ಕರ್ನಾಟಕದಿಂದ ಕಾವೇರಿ ಕಲುಷಿತ : ವರದಿಗೆ ಸುಪ್ರೀಂ ಆದೇಶ
ನವದೆಹಲಿ, ಜುಲೈ 07 : ಕರ್ನಾಟಕ ಕಾವೇರಿ ನೀರನ್ನು ಕಲುಷಿತಗೊಳಿಸುತ್ತಿದೆ ಎಂದು ತಮಿಳುನಾಡು ಹೂಡಿರುವ ಅರ್ಜಿಗೆ ಸಂಬಂಧಿಸಿದಂತೆ 6 ತಿಂಗಳಲ್ಲಿ ಈಕುರಿತು ವರದಿ ಸಲ್ಲಿಸುವಂತೆ ಕೇಂದ್ರ ಕೊಳಚೆ ನಿರ್ಮೂಲನಾ ಮಂಡಳಿಗೆ ಸರ್ವೋಚ್ಚ ನ್ಯಾಯಾಲಯ ಶುಕ್ರವಾರ ಆದೇಶಿಸಿದೆ.
ಔದ್ಯೋಗಿಕ ತ್ಯಾಜ್ಯ ಮತ್ತು ಸಂಸ್ಕರಿಸದ ಚರಂಡಿ ನೀರನ್ನು ಕಾವೇರಿಗೆ ಮತ್ತು ಪೆಣ್ಣಿಯಾರ್ ನದಿಗಳಿಗೆ ಕರ್ನಾಟಕ ಬಿಡುತ್ತಿದೆ ಎಂದು ತಮಿಳುನಾಡು ಆರೋಪಿಸಿ ಸರ್ವೋಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಆ ಅರ್ಜಿಯನ್ನು ಆಲಿಸಿರುವ ಸುಪ್ರೀಂ ಕೋರ್ಟ್ ಮೇಲಿನಂತೆ ಆದೇಶ ನೀಡಿದೆ.
ತಮಿಳುನಾಡಿನಲ್ಲಿ ಮಾತ್ರವಲ್ಲ ಕರ್ನಾಟಕದಲ್ಲೂ ಕಾವೇರಿ ನೀರು ಕಲುಷಿತವಾಗುತ್ತಿದೆ ಎಂಬುದು ಸತ್ಯ ಸಂಗತಿ. ಕರ್ನಾಟಕದಲ್ಲಿ ಹರಿಯುತ್ತಿರುವ ನೀರಿಗೆ 'ಬಿ ಗ್ರೇಡ್' ಕರ್ನಾಟಕ ಕೊಳಚೆ ನಿರ್ಮೂಲನ ಮಂಡಳಿಯೇ ನೀಡಿದೆ. ಕಾವೇರಿ ನೀರನ್ನು ಶುದ್ಧೀಕರಿಸದೆ ಕುಡಿಯುವಂತಿಲ್ಲ ಎಂದು ವರದಿ ನೀಡಿದೆ.
ಒಂದಾನೊಂದು ಕಾಲದಲ್ಲಿ ಎ ಗ್ರೇಡ್ ಪಡೆದು ಶುದ್ಧೀಕರಿಸದೆ ಕುಡಿಯಲು ಯೋಗ್ಯವಾಗಿದ್ದ ಕಾವೇರಿ ನೀರು ಬಿ ಗ್ರೇಡಿಗೆ ಇಳಿದಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿ. ಕನಕಪುರ ತಾಲೂಕಿನಲ್ಲಿರುವ ಕಾವೇರಿ, ಅರ್ಕಾವತಿ ಸಂಗಮಕ್ಕೆ ಹೋದರೆ ಕಾವೇರಿ ಎಷ್ಟು ಕಲುಷಿತವಾಗಿದೆ ಎಂದು ಬರಿಗಣ್ಣಿನಿಂದ ನೋಡಿದವರಿಗೂ ತಿಳಿಯುತ್ತದೆ.
ಅತಿಯಾದ ನಗರೀಕರಣ, ಉದ್ಯಮೀಕರಣದಿಂದಾಗಿ ಕಾವೇರಿ ಕಲುಷಿತಳಾಗುತ್ತಲೇ ಸಾಗಿದ್ದಾಳೆ. ಕಾವೇರಿ ನದಿಗೆ ನಿರಂತರವಾಗಿ ರಾಸಾಯನಿಕವನ್ನು, ಔದ್ಯಮಿಕ ತ್ಯಾಜ್ಯಗಳನ್ನು ಹರಿಯಬಿಡಲಾಗುತ್ತಿದೆ. ಹಳ್ಳಿಗಳಲ್ಲಿ ಕೂಡ ಕಾವೇರಿಗೆ ಹೊಲಸು ಬಂದು ಸೇರಿಕೊಳ್ಳುತ್ತಿದೆ. ಇಷ್ಟಾದರೂ ಅಧಿಕಾರಿಗಳು ಕಣ್ಣುಮುಚ್ಚಿ ಕುಳಿತಿದ್ದಾರೆ.
ಈ ನಡುವೆ, ಕರ್ನಾಟಕ 22.5 ಟಿಎಂಸಿ ಅಡಿಯಷ್ಟು ಕಾವೇರಿ ನೀರನ್ನು ತಮಿಳುನಾಡಿಗೆ ಬಿಡಲು ವಿಫಲವಾಗಿದೆ ಎಂದು ಸುಪ್ರೀಂ ಕೋರ್ಟ್ ಮುಂದೆ ತಮಿಳುನಾಡು ಹೊಸದಾಗಿ ಅರ್ಜಿ ಸಲ್ಲಿಸಿದ್ದನ್ನು, ನ್ಯಾಯಾಲಯ ಪರಿಗಣನೆಗೆ ತೆಗೆದುಕೊಂಡಿದೆ.
-
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು













Click it and Unblock the Notifications