ಕಾವೇರಿ ವಿವಾದಕ್ಕೆ ಶಾಶ್ವತ ಪರಿಹಾರ ಸೂತ್ರ ನೀಡಿದ ಕರ್ನಾಟಕ
ಮೇಕೆ ದಾಟುವಿನಲ್ಲಿ ಕಟ್ಟಲಾಗುವ ಅಣೆಕಟ್ಟಿನಿಂದ ತಮಿಳುನಾಡಿಗೆ ಮಾಸಗಳ ಲೆಕ್ಕಾಚಾರದಲ್ಲಿ ನೀರು ಬಿಡಲು ಸಹಾಯವಾಗುವುದೆಂಬುದು ಕರ್ನಾಟಕದ ಲೆಕ್ಕಾಚಾರ.
ಬೆಂಗಳೂರು, ಫೆಬ್ರವರಿ 21: ದಶಕಗಳಿಂದಲೂ ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಹಾಗೂ ತಮಿಳುನಾಡು ಸರ್ಕಾರಗಳು ವಿವಾದ ಎಬ್ಬಿಸುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಶಾಶ್ವತ ಪರಿಹಾರದ ಸೂತ್ರವನ್ನು ಕರ್ನಾಟಕ ನೀಡಿದೆ. ಆದರೆ,ಇದನ್ನು ತಮಿಳುನಾಡು ಒಪ್ಪಬೇಕಷ್ಟೇ.
ಈಗಾಗಲೇ ಕರ್ನಾಟಕ ಸರ್ಕಾರವು ಮೇಕೆ ದಾಟುವಿನಲ್ಲಿ ಅಣೆಕಟ್ಟೊಂದನ್ನು ನಿರ್ಮಿಸಲು ನಿರ್ಧರಿಸಿದೆ. ಈಗಾಗಲೇ ಅದಕ್ಕೆ ಕರ್ನಾಟಕದ ಸಚಿವ ಸಂಪುಟದ ಅನುಮೋದನೆಯೂ ಸಿಕ್ಕಿದೆ. ಇದಾಗಲೇ ಹಳೆಯ ವಿಚಾರ.

ಆದರೆ, ಅಲ್ಲಿ ಅಣೆಕಟ್ಟು ನಿರ್ಮಾಣದಿಂದ ತಮಿಳುನಾಡಿಗೆ ಮಾಸಗಳ ಲೆಕ್ಕಾಚಾರದಲ್ಲಿ ನೀರು ಬಿಡಲು ಸಾಧ್ಯವಾಗುತ್ತದೆ. ತಿಂಗಳ ಲೆಕ್ಕದಲ್ಲಿ ನೀರು ಬಿಡಲು ಈಗಾಗಲೇ ಕಾವೇರಿ ನ್ಯಾಯಾಧೀಕರಣವು ಸೂಚಿಸಿರುವುದನ್ನು ಪಾಲಿಸಲೂ ಅನುಕೂಲವಾಗುತ್ತದೆ.
ಅಲ್ಲದೆ, ಮೇಕೆ ದಾಟುವಿನಲ್ಲಿ ಕಟ್ಟಲಾಗುವ ಅಣೆಕಟ್ಟು 65 ಟಿಎಂಸಿ ನೀರಿನ ಸಾಮರ್ಥ್ಯ ಹೊಂದಿದ್ದು, ಕೃಷ್ಣ ಸಾಗರ ಅಣೆಕಟ್ಟಿಗಿಂತಲೂ ಹೆಚ್ಚಿನ (45 ಟಿಎಂಸಿ) ದೊಡ್ಡದಾಗಿರಲಿದೆ. ಸುಮಾರು 6 ಸಾವಿರ ಕೋಟಿ ವೆಚ್ಛದಲ್ಲಿ, 5 ಸಾವಿರ ಎಕರೆ ಭೂಭಾಗವನ್ನು ಆಕ್ರಮಿಸಿಕೊಳ್ಳುವ ಈ ಅಣೆಕಟ್ಟು ನಿರ್ಮಿಸಿದರೆ ಇದು ಭವಿಷ್ಯದಲ್ಲಿ ಉತ್ತಮವಾಗಿ ಮಳೆಯಾದ ವರ್ಷದಲ್ಲಿ ತಮಿಳುನಾಡಿಗೆ ನೀರು ಬಿಡಲು ಯಾವುದೇ ತಕರಾರು ಇರದು ಎಂದು ಕರ್ನಾಟಕ ಹೇಳಿದೆ.
ಆದರೆ, ತಮಿಳುನಾಡು ಒಪ್ಪಿದರೆ ಮಾತ್ರ ಈ ಯೋಜನೆ ಸಾಧ್ಯವಾಗಲಿದೆ.
-
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್












Click it and Unblock the Notifications