ಎಕ್ಸಿಟ್ ಸಮೀಕ್ಷೆಗೂ ಎಕ್ಸಾಕ್ಟ್ ಸಮೀಕ್ಷೆಗೂ ಸಾಕಷ್ಟು ವ್ಯತ್ಯಾಸವಿದೆ: ಈ ಬಾರಿ ಮತ್ತೆ ಜನಾದೇಶ: ಮುರುಗೇಶ್ ನಿರಾಣಿ
ಬೆಂಗಳೂರು,ಮೇ13: ಯಾವುದೇ ಪಕ್ಷದ ಬೆಂಬಲವಿಲ್ಲದೆ ರಾಜ್ಯದಲ್ಲಿ ಬಿಜೆಪಿ ಸ್ವತಃ ಬಲದ ಮೇಲೆ ಅಧಿಕಾರಕ್ಕೆ ಬರಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶುಕ್ರವಾರ ಬೆಂಗಳೂರಿನಲ್ಲಿ ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಮ್ಮ ಪಕ್ಷದ ವತಿಯಿಂದ ನಡೆಸಿರುವ ಬೂತ್ ಮಟ್ಟದ ಸಮೀಕ್ಷೆಯ ಆಧಾರದಲ್ಲಿ ಬಿಜೆಪಿಗೆ 120 ಸ್ಥಾನಗಳು ಲಭಿಸಲಿವೆ. ಹೀಗಾಗಿ ನಾವೇ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಎಕ್ಸಿಟ್ ಸಮೀಕ್ಷೆಗೂ ಎಕ್ಸಾಕ್ಟ್ ಸಮೀಕ್ಷೆಗೂ ಸಾಕಷ್ಟು ವ್ಯತ್ಯಾಸವಿದೆ. ಬಿಜೆಪಿಗೆ ಈ ಬಾರಿ ಮತ್ತೆ ಜನಾದೇಶ ಬರಲಿದೆ. ನನ್ನ ಪ್ರಕಾರ ಕಲ್ಯಾಣ ಕರ್ನಾಟಕದಲ್ಲಿ15ಕ್ಕಿಂತ ಕಡಿಮೆ ಬರುವುದಿಲ್ಲ. ಬೆಂಗಳೂರಿನಲ್ಲಿ ಕೂಡ 15ಕ್ಕಿಂತ ಹೆಚ್ಚು ಸ್ಥಾನ ಗಳಿಸುತ್ತೇವೆ. ಕರಾವಳಿಯಲ್ಲಿ ಅತಿ ಹೆಚ್ಚು ಗೆಲ್ಲುತ್ತೇವೆ. ಒಟ್ಟಾರೆ ರಾಜ್ಯದ ವಿಚಾರ ತೆಗೆದುಕೊಂಡರೆ, 115 ಕ್ಕಿಂತ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ನಿಶ್ಚಿತ. ಕಾಂಗ್ರೆಸ್ ಏನೇ ಹೇಳಬಹುದು, ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ಹೇಳಿದರು
ಈಗಾಗಲೇ ಚುನಾವಣೋತ್ತರ ಸಮೀಕ್ಷೆಗಳು ಬಂದಿವೆ. ಬಹುತೇಕ ಸಮೀಕ್ಷೆಗಳು ಅತಂತ್ರ ವಿಧಾನಸಭೆಯ ಸೂಚನೆ ನೀಡಿದ್ದು, ಕೆಲವು ಕಾಂಗ್ರೆಸ್ ಮತ್ತೆ ಕೆಲವು ಬಿಜೆಪಿ ಸರ್ಕಾರದ ಸೂಚನೆ ನೀಡಿವೆ. ಆದರೆ ಈ ಹಿಂದಿನ ಸಮೀಕ್ಷೆಗಳೆಲ್ಲಾ ಸುಳ್ಳಾಗಿವೆ. 2018ರಲ್ಲಿಯೂ ಬಿಜೆಪಿಗೆ 100 ಸ್ಥಾನ ಯಾವ ಸಮೀಕ್ಷಾ ವರದಿಗಳೂ ನೀಡಿರಲಿಲ್ಲ. ಆದರೆ ನಾವು 104 ಬಂದಿದ್ದೆವು. ಹಾಗಾಗಿ 2023ರ ಮತಗಟ್ಟೆ ಸಮೀಕ್ಷೆಗಳು ಸತ್ಯಕ್ಕೆ ದೂರವಾದವು ಎಂದರು.

ಫಲಿತಾಂಶ ಪ್ರಕಟವಾಗುವ ಶನಿವಾರದ ನಂತರ ಹೊಸ ಸರ್ಕಾರ ರಚನೆ ಮಾಡುತ್ತೇವೆ. ಹಿರಿಯರ ಜೊತೆ ಕುಳಿತು ಮುಂದಿನ ನಡೆ ಬಗ್ಗೆ ಮಾತನಾಡುತ್ತೇವೆ. ವರಿಷ್ಠರ ಜೊತೆ ಮಾತನಾಡುವ ಮೊದಲು ಪೂರ್ವಭಾವಿಯಾಗಿ ಮಾತುಕತೆ ನಡೆಸಿದ್ದೇವೆ. ಕಾಂಗ್ರೆಸ್ ಪಕ್ಷದವರು 140 ಸ್ಥಾನ ಗೆಲ್ಲುತ್ತೇವೆ ಎನ್ನುತ್ತಿದ್ದಾರೆ. ಆದರೆ ಗೆಲ್ಲುವ ಕ್ಷೇತ್ರಗಳ ಪಟ್ಟಿ ಕೊಡಲಿ ಎಂದು ಕಾಂಗ್ರೆಸ್ ನಾಯಕರಿಗೆ ಸಚಿವ ಮುರುಗೇಶ್ ನಿರಾಣಿ ಸವಾಲು ಹಾಕಿದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications