ಭಾರತ ಬಂದ್ಗೆ ಖಾಸಗಿ ಶಾಲೆಗಳ ಬೆಂಬಲ: ಆನ್ಲೈನ್ ಕ್ಲಾಸ್ ಸ್ಥಗಿತ
ಬೆಂಗಳೂರು, ಡಿಸೆಂಬರ್ 07: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ರೈತರು ಡಿಸೆಂಬರ್ 8 ರಂದು ರಾಷ್ಟ್ರವ್ಯಾಪಿ ಬಂದ್ಗೆ ಕರೆ ನೀಡಿದ್ದು, ಇದಕ್ಕೆ ಖಾಸಗಿ ಶಾಲೆಗಳು ಬೆಂಬಲ ಸೂಚಿಸಿವೆ.
ಡಿಸೆಂಬರ್ 8 ರಂದು ಆನ್ಲೈನ್ ತರಗತಿಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ತಿಳಿಸಿದೆ. ಈ ಕುರಿತು ಕ್ಯಾಮ್ಸ್ ಖಾಸಗಿ ಶಾಲೆಗಳ ಒಕ್ಕೂಟದ ಕಾರ್ಯದರ್ಶಿ ಶಶಿಕುಮಾರ್ ಹೇಳಿದ್ದಾರೆ.
ಡಿಸೆಂಬರ್ 8 ರಂದು ಭಾರತ ಬಂದ್: ಕರ್ನಾಟಕ ರೈತ ಸಂಘ ಬೆಂಬಲ
ಬಂದ್ಗೆ ಬೆಂಬಲ ವ್ಯಕ್ತಪಡಿಸಿ ಆನ್ಲೈನ್ ತರಗತಿಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. ಪರೀಕ್ಷೆಗಳನ್ನು ಹೊರತುಪಡಿಸಿ ಆನ್ಲೈನ್ ತರಗತಿ ಸ್ಥಗಿತಗೊಳಿಸಲಾಗುತ್ತದೆ. ಖಾಸಗಿ ಅನುದಾನರಹಿತ ಶಾಲೆಗಳಿಂದ ಬೆಂಬಲ ನೀಡುತ್ತೇವೆ ಎಂದು ಅವರು ತಿಳಿಸಿದ್ದಾರೆ.
ಕೊರೊನಾದಿಂದ ಆರ್ಥಿಕವಾಗಿ ಪೆಟ್ಟು ಬಿದ್ದಿರುವಾಗ ಪದೇ ಪದೇ ಬಂದ್ ನಡೆಸಿದರೆ ಗಾಯದ ಮೇಲೆ ಬರೆ ಎಳೆದಂತಾಗುತ್ತದೆ ಎಂಬ ಉದ್ದೇಶದಿಂದ ಕೆಲ ಸಂಘಟನೆಗಳು ನಾಳೆಯ ಭಾರತ್ ಬಂದ್ಗೆ ಬೆಂಬಲ ನೀಡದಿರಲು ನಿರ್ಧರಿಸಿವೆ.
ಬೃಹತ್ ಬೆಂಗಳೂರು ಹೋಟೆಲ್ ಮಾಲೀಕರ ಸಂಘ, ಎಪಿಎಂಸಿ ನಾಳೆಯ ಭಾರತ್ ಬಂದ್ ಆಚರಣೆಯಿಂದ ಹಿಂದೆ ಸರಿದಿವೆ. ಪ್ರವೀಣ್ ಶೆಟ್ಟಿ ಬಣದ ಕರ್ನಾಟಕ ರಕ್ಷಣಾ ವೇದಿಕೆ ತಾನು ರೈತರ ಹೋರಾಟಕ್ಕೆ ನೈತಿಕ ಬೆಂಬಲವಷ್ಟೇ ನೀಡುವುದಾಗಿ ತಿಳಿಸಿದೆ.
ಆಗಾಗ ಬಂದ್ಗಳು ನಡೆಯುತ್ತಲೇ ಇವೆ. ಹೋಟೆಲ್ ಮಾಲೀಕರು ಈಗ ಯಾವುದೇ ಬಂದ್ಗೆ ಬೆಂಬಲ ನೀಡುವುದಿಲ್ಲ. ಡಿಸೆಂಬರ್ 8 ರಂದು ಮಂಗಳವಾರ ಎಲ್ಲಾ ಹೋಟೆಲ್ಗಳು ತೆರೆದಿರುತ್ತವೆ ಎಂದು ಬೃಹತ್ ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ ಸಿ ರಾವ್ ತಿಳಿಸಿದ್ದಾರೆ.
ಇನ್ನು ಈ ಬಗ್ಗೆ ಮಾತನಾಡಿರುವ ಕರವೇಯ ಒಂದು ಬಣದ ಅಧ್ಯಕ್ಷ ಪ್ರವೀಣ್ ಶೆಟ್ಟಿ, ತಮ್ಮ ಸಂಘಟನೆ ನಾಳೆ ಬಂದ್ನಲ್ಲಿ ಬೀದಿಗಿಳಿದು ಹೋರಾಟ ಮಾಡೋಕೆ ಆಗಲ್ಲ.
ತಾವು ಮೊದಲಿಂದಲೂ ರೈತರಿಗೆ ಬೆಂಬಲ ಕೊಡುತ್ತಾ ಬಂದಿದ್ದೇವೆ. ಈ ಬಾರಿ ಹೋಟೆಲ್ ಉದ್ಯಮ, ಖಾಸಗಿ ಸಾರಿಗೆ ಉದ್ಯಮ ಸೇರಿದಂತೆ ಬಹಳಷ್ಟು ಮಂದಿ ನಷ್ಟದಲ್ಲಿದ್ದಾರೆ. ಪದೇ ಪದೇ ಬಂದ್ ಮಾಡೋಕೆ ಆಗಲ್ಲ. ಹೀಗಾಗಿ, ನಾಳೆಯ ಬಂದ್ಗೆ ತಾವು ನೈತಿಕ ಬೆಂಬಲವಷ್ಟೇ ಕೊಡುತ್ತೇವೆ ಎಂದಿದ್ದಾರೆ.
Recommended Video