Get Updates
Get notified of breaking news, exclusive insights, and must-see stories!

Karnataka Rain: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಮುಂದಿನ 3 ದಿನಗಳಲ್ಲಿ 5 ಜಿಲ್ಲೆಗಳಲ್ಲಿ ಮಳೆ: ಐಎಂಡಿ

Karnataka Rain: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಬಹುತೇಕ ಒಣಹವೆ ಮುಂದುವರಿದಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮುಂದಿನ ಮೂರು ದಿನಗಳಲ್ಲಿ ಐದು ಜಿಲ್ಲೆಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮುನ್ಸೂಚನೆ ನೀಡಿದೆ.

ಕರ್ನಾಟಕದ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆ 1.6 ಡಿಗ್ರಿ ಸೆಲ್ಸಿಯಸ್‌ನಿಂದ 3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ದಕ್ಷಿಣ ಕರ್ನಾಟಕದ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಮಾನ್ಯಕ್ಕಿಂತ ಗಮನಾರ್ಹವಾಗಿ 3.1 ಡಿಗ್ರಿ ಸೆಲ್ಸಿಯಸ್‌ನಿಂದ 5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಉಳಿದ ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯವಾಗಿತ್ತು. ಫೆಬ್ರವರಿ 19 ಹಾಗೂ ಮುಂದಿನ ಮೂರು ದಿನಗಳ ಅವಧಿಗೆ ಬೆಂಗಳೂರು ಹಾಗೂ ಕರ್ನಾಟಕದಲ್ಲಿ ಹವಾಮಾನ ಹೇಗೆ ಇರಲಿದೆ ಎನ್ನುವ ವಿವರ ಇಲ್ಲಿದೆ.

Karnataka Rain Alert Low Pressure in Bay of Bengal IMD Predicts Showers in 5 Districts Over Next 3 Days

ಸಮಭಾಜಕ ಹಿಂದೂ ಮಹಾಸಾಗರ ಮತ್ತು ಪಕ್ಕದ ನೈಋತ್ಯ ಬಂಗಾಳ ಕೊಲ್ಲಿಯ ಮೇಲೆ ಇಂದು ಕಡಿಮೆ ಒತ್ತಡದ ಪ್ರದೇಶವು, ಅದೇ ಪ್ರದೇಶದಲ್ಲಿ ಮುಂದುವರಿದಿದೆ. ಸಂಬಂಧಿತ ಮೇಲ್ಭಾಗದ ವಾಯುವ್ಯ ಪರಿಚಲನೆಯು ಸರಾಸರಿ ಸಮುದ್ರ ಮಟ್ಟದಿಂದ 5.8 ಕಿ.ಮೀ. ವರೆಗೆ ವಿಸ್ತರಿಸಿದೆ. ಇದು ಮುಂದಿನ 24 ಗಂಟೆಗಳಲ್ಲಿ ಶ್ರೀಲಂಕಾದ ಕಡೆಗೆ ಪಶ್ಚಿಮ - ವಾಯುವ್ಯಕ್ಕೆ ಚಲಿಸುವ ಮತ್ತು ನೈಋತ್ಯ ಬಂಗಾಳಕೊಲ್ಲಿ ಮತ್ತು ಪಕ್ಕದ ಸಮಭಾಜಕ ಹಿಂದೂ ಮಹಾಸಾಗರದ ಮೇಲೆ ಹೆಚ್ಚು ಗುರುತಿಸಲ್ಪಡುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿಯು ಉಲ್ಲೇಖಿಸಿದೆ.

ಇನ್ನು ದಕ್ಷಿಣ ಕೇರಳ ಕರಾವಳಿಯ ಆಗ್ನೇಯ ಅರೇಬಿಯನ್ ಸಮುದ್ರದ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ವರೆಗೆ ವಿಸ್ತರಿಸಿರುವ ಮೇಲ್ಭಾಗದ ವಾಯು ಚಂಡಮಾರುತದ ಪರಿಚಲನೆ ಕಡಿಮೆಯಾಗಿದೆ. ಇನ್ನು ರಾಜ್ಯದ ಸಮತಟ್ಟಾದ ಪ್ರದೇಶ ದಾವಣಗೆರೆ ಯಲ್ಲಿ ಕನಿಷ್ಠ 12.5 ತಾಪಮಾನ ದಾಖಲಾಗಿದೆ.

Karnataka Rain: ಈ ಭಾಗದಲ್ಲಿ ಮಳೆ ಸಾಧ್ಯತೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಕರ್ನಾಟಕದ ವಿವಿಧ ಭಾಗದಲ್ಲಿ ಮಳೆ ಆಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಆಗಲಿದೆ. ಕೊಡಗು, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ ಎರಡು ಮೂರು ದಿನಗಳಲ್ಲಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಹವಾಮಾನ ಯಥಾಸ್ಥಿತಿ

ಇನ್ನು ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಒಣಹವೆ ಯಥಾಸ್ಥಿತಿ ಮುಂದುವರಿಯಲಿದೆ. ಮುಂದಿನ ಐದು ದಿನಗಳಲ್ಲಿ ಕರ್ನಾಟಕದಾದ್ಯಂತ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಗಳಿಲ್ಲ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಹೇಗಿರಲಿದೆ ಹವಾಮಾನ

ಬೆಂಗಳೂರಿನಲ್ಲಿ ಪ್ರಮುಖವಾಗಿ ಶುಭ್ರ ಆಕಾಶ ಮತ್ತು ಸಂಜೆ, ರಾತ್ರಿ ಸಮಯದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು ಬೀಳುವ ಸಾಧ್ಯತೆ ಹೆಚ್ಚು. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಡಿಗ್ರಿ ಸೆಲ್ಸಿಯಸ್ ಹಾಗೂ 18 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಬೆಳಗಾವಿ ವಿಮಾನ ನಿಲ್ದಾಣ, ಬೀದರ್, ದಕ್ಷಿಣ ಒಳನಾಡಿನ ಕರ್ನಾಟಕದ ದಾವಣಗೆರೆ, ಹಾಸನ, ಚಿಂತಾಮಣಿ ಮತ್ತು ಶಿವಮೊಗ್ಗದ ಭಾಗದಲ್ಲಿ ಕನಿಷ್ಠ ತಾಪಮಾನವು 12.5 ಡಿಗ್ರಿ ಸೆಲ್ಸಿಯಸ್ ನಿಂದ 16.6 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿದೆ.

ಉತ್ತರ ಆಂತರಿಕ ಕರ್ನಾಟಕದ ಕೊಪ್ಪಳ, ವಿಜಯಪುರ, ಗದಗ, ರಾಯಚೂರು, ಹಾವೇರಿ ಮತ್ತು ಕಲಬುರಗಿ ಮತ್ತು ಬೆಂಗಳೂರು ಕೆಐಎಎಚ್ ವಿಮಾನ ನಿಲ್ದಾಣ, ಬೆಂಗಳೂರು ಎಚ್‌ಎಎಲ್ ವಿಮಾನ ನಿಲ್ದಾಣ, ಚಿತ್ರದುರ್ಗ, ಬೆಂಗಳೂರು ನಗರ, ಮಂಡ್ಯ ಎಡಬ್ಲ್ಯೂಎಸ್, ಮೈಸೂರು ಮತ್ತು ದಕ್ಷಿಣ ಒಳನಾಡಿನ ಬಳ್ಳಾರಿ ಎಡಬ್ಲ್ಯೂಎಸ್ ಭಾಗದಲ್ಲಿ ಗರಿಷ್ಠ ತಾಪಮಾನವು 16.8 ಡಿಗ್ರಿ ಸೆಲ್ಸಿಯಸ್ ಹಾಗೂ 20.2 ಡಿಗ್ರಿ ಸೆಲ್ಸಿಯಸ್ ಕರಾವಳಿ ಕರ್ನಾಟಕದ ಹೊನ್ನಾವರ, ಕಾರವಾರ, ಮಂಗಳೂರು ಹಾಗೂ ಶಕ್ತಿ ನಗರದಲ್ಲಿ 20.8 ಡಿಗ್ರಿ ಸೆಲ್ಸಿಯಸ್‌ನಿಂದ 23.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+