ದೀಪಾವಳಿ ಹಬ್ಬ: ಪರಿಸರ ಸ್ನೇಹಿ ಪಟಾಕಿ ಹೊಡೆಯಲು ಮಾತ್ರ ಅವಕಾಶ: ಮಾಲಿನ್ಯ ಮಂಡಳಿಯಿಂದ ಶಾಕ್
ಬೆಂಗಳೂರು, ಅಕ್ಟೋಬರ್ 17: ಕೊರೋನಾ ನಂತರ ಎದುರಾದ ಮೊದಲು ದೀಪಾವಳಿ ಹಬ್ಬವನ್ನು ಪಟಾಕಿ ಹಾರಿಸಿ ಅದ್ಧೂರಿ ಆಚರಣೆ ಮುಂದಾಗಿದ್ದ ಜನರಿಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಶಾಕ್ ನೀಡಿದೆ.
ಕಳೆದ ಎರಡು ವರ್ಷದಿಂದ ಕೊರೊನಾ ಕಾರಣಕ್ಕೆ ದೀಪಾವಳಿ ಸೇರಿದಂತೆ ಎಲ್ಲ ಹಬ್ಬಗಳು ಆಚರಣೆ ಸರಳವಾಗಿತ್ತು. ಆದರೆ ಈ ವರ್ಷ ಎಲ್ಲ ಹಬ್ಬಗಳು ಅದ್ಧೂರಿಯಾಗಿ ನೆರವೇರಿವೆ. ಅದರಂತೆ ದೀಪಾವಳಿಗೆ ಹೆಚ್ಚು ಪಟಾಕಿ ಸಿಡಿಸಿ ಆಚರಿಸಬೇಕು ಎಂಬ ಜನರ ಕನಸಿಗೆ ಮಂಡಳಿಯ ಆದೇಶ ಅಡ್ಡಿಯಾದಂತಿದೆ. ಹಬ್ಬಕ್ಕೆ ಮಾಲಿನ್ಯ ಕಾರಕ ಪಟಾಕಿಗಳನ್ನು ನಿಷೇಧಿಸಿ, ಪರಿಸರಸ್ನೇಹಿ ಪಟಾಕಿಗೆ ಮಾತ್ರ ಅವಕಾಶ ನೀಡಿದೆ.
ದೀಪಾವಳಿಗೆ ದಿನಗಣನೆ ಆರಂಭವಾಗಿದೆ. ರಾಜ್ಯದಲ್ಲಿ ಮಾಲಿನ್ಯ ಹೆಚ್ಚಾಗದಂತೆ ಪರಿಸರ ಮಾಲಿನ್ಯ ಮಂಡಳಿಯಿಂದ ಸೂಕ್ತ ಕ್ರಮಕ್ಕೆ ಮುಂದಾಗಿದೆ. ಈ ನಿಟ್ಟಿನಲ್ಲಿ ಹಬ್ಬಕ್ಕೆ ಕೇವಲ ಹಸಿರು ಪಟಾಕಿಯನ್ನು ಮಾರಾಟ ಮಾಡಲು ಮಾತ್ರವೇ ಅವಕಾಶ ಕಲ್ಪಿಸಿದೆ. ಈ ನಿಯಮ ಮೀರಿ ಬೇರೆ ಪಟಾಕಿ ಮಾರಾಟ ಕಂಡು ಬಂದರೆ ಅವುಗಳನ್ನು ವಶಕ್ಕೆ (ಸೀಜ್) ಮಾಡುವುದಾಗಿ ಮಂಡಳಿ ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಇಲಾಖೆ ಸಂಬಂಧಿತ ಇಲಾಖೆಗೆ ಸೂಚಿಸಿದೆ.

ಪಟಾಕಿ ಹೊಡೆಯಲು ಹಬ್ಬದಲ್ಲಿ ರಾತ್ರಿ 8 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ಅವಕಾಶ ನೀಡಿದೆ. ಅಲ್ಲದೇ ಪರಿಸರ ಸ್ನೇಹಿ ಪಾಟಾಕಿಗಳನ್ನು ಹೊಡೆಯುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿಬೇಕು. ದೀಪಾವಳಿಗೂ ಮೊದಲು ಹಾಗೂ ನಂತರ ದಿನಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದೆಲ್ಲಡೆ ಎಷ್ಟು ವಾಯು ಮಾಲಿನ್ಯ, ಶಬ್ದ ಮಾಲಿನ್ಯ ಉಂಟಾಗಿದೆ ಎಂದು ಪತ್ತೆ ಮಾಡಲು ಮಾಪನ ಅಳವಡಿಸಲಾಗಿದೆ.
ಮುಖ್ಯವಾಗಿ ಮಕ್ಕಳಲ್ಲಿ ಪಟಾಕಿ ಕುರಿತು ಅರಿವ ಮೂಡಿಸಲು ಶಿಕ್ಷಣ ಇಲಾಖೆ ವಿಶೇಷ ಕಾರ್ಯಕ್ರಮ ನಡೆಸಲು ಸಜ್ಜಾಗಿದೆ. ಇನ್ನು ಪೊಲೀಸ್ ಇಲಾಖೆ ಪಟಾಕಿ ಮಳಿಗೆಗಳ ಮೇಲೆ ಹದ್ದಿನ ಕಣ್ಣು ಇರಿಸಲಿದೆ. ಪಟಾಕಿ ಹೊಡೆದ ಮೇಲೆ ಆಗುವ ತ್ಯಾಜ್ಯದ ವಿಲೇವಾರಿಗೆ ವಾಹನಗಳ ನೇಮಕ ಮಾಡಲು ಸೂಚಿಸಲಾಗಿದೆ. ಅದಲ್ಲದೇ ಪಟಾಕಿಯಿಂದ ಯಾವುದೇ ಹಾನಿ ಉಂಟಾಗದಂತೆ ತಡೆಯಲು ಮುಂಜಾಗೃತ ದೃಷ್ಟಿಯಿಂದ ಮಂಡಳಿ ಅಗ್ನಿಶಾಮಕ ಇಲಾಖೆ ಜತೆ ಚರ್ಚಿಸಿದೆ. ಅಗತ್ಯ ಕ್ರಮವಹಿಸುವಂತೆ ಕೋರಿದೆ.

ಹಸಿರು ಪಟಾಕಿಗೆ ಮಾತ್ರವೇ ಅವಕಾಶ ಏಕೆ?
ಸಾಮಾನ್ಯ ಪಟಾಕಿಗಳಿಗಿಂತ ಈ ಹಸಿರು ಪಟಾಕಿಗಳು ಕಡಿಮೆ ಬೆಳಕು ಹಾಗೂ ಶಬ್ದವನ್ನು ಹೊರ ಸೂಸುತ್ತವೆ. ಸಾಮಾನ್ಯ ಪಟಾಕಿಗಳಿಗಿಂತಲೂ ಹಸಿರು ಪಟಾಕಿ ಶೇ. 40-50ರಷ್ಟು ಕಡಿಮೆ ಶಬ್ದದಲ್ಲಿ ಸಿಡಿಯುತ್ತವೆ. ಈ ವೇಳೆ ನೈಟ್ರೋಜನ್, ಆಕ್ಸೈಡ್, ಸಲ್ಫರ್ ಡೈ ಆಕ್ಸೈಡ್ ಹೊರಚಲ್ಲುವ ಪಟಾಕಿಗಳನ್ನು ಹಸಿರು ಪಟಾಕಿ ಎನ್ನುತ್ತಾರೆ. ಇವುಗಳಲ್ಲಿ ಅಪಾಯಕಾರಿ ರಸಾಯನಿಕಗಳ ಬಳಕೆ ಪ್ರಮಾಣ ತುಂಬಾ ಕಡಿಮೆ ಇರುತ್ತದೆ. ಹೀಗಾಗಿ ಇವುಗಳು ಪರಿಸರದ ಮೇಲೆ ಅಷ್ಟಾಗಿ ಪರಿಣಾಮ ಬೀರುವುದಿಲ್ಲ. ಈ ಕಾರಣಕ್ಕೆ ಈ ಹಸಿರು ಪಟಾಕಿಗಳಿಗೆ ಮಾತ್ರ ಹಬ್ಬಗಳಲ್ಲಿ ಅವಕಾಶ ನೀಡಲಾಗುತ್ತದೆ.
-
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ












Click it and Unblock the Notifications