಂದಿನ ನಡೆ ಬಗ್ಗೆ ಮಾತನಾಡುತ್ತೇವೆ. ವರಿಷ್ಠರ ಜೊತೆ ಮಾತನಾಡುವ ಮೊದಲು ಪೂರ್ವಭಾವಿಯಾಗಿ ಮಾತುಕತೆ ನಡೆಸಿದ್ದೇವೆ. ಕಾಂಗ್ರೆಸ್ ಪಕ್ಷದವರು 140 ಸ್ಥಾನ ಗೆಲ್ಲುತ್ತೇವೆ ಎನ್ನುತ್ತಿದ್ದಾರೆ. ಆದರೆ ಗೆಲ್ಲುವ ಕ್ಷೇತ್ರಗಳ ಪಟ್ಟಿ ಕೊಡಲಿ ಎಂದು ಕಾಂಗ್ರೆಸ್ ನಾಯಕರಿಗೆ ಸಚಿವ ಮುರುಗೇಶ್ ನಿರಾಣಿ ಸವಾಲು ಹಾಕಿದರು.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ












Click it and Unblock the Notifications