ಪ್ರಶ್ನೆ ಪತ್ರಿಕೆ ಸೋರಿಕೆಗೆ ವಾಟ್ಸಪ್ ಗ್ರೂಪ್ ಮಾಡಿದ್ದರು!
ಬೆಂಗಳೂರು, ಮೇ 12 : ದ್ವಿತೀಯ ಪಿಯುಸಿ ಪ್ರಶ್ನೆ ಪ್ರತಿಕೆ ಸೋರಿಕೆ ಮಾಡಲು ಆರೋಪಿಗಳು ವಾಟ್ಸಪ್ ಗ್ರೂಪ್ ಮಾಡಿಕೊಂಡಿದ್ದರು ಎಂಬುದು ತನಿಖೆಯಿಂದ ಬಹಿರಂಗವಾಗಿದೆ. ಬಂಧಿತ ಕಿರಣ್ ವಿಚಾರಣೆ ವೇಳೆ ಸಿಐಡಿ ಪೊಲೀಸರಿಗೆ ಈ ಬಗ್ಗೆ ಮಾಹಿತಿ ಸಿಕ್ಕಿದೆ.
ಹಾನಗಲ್ ಉಪ ಖಜಾನೆ ದ್ವಿತೀಯ ದರ್ಜೆ ಸಹಾಯಕ ಸಂತೋಷ್ ಕಿರಣ್ಗೆ ಪ್ರಶ್ನೆ ಪತ್ರಿಕೆಯ ಫೋಟೋಗಳನ್ನು ತೆಗೆದುಕೊಳ್ಳಲು ಸಹಾಯ ಮಾಡಿದ್ದ. ತುಮಕೂರಿನಲ್ಲಿ ಮಂಗಳವಾರ ಬಂಧಿಸಲಾದ ಕಿರಣ್ನನ್ನು ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಿ, 10 ದಿನಗಳ ಕಾಲ ಸಿಐಡಿ ವಶಕ್ಕೆ ಪಡೆಯಲಾಗಿದೆ. [ಪಿಯು ಪ್ರಶ್ನೆ ಪ್ರತ್ರಿಕೆ ಸೋರಿಕೆಯಾಗಿದ್ದು ಹಾವೇರಿಯಲ್ಲಿ]

ಹಾವೇರಿ ಜಿಲ್ಲೆಯ ಹಾನಗಲ್ ಉಪ ಖಜಾನೆ ದ್ವಿತೀಯ ದರ್ಜೆ ಸಹಾಯಕ ಸಂತೋಷ್ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ತೇರಗಾಂವ್ ಗ್ರಾಮದವನು. ಮಾರ್ಚ್ 19ರಂದು ಸಂತೋಷ್ ಸಂಪರ್ಕಿಸಿದ್ದ ಕಿರಣ್ ಹಣದ ಆಮಿಷವೊಡ್ಡಿ ಪತ್ರಿಕೆ ಬಹಿರಂಗ ಮಾಡಲು ಸಹಕಾರ ನೀಡುವಂತೆ ಹೇಳಿದ್ದ. [ಪತ್ರಿಕೆ ಸೋರಿಕೆ : ಟೊಮೆಟೊ ಅಣ್ಣನ ಮಗ ಸಿಕ್ಕಿಬಿದ್ದ]
ಕಿರಣ್ನಿಂದ ಹಣ ಪಡೆದ ಸಂತೋಷ್ ಉಪ ಖಜಾನೆ ಬೀಗವನ್ನು ಕಿರಣ್ಗೆ ನೀಡಿ, ಆತ ಪತ್ರಿಕೆಯ ಫೋಟೋ ತೆಗೆದುಕೊಳ್ಳಲು ನೆರವು ನೀಡಿದ್ದ. ಪತ್ರಿಕೆ ಫೋಟೋ ತಗೆದುಕೊಂಡ ಕಿರಣ್ ನಂತರ ಅದನ್ನು ಕೈ ಬರಹದಲ್ಲಿ ಬರೆದು, ಪತ್ರಿಕೆ ಸೋರಿಕೆಗಾಗಿಯೇ ಮಾಡಿದ್ದ ವಾಟ್ಸಪ್ ಗ್ರೂಪ್ ಮೂಲಕ ಉಳಿದ ಆರೋಪಿಗಳಿಗೆ ಕಳುಹಿಸಿದ್ದ. [ಪತ್ರಿಕೆ ಹಗರಣದಲ್ಲಿ ಕೋಕಾ ಪ್ರಯೋಗ, ಏನಿದು ಕೋಕಾ?]
ಸಂತೋಷ್ ಆಸ್ಪತ್ರೆಯಲ್ಲಿ : ಸಂತೋಷ್ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆತ ಗುಣಮುಖನಾದ ನಂತರ ಸಿಐಡಿ ಪೊಲೀಸರು ಆತನನ್ನು ಬಂಧಿಸಲಿದ್ದಾರೆ. ಕೆಲವು ದಿನಗಳ ಹಿಂದೆ ಆಸ್ತಿ ವ್ಯಾಜ್ಯದ ವಿಚಾರದಲ್ಲಿ ಸೋದರ ಸಂಬಂಧಿಗಳ ಜೊತೆ ಜಗಳವಾಡುವಾಗ ಸಂತೋಷ್ ಗಾಯಗೊಂಡಿದ್ದು, ಆಸ್ಪತ್ರೆ ಸೇರಿದ್ದಾನೆ.
-
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ












Click it and Unblock the Notifications