ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆ: ಯಡಿಯೂರಪ್ಪ ಸಂಬಂಧಿ ಎನ್‌ಆರ್ ಸಂತೋಷ್ ಜೆಡಿಎಸ್ ಸೇರ್ಪಡೆ

ಬೆಂಗಳೂರು, ಏಪ್ರಿಲ್‌ 15: ಬಿಜೆಪಿ ಮುಖಂಡ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಸಂಬಂಧಿ ಎನ್‌ಆರ್ ಸಂತೋಷ್ ಅವರು ಶನಿವಾರ ಬೆಂಗಳೂರಿನಲ್ಲಿ ಎಚ್‌ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್‌ಗೆ ಸೇರ್ಪಡೆಯಾದರು. ಸಂತೋಷ್ ಹಾಸನ ಜಿಲ್ಲೆಯ ಅರಸೀಕೆರೆ ಕ್ಷೇತ್ರದಿಂದ ಜೆಡಿಎಸ್ ಟಿಕೆಟ್‌ನಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ. ಅರಸೀಕೆರೆಯಿಂದ ಸಂತೋಷ್‌ಗೆ ಬಿಜೆಪಿ ಟಿಕೆಟ್ ನಿರಾಕರಿಸಿ ಜಿವಿ ಬಸವರಾಜು ಅವರಿಗೆ ನೀಡಿದೆ.

ಶುಕ್ರವಾರ ರಾತ್ರಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರನ್ನು ಭೇಟಿಯಾಗಿದ್ದ ಸಂತೋಷ್, ಎಚ್.ಡಿ.ರೇವಣ್ಣ ಅವರ ಸಮ್ಮುಖದಲ್ಲಿ ಸುಮಾರು 2 ಗಂಟೆಗಳ ಕಾಲ ಸುದೀರ್ಘ ಚರ್ಚೆ ನಡೆಸಿದ್ದಾರೆ.

Karnataka polls: Yediyurappa’s relative NR Santosh joins JDS after he is denied ticket by BJP

ವರದಿಗಳ ಪ್ರಕಾರ, ಅರಸೀಕೆರೆ ಕ್ಷೇತ್ರದಿಂದ ಸಂತೋಷ್‌ಗೆ ಟಿಕೆಟ್ ನೀಡುವುದಾಗಿ ದೇವೇಗೌಡರು ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಹಾಸನ ಜಿಲ್ಲೆ ಜೆಡಿಎಸ್ ಭದ್ರಕೋಟೆಯಾಗಿದ್ದು, ಏಳು ಸ್ಥಾನಗಳ ಪೈಕಿ ಆರು ಕ್ಷೇತ್ರಗಳಲ್ಲಿ ಪಕ್ಷದ ಹಿಡಿತವಿದೆ.

ಸಂತೋಷ್ ಯಡಿಯೂರಪ್ಪ ಅವರ ಮೊಮ್ಮಗನಾಗಿದ್ದು, ಮಾಜಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯಾಗಿಯೂ ಆಗಿ ಸೇವೆ ಸಲ್ಲಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಅರಸೀಕೆರೆ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ.

ಸಂತೋಷ್‌ಗೆ ಟಿಕೆಟ್ ನಿರಾಕರಿಸಿದ್ದಕ್ಕೆ ಯಡಿಯೂರಪ್ಪ ಸಹೋದರಿ ಬಿಎಸ್ ಪ್ರೇಮಾ ತಮ್ಮ ಸಹೋದರನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೂಡಿಗೆರೆ ಶಾಸಕ ಎಂಪಿ ಕುಮಾರಸ್ವಾಮಿ ಜೆಡಿಎಸ್‌ ಸೇರ್ಪಡೆ

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನಿರಾಕರಿಸಿದ ಒಂದು ದಿನದ ನಂತರ, ಮೂಡಿಗೆರೆ ಶಾಸಕ ಎಂಪಿ ಕುಮಾರಸ್ವಾಮಿ ಶುಕ್ರವಾರ ಜೆಡಿಎಸ್‌ಗೆ ಸೇರ್ಪಡೆಗೊಂಡಿದ್ದಾರೆ.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಮೂರು ಬಾರಿ ಶಾಸಕರಿದ್ದ ಕುಮಾರಸ್ವಾಮಿ, ಪಕ್ಷದ ಶಾಸಕಾಂಗ ಪಕ್ಷದ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಮತ್ತು ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಅವರ ಸಮ್ಮುಖದಲ್ಲಿ ಜೆಡಿಎಸ್‌ಗೆ ಸೇರ್ಪಡೆಗೊಂಡರು.

Karnataka polls: Yediyurappa’s relative NR Santosh joins JDS after he is denied ticket by BJP

ಬುಧವಾರ ರಾತ್ರಿ ಬಿಜೆಪಿಯ 23 ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ ಮೂಡಿಗೆರೆ ಅಭ್ಯರ್ಥಿಯಾಗಿ ದೀಪಕ್ ದೊಡ್ಡಯ್ಯ ಅವರನ್ನು ಹೆಸರಿಸಲಾಗಿದೆ.

ಟಿಕೆಟ್ ಸಿಗದಿರುವುದಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರೇ ಕಾರಣ ಎಂದು ಶಾಸಕ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಜೆಡಿಎಸ್ ಈಗಾಗಲೇ ಮೂಡಿಗೆರೆಯಿಂದ ಮಾಜಿ ಶಾಸಕ ಬಿ ಬಿ ನಿಂಗಯ್ಯ ಅವರನ್ನು ಕಣಕ್ಕಿಳಿಸಿದೆ.

ದತ್ತಾಗೆ ಜೆಡಿಎಸ್‌ ಟಿಕೆಟ್‌

ಈ ಹಿಂದೆ ಹಲವು ದಶಕಗಳ ಕಾಲ ಜೆಡಿಎಸ್‌ನೊಂದಿಗೆ ಇದ್ದ ದತ್ತ ಅವರು ಈ ವರ್ಷದ ಆರಂಭದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದರು. ಆದರೆ ಅವರಿಗೆ ಕಡೂರು ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ನಿರಾಕರಿಸಲಾಯಿತು. ಬದಲಿಗೆ ಆನಂದ್ ಕೆಎಸ್ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಘೋಷಿಸಿದೆ.

ಆನಂದ್ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಬೆಂಬಲಿಗ ಎಂದು ಹೇಳಲಾಗಿದೆ. ಹೀಗಾಗಿ ದತ್ತ ಅವರು ಏಪ್ರಿಲ್ 10 ರಂದು ತಮ್ಮ ಬೆಂಬಲಿಗರೊಂದಿಗೆ ಸಭೆ ನಡೆಸಿ ಕಡೂರಿನಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಲು ಕಣಕ್ಕಿಳಿದಿದ್ದಾರೆ.

ಬುಧವಾರ ದತ್ತ ಅವರು ಮಾಜಿ ಪ್ರಧಾನಿ ಮತ್ತು ಜೆಡಿಎಸ್ ಮುಖ್ಯಸ್ಥ ಎಚ್‌ಡಿ ದೇವೇಗೌಡರನ್ನು ಭೇಟಿ ಮಾಡಿ ಪಕ್ಷಕ್ಕೆ ಮರಳಲು ಆಶೀರ್ವಾದ ಪಡೆದರು. ಗುರುವಾರ ಹೆಚ್.ಡಿ.ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ಅವರು ಜೆಡಿಎಸ್ ಸೇರ್ಪಡೆಗೆ ದತ್ತ ಅವರಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿ ಕಡೂರು ಕ್ಷೇತ್ರದಿಂದ ಟಿಕೆಟ್ ನೀಡುವುದನ್ನು ಖಚಿತಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+