Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ
Karnataka Rain: ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಆಗುತ್ತಿದೆ. ಆದರೆ ಈ ಬಾರಿ ಹವಾಮಾನ ವೈಪರೀತ್ಯದಿಂದ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರೀ ಸಂಕಷ್ಟ ಎದುರಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕರ್ನಾಟಕದಕ 207 ತಾಲ್ಲೂಕುಗಳಲ್ಲಿ ಈ ವರ್ಷದಲ್ಲಿ ಮಳೆ ಕೊರತೆ ಎದುರಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಮುಂಜಾಗ್ರತೆ ಕ್ರಮ ಕೈಗೊಳ್ಳಲು ಸಂಪುಟ ಉಪ ಸಮಿತಿಯಿಂದ ಹಲವು ಮಹತ್ವದ ಸೂಚನೆಗಳನ್ನು ನೀಡಲಾಗಿದೆ.
ಇನ್ನು ಈಗಾಗಲೇ ಈ ವರ್ಷ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಕೊರತೆ ಎದುರಾಗಿದೆ. ಇದು ಇನ್ನೂ ತೀವ್ರವಾಗಿ ಇರಲಿದೆ ಎಂದು ಅಂದಾಜಿಸಲಾಗಿದೆ. ಹೀಗಾಗಿ, ಹಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಮುಖ್ಯವಾಗಿ ಈ ಬಾರಿ ಕರ್ನಾಟಕದಲ್ಲಿ ಬೇಸಿಗೆ ಸಮಯದಲ್ಲಿ 207 ತಾಲ್ಲೂಕುಗಳ ಕೆಲ ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ ಎಂದು ಅಂದಾಜಿಸಲಾಗಿದೆ. ವಿವಿಧ ಪ್ರದೇಶಗಳಲ್ಲಿ ನೀರಿನ ಅಭಾವ ಎದುರಾಗುವ ಸಾಧ್ಯತೆಯಿದೆ.

ಕರ್ನಾಟಕದ 60 ತಾಲ್ಲೂಕುಗಳಲ್ಲಿ ನೀರಿನ ಕೊರತೆ
ಇನ್ನು 2026ನೇ ಸಾಲಿನಲ್ಲಿ ಕರ್ನಾಟಕದಕ 207 ತಾಲ್ಲೂಕುಗಳಲ್ಲಿ ಈ ವರ್ಷದಲ್ಲಿ ಮಳೆ ಕೊರತೆ ಎದುರಾಗಲಿದ್ದು, ಅದರಲ್ಲಿ 60 ತಾಲ್ಲೂಕುಗಳಲ್ಲಿ ನೀರಿನ ಕೊರತೆ ಇರಲಿದೆ ಎಂದು ಹೇಳಲಾಗಿದೆ. ಹೀಗಾಗಿ, ಕುಡಿಯುವ ನೀರಿನ ಕೊರತೆ ಇರುವ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಲಾಗುತ್ತಿದೆ. ಈಗಾಗಲೇ ರಾಜ್ಯದ 60 ತಾಲ್ಲೂಕುಗಳಲ್ಲಿ ನೀರಿನ ಕೊರತೆ ಎದುರಾಗಿದೆ. ಈ ಪ್ರದೇಶಗಳಲ್ಲಿ ಟ್ಯಾಂಕರ್ಗಳ ಮೂಲಕ ಕುಡಿಯುವ ನೀರು ಪೂರೈಕೆ ಮಾಡುವುದಕ್ಕೆ ಉದ್ದೇಶಿಸಲಾಗಿದೆ.
ಕರ್ನಾಟಕ ಸರ್ಕಾರ ನೀಡಿರುವ ಪ್ರಮುಖ ಸೂಚನೆಗಳು
ಇನ್ನು ಕರ್ನಾಟಕ ಸರ್ಕಾರವು ಈ ಬಾರಿ 207 ತಾಲ್ಲೂಕುಗಳಲ್ಲಿ ಈ ವರ್ಷದಲ್ಲಿ ಮಳೆ ಕೊರತೆ ಇರುವ ಹಿನ್ನೆಯಲ್ಲಿ ಕೆಲವೊಂದು ಪ್ರಮುಖ ಸೂಚನೆಗಳನ್ನು ನೀಡಿದೆ.
1. ಈಗ ಕರ್ನಾಟಕದ 60 ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ.
2. ಜಲಾಶಯಗಳಲ್ಲಿ ಕುಡಿಯುವ ನೀರಿಗೆ ಆದ್ಯತೆ ನೀಡಲು ಸೂಚನೆ.
3. ಜಾನುವಾರುಗಳಿಗೆ ಮೇವು ಲಭ್ಯತೆಯ ಬಗ್ಗೆ ನಿರಂತರ ಮೇಲ್ವಿಚಾರಣೆ ನಡೆಸುವುದಕ್ಕೆ ಅಧಿಕಾರಿಗಳಿಗೆ ಸೂಚನೆ.
4. ಮನರೇಗಾ ಯೋಜನೆಯ ಅಡಿಯಲ್ಲಿ ಜಲ ಸಂರಕ್ಷಣಾ ಕಾಮಗಾರಿಗೆ ಒತ್ತು ನೀಡಲು ನಿರ್ದೇಶನ
ಸಚಿವರ ನೇತೃತ್ವದಲ್ಲಿ ಸಭೆ
ಇನ್ನು ಈ ಬಾರಿ ಕರ್ನಾಟಕದಲ್ಲಿ ಮಳೆ ಕೊರತೆ ಹಾಗೂ 200ಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಮಳೆ ಕೊರತೆ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಾಗಿದೆ. ಕುಡಿಯುವ ನೀರಿನ ಸಮಸ್ಯೆ ಎದುರಾಗಿರುವ ಪ್ರದೇಶದಲ್ಲಿ ಕುಡಿಯುವ ನೀರು ಪೂರೈಸಲು ಮುಂಜಾಗ್ರತಾ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದ ಈಚೆಗೆ ನಡೆದ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಮಹತ್ವದ ನಿರ್ದೇಶನಗಳನ್ನು ನೀಡಲಾಗಿದೆ.
ಕರ್ನಾಟಕದಲ್ಲಿ ಪೂರ್ವ ಮುಂಗಾರು ಹೇಗಿತ್ತು
ಇನ್ನು ಕರ್ನಾಟಕದಲ್ಲಿ ಪೂರ್ವ ಮುಂಗಾರಿನ ಅವಧಿಯಲ್ಲಿ 17 ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗಿದೆ. 5 ಜಿಲ್ಲೆಗಳಲ್ಲಿ ಅಧಿಕ, 6 ಜಿಲ್ಲೆಗಳಲ್ಲಿ ವಾಡಿಕೆ ಹಾಗೂ 3 ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ ಆಗಿದೆ ಎಂದು ವರದಿಯಾಗಿದೆ. ಇದೀಗ ಕರ್ನಾಟಕದಲ್ಲಿ ಮತ್ತೆ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ಸುಧಾರಿಸಬಹುದು ಎನ್ನುವ ನಿರೀಕ್ಷೆಯೂ ಇದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ













Click it and Unblock the Notifications