ಕಾವೇರಿ ವಿವಾದಕ್ಕೆ ಶಾಶ್ವತ ಪರಿಹಾರ ಸೂತ್ರ ನೀಡಿದ ಕರ್ನಾಟಕ
ಮೇಕೆ ದಾಟುವಿನಲ್ಲಿ ಕಟ್ಟಲಾಗುವ ಅಣೆಕಟ್ಟಿನಿಂದ ತಮಿಳುನಾಡಿಗೆ ಮಾಸಗಳ ಲೆಕ್ಕಾಚಾರದಲ್ಲಿ ನೀರು ಬಿಡಲು ಸಹಾಯವಾಗುವುದೆಂಬುದು ಕರ್ನಾಟಕದ ಲೆಕ್ಕಾಚಾರ.
ಬೆಂಗಳೂರು, ಫೆಬ್ರವರಿ 21: ದಶಕಗಳಿಂದಲೂ ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಹಾಗೂ ತಮಿಳುನಾಡು ಸರ್ಕಾರಗಳು ವಿವಾದ ಎಬ್ಬಿಸುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಶಾಶ್ವತ ಪರಿಹಾರದ ಸೂತ್ರವನ್ನು ಕರ್ನಾಟಕ ನೀಡಿದೆ. ಆದರೆ,ಇದನ್ನು ತಮಿಳುನಾಡು ಒಪ್ಪಬೇಕಷ್ಟೇ.
ಈಗಾಗಲೇ ಕರ್ನಾಟಕ ಸರ್ಕಾರವು ಮೇಕೆ ದಾಟುವಿನಲ್ಲಿ ಅಣೆಕಟ್ಟೊಂದನ್ನು ನಿರ್ಮಿಸಲು ನಿರ್ಧರಿಸಿದೆ. ಈಗಾಗಲೇ ಅದಕ್ಕೆ ಕರ್ನಾಟಕದ ಸಚಿವ ಸಂಪುಟದ ಅನುಮೋದನೆಯೂ ಸಿಕ್ಕಿದೆ. ಇದಾಗಲೇ ಹಳೆಯ ವಿಚಾರ.

ಆದರೆ, ಅಲ್ಲಿ ಅಣೆಕಟ್ಟು ನಿರ್ಮಾಣದಿಂದ ತಮಿಳುನಾಡಿಗೆ ಮಾಸಗಳ ಲೆಕ್ಕಾಚಾರದಲ್ಲಿ ನೀರು ಬಿಡಲು ಸಾಧ್ಯವಾಗುತ್ತದೆ. ತಿಂಗಳ ಲೆಕ್ಕದಲ್ಲಿ ನೀರು ಬಿಡಲು ಈಗಾಗಲೇ ಕಾವೇರಿ ನ್ಯಾಯಾಧೀಕರಣವು ಸೂಚಿಸಿರುವುದನ್ನು ಪಾಲಿಸಲೂ ಅನುಕೂಲವಾಗುತ್ತದೆ.
ಅಲ್ಲದೆ, ಮೇಕೆ ದಾಟುವಿನಲ್ಲಿ ಕಟ್ಟಲಾಗುವ ಅಣೆಕಟ್ಟು 65 ಟಿಎಂಸಿ ನೀರಿನ ಸಾಮರ್ಥ್ಯ ಹೊಂದಿದ್ದು, ಕೃಷ್ಣ ಸಾಗರ ಅಣೆಕಟ್ಟಿಗಿಂತಲೂ ಹೆಚ್ಚಿನ (45 ಟಿಎಂಸಿ) ದೊಡ್ಡದಾಗಿರಲಿದೆ. ಸುಮಾರು 6 ಸಾವಿರ ಕೋಟಿ ವೆಚ್ಛದಲ್ಲಿ, 5 ಸಾವಿರ ಎಕರೆ ಭೂಭಾಗವನ್ನು ಆಕ್ರಮಿಸಿಕೊಳ್ಳುವ ಈ ಅಣೆಕಟ್ಟು ನಿರ್ಮಿಸಿದರೆ ಇದು ಭವಿಷ್ಯದಲ್ಲಿ ಉತ್ತಮವಾಗಿ ಮಳೆಯಾದ ವರ್ಷದಲ್ಲಿ ತಮಿಳುನಾಡಿಗೆ ನೀರು ಬಿಡಲು ಯಾವುದೇ ತಕರಾರು ಇರದು ಎಂದು ಕರ್ನಾಟಕ ಹೇಳಿದೆ.
ಆದರೆ, ತಮಿಳುನಾಡು ಒಪ್ಪಿದರೆ ಮಾತ್ರ ಈ ಯೋಜನೆ ಸಾಧ್ಯವಾಗಲಿದೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು











Click it and Unblock the Notifications