Congress: 32 ಕ್ಷೇತ್ರಕ್ಕೆ ಇಬ್ಬರು, 7 ಕ್ಷೇತ್ರಕ್ಕೆ ನಾಲ್ವರ ಹೆಸರು ಕಳಿಸಿದ ರಾಜ್ಯ ಸಮಿತಿ- ದೆಹಲಿಯಲ್ಲಿಂದು 2ನೇ ಪಟ್ಟಿ ಸಿದ್ಧ

ನವದೆಹಲಿ, ಏಪ್ರಿಲ್‌ 04: ಬಾಕಿ ಉಳಿದಿರುವ 100 ಸ್ಥಾನಗಳಿಗೆ ಪಕ್ಷದ ಅಭ್ಯರ್ಥಿಗಳ ಬಗ್ಗೆ ಚರ್ಚಿಸಲು ಕಾಂಗ್ರೆಸ್ ( Congress ) ಕೇಂದ್ರ ಚುನಾವಣಾ ಸಮಿತಿ ( CEC ) ಮಂಗಳವಾರ ಇಲ್ಲಿ ಸಭೆ ಸೇರಲಿದೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್‌ ಈಗಾಗಲೇ 124 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಮೇ 10 ರಂದು ಕರ್ನಾಟಕ ವಿಧಾನಸಭೆ ಚುನಾವಣೆ ( Karnataka Assembly Elections 2023 ) ನಡೆಯಲಿದ್ದು, ಮೇ 13ರಂದು ಫಲಿತಾಂಶ ಹೊರಬರಲಿದೆ.

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ಸಮಿತಿಯು 60 ಕ್ಷೇತ್ರಗಳ ಅಭ್ಯರ್ಥಿಗಳನ್ನು ತೆರವುಗೊಳಿಸುವ ನಿರೀಕ್ಷೆಯಿದೆ. ಏಕೆಂದರೆ ರಾಜ್ಯ ಸ್ಕ್ರೀನಿಂಗ್ ಕಮಿಟಿ ಈಗಾಗಲೇ ಈ ಕ್ಷೇತ್ರಗಳಿಗೆ ಒಂದೇ ಹೆಸರನ್ನು ಕಳುಹಿಸಿದೆ. ಶುಕ್ರವಾರದ ವೇಳೆಗೆ ಪಕ್ಷವು 60 ಹೆಸರುಗಳನ್ನು ಒಳಗೊಂಡ ಪಟ್ಟಿಯನ್ನು ಪ್ರಕಟಿಸಲಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

Karnataka polls: Congress Central Election Committee to discuss on party candidates

ಪಕ್ಷದ ನಾಯಕರು ಇನ್ನೂ 32 ಕ್ಷೇತ್ರದ ಅಭ್ಯರ್ಥಿಗಳ ಬಗ್ಗೆ ಚರ್ಚಿಸಲಿದ್ದಾರೆ. ಅಲ್ಲಿ ರಾಜ್ಯ ಸ್ಕ್ರೀನಿಂಗ್ ಪ್ರತಿ ವಿಭಾಗಕ್ಕೆ ಎರಡು ಹೆಸರುಗಳನ್ನು ಕಳುಹಿಸಿದೆ. ಇನ್ನೂ ಏಳು ಕ್ಷೇತ್ರಗಳಿಗೆ, ರಾಜ್ಯ ಸ್ಕ್ರೀನಿಂಗ್ ಸಮಿತಿಯು ತಲಾ ನಾಲ್ಕು ಹೆಸರುಗಳನ್ನು ಕಳುಹಿಸಿದೆ. ಇವೆಲ್ಲವನ್ನೂ ಮಂಗಳವಾರವೇ ಕೇಂದ್ರ ಸಮಿತಿಯು ತೆರವುಗೊಳಿಸಲಿದೆ. ಆದರೆ ಬಿಜೆಪಿ ಮತ್ತು ಜನತಾ ದಳ (ಎಸ್) ಪಟ್ಟಿಯನ್ನು ಪ್ರಕಟಿಸಿದ ನಂತರ ಮೂರನೇ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಮುಖಂಡರೊಬ್ಬರು 'ಡೆಕ್ಕನ್‌ ಹೆರಾಲ್ಡ್‌' ಪತ್ರಿಕೆಗೆ ತಿಳಿಸಿದ್ದಾರೆ.

ಕೆಲವು ಭಾಗಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್‌ನಿಂದ ವಲಸೆ ಬಂದವರಿಗೆ ಟಿಕೆಟ್ ನೀಡಲು ಪಕ್ಷವು ಯೋಜಿಸುತ್ತಿದೆ. ಆದ್ದರಿಂದ, ಬಿಜೆಪಿ ಮತ್ತು ಜೆಡಿಎಸ್ (ಎಸ್) ಪಟ್ಟಿಯ ನಂತರ ಅದು ಮೂರನೇ ಪಟ್ಟಿಯನ್ನು ಪ್ರಕಟಿಸುತ್ತದೆ ಎಂದು ನಾಯಕರು ಹೇಳಿದ್ದಾರೆ.

ಮೇಲುಕೋಟೆ ಕ್ಷೇತ್ರದಲ್ಲಿ ರೈತ ಸಂಘದಿಂದ ಸ್ಪರ್ಧಿಸಲಿರುವ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಬೆಂಬಲಿಸಲು ಕಾಂಗ್ರೆಸ್ ನಿರ್ಧರಿಸಿದೆ.

Karnataka polls: Congress Central Election Committee to discuss on party candidates

ಕಾಂಗ್ರೆಸ್ ಈಗಾಗಲೇ 224 ಕ್ಷೇತ್ರಗಳ ಪೈಕಿ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ವರುಣಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಕನಕಪುರ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ಪಟ್ಟಿ ತಿಳಿಸಿದೆ.

ಪಕ್ಷವು ಮಾಜಿ ಉಪಮುಖ್ಯಮಂತ್ರಿ ಜಿ ಪರಮೇಶ್ವರ ಅವರನ್ನು ಕೊರಟಗೆರೆ (ಎಸ್‌ಸಿ) ಕ್ಷೇತ್ರದಿಂದ ಕಣಕ್ಕಿಳಿಸಿದೆ. ಮಾಜಿ ಸಚಿವರಾದ ಕೆ.ಎಚ್.ಮುನಿಯಪ್ಪ ಮತ್ತು ಪ್ರಿಯಾಂಕ್ ಖರ್ಗೆ ಕ್ರಮವಾಗಿ ದೇವನಹಳ್ಳಿ ಮತ್ತು ಚಿತ್ತಾಪುರ (ಎಸ್‌ಸಿ) ದಿಂದ ಸ್ಪರ್ಧಿಸಲಿದ್ದಾರೆ.

ಮೇ 10 ರಂದು ನಡೆಯಲಿರುವ ಕರ್ನಾಟಕ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ದೇಶದಾದ್ಯಂತ ಮತ್ತೆ ಮುನ್ನೆಲೆಗೆ ಬರಲು ಕಾಂಗ್ರೆಸ್‌ ಯತ್ನಿಸುತ್ತಿದೆ ಎಂದು ರಾಜಕೀಯ ತಜ್ಞರು ಹೇಳಿದ್ದಾರೆ. ಕರ್ನಾಟಕ ಚುನಾವಣೆಯ ಫಲಿತಾಂಶ ಕಾಂಗ್ರೆಸ್‌ಗೆ ಹೊಸದೊಂದು ದಿಕ್ಕನ್ನು ತೋರಿಸಬಹುದು ಎಂದು ಹೇಳಲಾಗುತ್ತಿದೆ. 2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ನಡೆಯಲಿರುವ ಕರ್ನಾಟಕ ಚುನಾವಣೆ ಭಾರೀ ಮಹತ್ವವನ್ನು ಪಡೆದುಕೊಂಡಿದೆ.

ಕರ್ನಾಟಕದಲ್ಲಿ ಗೆಲುವನ್ನು ಖಾತ್ರಿಪಡಿಸಿಕೊಳ್ಳುವ ಮೂಲಕ, ಈಶಾನ್ಯ ರಾಜ್ಯಗಳಲ್ಲಿನ ಇತ್ತೀಚಿನ ಸೋಲಿನ ನಂತರ ಪಕ್ಷವು ಪುಟಿದೇಳಲು ಬಯಸುತ್ತದೆ ಎಂದು ಮುಖಂಡರು ತಿಳಿಸಿದ್ದಾರೆ. ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನಗಳಲ್ಲಿಯೂ ಇದೇ ವರ್ಷ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ತನ್ನ ಸ್ಥಳೀಯ ನಾಯಕತ್ವದ ಬಲದ ಮೇಲೆಯೇ ಕರ್ನಾಟಕ ಚುನಾವಣೆ ಎದುರಿಸುತ್ತಿದೆ. ಆಡಳಿತಾರೂಢ ಬಿಜೆಪಿಯ ಭ್ರಷ್ಟಾಚಾರವನ್ನು ತನ್ನ ಪ್ರಚಾರದ ಕೇಂದ್ರ ವಿಷಯವನ್ನಾಗಿ ಕಾಂಗ್ರೆಸ್‌ ಮಾಡಿಕೊಂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+