Narendra Modi Road Show: ಮೋದಿ ರೋಡ್ ಶೋಗೆ ಅಡ್ಡಿಪಡಿಸಲು ಕಾಂಗ್ರೆಸ್ ಷಡ್ಯಂತ್ರ: ಶೋಭಾ ಕರಂದ್ಲಾಜೆ
ಬೆಂಗಳೂರು,ಮೇ5: ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋಗೆ ಅಡ್ಡಿಪಡಿಸಲು ಕಾಂಗ್ರೆಸ್ ಷಡ್ಯಂತ್ರ ಮಾಡುತ್ತಿದೆ. ಅವರದೇ ಕಾರ್ಯಕರ್ತರ ಆ್ಯಂಬುಲೆನ್ಸ್ಗಳನ್ನು ರೋಡ್ ಶೋ ಮಾರ್ಗದಲ್ಲಿ ಓಡಿಸುವುದಾಗಿ ತಿಳಿದು ಬಂದಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.
ಈ ಕುರಿತು ಶುಕ್ರವಾರ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಕಾರ್ಯಕರ್ತರು ಆ್ಯಂಬುಲೆನ್ಸ್ಗಳನ್ನು ರೋಡ್ ಶೋ ಮಾರ್ಗದಲ್ಲಿ ಓಡಿಸುವುದಾಗಿ ತಿಳಿದು ಬಂದಿದ್ದು, ಈ ನಿಟ್ಟಿನಲ್ಲಿ ರೋಗಿಗಳಿರುವ ಆ್ಯಂಬುಲೆನ್ಸ್ಗಳನ್ನು ಪೊಲೀಸರು ಖುದ್ದು ಆಸ್ಪತ್ರೆಗಳವರೆಗೆ ಬಿಡುವಂತೆ ಮನವಿ ಮಾಡಲಾಗಿದೆ ಎಂದು ಹೇಳಿದರು.

ಮೇ 6, 7ರಂದು ಬೆಂಗಳೂರಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ 'ನಮ್ಮ ಬೆಂಗಳೂರು, ನಮ್ಮ ಹೆಮ್ಮೆ' ಬೃಹತ್ ರೋಡ್ ಶೋ ಕಾರ್ಯಕ್ರಮದಲ್ಲಿ ಸ್ವಲ್ಪ ಬದಲಾವಣೆ ಮಾಡಲಾಗಿದೆ. ಭಾನುವಾರ ಮಧ್ಯಾಹ್ನ ನೀಟ್ ಪರೀಕ್ಷೆ ಇರುವುದರಿಂದ ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಲಾಗಿದೆ. ಮಕ್ಕಳ ಶಿಕ್ಷಣ ಮತ್ತು ಭವಿಷ್ಯದ ಬಗ್ಗೆ ವಿಶೇಷ ಕಳಕಳಿ ಹೊಂದಿರುವ ಪ್ರಧಾನಮಂತ್ರಿಯವರು ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ತೊಂದರೆಯಾಗದಂತೆ ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಲು ಸೂಚಿಸಿದ್ದಾರೆ.
ನಾಳೆಯ ರೋಡ್ ಶೋಗೆ ಅಡ್ಡಿಪಡಿಸಲು ಕಾಂಗ್ರೆಸ್ ಷಡ್ಯಂತ್ರ..
— oneindiakannada (@OneindiaKannada) May 5, 2023
-ಶೋಭಾ ಕರಂದ್ಲಾಜೆ#shobakarndlaje #narendramodi #congres #modiroadshow #KarnatakaElections2023 pic.twitter.com/xWd6EH349Y
ಭಾನುವಾರ ಯಾವುದೇ ವಿದ್ಯಾರ್ಥಿಗಳು ತೊಂದರೆಗೆ ಸಿಲುಕಿದರೆ ಅಂತಹ ವಿದ್ಯಾರ್ಥಿಗಳು ಪ್ರವೇಶ ಪತ್ರ ತೋರಿಸಿದರೆ, ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಿಗೆ ಪೋಲಿಸರು ಬಿಡುತ್ತಾರೆ. ಈ ಕುರಿತಂತೆ ಪೊಲೀಸರೊಂದಿಗೆ, ಎಸ್ಪಿಜಿಯವರೊಂದಿಗೆ ಚರ್ಚಿಸಲಾಗಿದೆ ಎಂದು ತಿಳಿಸಿದರು.
ಪ್ರಧಾನಮಂತ್ರಿಯವರು ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ಬೆಂಗಳೂರು ದಕ್ಷಿಣದ ಸೋಮೇಶ್ವರ ಭವನ ಆರ್ಬಿಐ ಮೈದಾನದಿಂದ ಮಲ್ಲೇಶ್ವರದ ಸ್ಯಾಂಕಿ ಟ್ಯಾಂಕ್ ವರೆಗೆ 26.5 ಕಿ.ಮೀ ರೋಡ್ ಶೋ ನಡೆಸುತ್ತಾರೆ. ಭಾನುವಾರ ಬೆಳಿಗ್ಗೆ 10ರಿಂದ ತಿಪ್ಪಸಂದ್ರದ ಕೆಂಪೇಗೌಡ ಪ್ರತಿಮೆಯಿಂದ ಟ್ರಿನಿಟಿ ವೃತ್ತದ ವರೆಗೆ 8 ಕಿ.ಮೀ ರೋಡ್ ಶೋ ನಡೆಯಲಿದೆ ಎಂದು ವಿವರಿಸಿದರು.

ರಾಜಧಾನಿಯ ಎಲ್ಲರನ್ನೂ ನೋಡಬೇಕು, ಎಲ್ಲ ಕ್ಷೇತ್ರಗಳಿಗೆ ಭೇಟಿ ನೀಡಬೇಕು ಎಂಬ ಆಶಯದೊಂದಿಗೆ ಪ್ರಧಾನಿಯವರು ಬೆಂಗಳೂರಿಗೆ ಭೇಟಿ ನೀಡುತ್ತಿದ್ದಾರೆ. ಒಂದೇ ದಿನ ರೋಡ್ ಶೋ ನಡೆಸಿದರೆ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ ಎಂಬ ಉದ್ದೇಶದಿಂದ ಎರಡು ದಿನ ರೋಡ್ ಶೋ ನಡೆಸಲಾಗುತ್ತಿದೆ. ಸಾರ್ವಜನಿಕರ ಭಾವನೆಗಳಿಗೆ ಗೌರವ ಕೊಟ್ಟು ಪ್ರಧಾನಿಯವರು ಎರಡು ದಿನ ರೋಡ್ ಶೋ ನಡೆಸುತ್ತಿದ್ದಾರೆ.
ಪ್ರಧಾನಮಂತ್ರಿಯವರನ್ನು ಜನರು ಹೂ ಮಳೆಯೊಂದಿಗೆ ಸ್ವಾಗತಿಸಲು ಕಾತರದಿಂದ ಕಾಯುತ್ತಿದ್ದಾರೆ. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸಂಬಂಧಿತ ಇಲಾಖೆಗಳ ಅಧಿಕಾರಿಗೊಂದಿಗೆ ಚರ್ಚಿಸಲಾಗಿದೆ ಎಂದು ಹೇಳಿದರು.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications