Narendra Modi Road Show: ಮೋದಿ ರೋಡ್ ಶೋಗೆ ಅಡ್ಡಿಪಡಿಸಲು ಕಾಂಗ್ರೆಸ್ ಷಡ್ಯಂತ್ರ: ಶೋಭಾ ಕರಂದ್ಲಾಜೆ
ಬೆಂಗಳೂರು,ಮೇ5: ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋಗೆ ಅಡ್ಡಿಪಡಿಸಲು ಕಾಂಗ್ರೆಸ್ ಷಡ್ಯಂತ್ರ ಮಾಡುತ್ತಿದೆ. ಅವರದೇ ಕಾರ್ಯಕರ್ತರ ಆ್ಯಂಬುಲೆನ್ಸ್ಗಳನ್ನು ರೋಡ್ ಶೋ ಮಾರ್ಗದಲ್ಲಿ ಓಡಿಸುವುದಾಗಿ ತಿಳಿದು ಬಂದಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.
ಈ ಕುರಿತು ಶುಕ್ರವಾರ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಕಾರ್ಯಕರ್ತರು ಆ್ಯಂಬುಲೆನ್ಸ್ಗಳನ್ನು ರೋಡ್ ಶೋ ಮಾರ್ಗದಲ್ಲಿ ಓಡಿಸುವುದಾಗಿ ತಿಳಿದು ಬಂದಿದ್ದು, ಈ ನಿಟ್ಟಿನಲ್ಲಿ ರೋಗಿಗಳಿರುವ ಆ್ಯಂಬುಲೆನ್ಸ್ಗಳನ್ನು ಪೊಲೀಸರು ಖುದ್ದು ಆಸ್ಪತ್ರೆಗಳವರೆಗೆ ಬಿಡುವಂತೆ ಮನವಿ ಮಾಡಲಾಗಿದೆ ಎಂದು ಹೇಳಿದರು.

ಮೇ 6, 7ರಂದು ಬೆಂಗಳೂರಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ 'ನಮ್ಮ ಬೆಂಗಳೂರು, ನಮ್ಮ ಹೆಮ್ಮೆ' ಬೃಹತ್ ರೋಡ್ ಶೋ ಕಾರ್ಯಕ್ರಮದಲ್ಲಿ ಸ್ವಲ್ಪ ಬದಲಾವಣೆ ಮಾಡಲಾಗಿದೆ. ಭಾನುವಾರ ಮಧ್ಯಾಹ್ನ ನೀಟ್ ಪರೀಕ್ಷೆ ಇರುವುದರಿಂದ ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಲಾಗಿದೆ. ಮಕ್ಕಳ ಶಿಕ್ಷಣ ಮತ್ತು ಭವಿಷ್ಯದ ಬಗ್ಗೆ ವಿಶೇಷ ಕಳಕಳಿ ಹೊಂದಿರುವ ಪ್ರಧಾನಮಂತ್ರಿಯವರು ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ತೊಂದರೆಯಾಗದಂತೆ ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಲು ಸೂಚಿಸಿದ್ದಾರೆ.
ನಾಳೆಯ ರೋಡ್ ಶೋಗೆ ಅಡ್ಡಿಪಡಿಸಲು ಕಾಂಗ್ರೆಸ್ ಷಡ್ಯಂತ್ರ..
— oneindiakannada (@OneindiaKannada) May 5, 2023
-ಶೋಭಾ ಕರಂದ್ಲಾಜೆ#shobakarndlaje #narendramodi #congres #modiroadshow #KarnatakaElections2023 pic.twitter.com/xWd6EH349Y
ಭಾನುವಾರ ಯಾವುದೇ ವಿದ್ಯಾರ್ಥಿಗಳು ತೊಂದರೆಗೆ ಸಿಲುಕಿದರೆ ಅಂತಹ ವಿದ್ಯಾರ್ಥಿಗಳು ಪ್ರವೇಶ ಪತ್ರ ತೋರಿಸಿದರೆ, ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಿಗೆ ಪೋಲಿಸರು ಬಿಡುತ್ತಾರೆ. ಈ ಕುರಿತಂತೆ ಪೊಲೀಸರೊಂದಿಗೆ, ಎಸ್ಪಿಜಿಯವರೊಂದಿಗೆ ಚರ್ಚಿಸಲಾಗಿದೆ ಎಂದು ತಿಳಿಸಿದರು.
ಪ್ರಧಾನಮಂತ್ರಿಯವರು ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ಬೆಂಗಳೂರು ದಕ್ಷಿಣದ ಸೋಮೇಶ್ವರ ಭವನ ಆರ್ಬಿಐ ಮೈದಾನದಿಂದ ಮಲ್ಲೇಶ್ವರದ ಸ್ಯಾಂಕಿ ಟ್ಯಾಂಕ್ ವರೆಗೆ 26.5 ಕಿ.ಮೀ ರೋಡ್ ಶೋ ನಡೆಸುತ್ತಾರೆ. ಭಾನುವಾರ ಬೆಳಿಗ್ಗೆ 10ರಿಂದ ತಿಪ್ಪಸಂದ್ರದ ಕೆಂಪೇಗೌಡ ಪ್ರತಿಮೆಯಿಂದ ಟ್ರಿನಿಟಿ ವೃತ್ತದ ವರೆಗೆ 8 ಕಿ.ಮೀ ರೋಡ್ ಶೋ ನಡೆಯಲಿದೆ ಎಂದು ವಿವರಿಸಿದರು.

ರಾಜಧಾನಿಯ ಎಲ್ಲರನ್ನೂ ನೋಡಬೇಕು, ಎಲ್ಲ ಕ್ಷೇತ್ರಗಳಿಗೆ ಭೇಟಿ ನೀಡಬೇಕು ಎಂಬ ಆಶಯದೊಂದಿಗೆ ಪ್ರಧಾನಿಯವರು ಬೆಂಗಳೂರಿಗೆ ಭೇಟಿ ನೀಡುತ್ತಿದ್ದಾರೆ. ಒಂದೇ ದಿನ ರೋಡ್ ಶೋ ನಡೆಸಿದರೆ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ ಎಂಬ ಉದ್ದೇಶದಿಂದ ಎರಡು ದಿನ ರೋಡ್ ಶೋ ನಡೆಸಲಾಗುತ್ತಿದೆ. ಸಾರ್ವಜನಿಕರ ಭಾವನೆಗಳಿಗೆ ಗೌರವ ಕೊಟ್ಟು ಪ್ರಧಾನಿಯವರು ಎರಡು ದಿನ ರೋಡ್ ಶೋ ನಡೆಸುತ್ತಿದ್ದಾರೆ.
ಪ್ರಧಾನಮಂತ್ರಿಯವರನ್ನು ಜನರು ಹೂ ಮಳೆಯೊಂದಿಗೆ ಸ್ವಾಗತಿಸಲು ಕಾತರದಿಂದ ಕಾಯುತ್ತಿದ್ದಾರೆ. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸಂಬಂಧಿತ ಇಲಾಖೆಗಳ ಅಧಿಕಾರಿಗೊಂದಿಗೆ ಚರ್ಚಿಸಲಾಗಿದೆ ಎಂದು ಹೇಳಿದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications