ಜಲಾಶಯದ ನೀರಿನ ಮಟ್ಟ : ಕೆಆರ್ಎಸ್ನಲ್ಲಿ 2 ಅಡಿ ನೀರು ಕುಸಿತ
ಬೆಂಗಳೂರು, ಸೆಪ್ಟೆಂಬರ್ 18 : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಮೇಲ್ಮೈ ಸುಳಿಗಾಳಿ ಸೃಷ್ಟಿಯಾಗಿದ್ದು, ರಾಜ್ಯದಲ್ಲಿ ಇನ್ನೂ 4 ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ. ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಹೆಚ್ಚಿದ್ದು, ವಿರಾಜಪೇಟೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಬೆಂಗಳೂರು ನಗರದಲ್ಲಿ ಭಾನುವಾರ ಮುಂಜಾನೆಯಿಂದಲೇ ಮಳೆ ಸುರಿದಿದೆ. ನಗರದಲ್ಲಿ ದಿನವಿಡಿ 9.43 ಮಿ.ಮೀ ಮಳೆಯಾಗಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಹೇಳಿದೆ. ಸೆಪ್ಟೆಂಬರ್ ತಿಂಗಳಿನಲ್ಲಿ ನಗರದಲ್ಲಿ ಇದುವರೆಗೂ 363.6 ಮಿ.ಮೀ. ಮಳೆಯಾಗಿದೆ.

'ವಾಯುಭಾರ ಕುಸಿತದಿಂದಾಗಿ ಕರಾವಳಿ, ದಕ್ಷಿಣ ಮತ್ತು ಉತ್ತರ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಉತ್ತಮ ಮಳೆಯಾಗಲಿದೆ' ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸತತ ಎರಡು ವರ್ಷಗಳ ಕಾಲ ಮಳೆ ಕೊರತೆ ಎದುರಿಸಿದ್ದ ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಮಳೆ ಉತ್ತಮವಾಗಿ ಸುರಿದಿದೆ. ಜೂನ್ನಿಂದ ಸೆಪ್ಟೆಂಬರ್ 15ರ ತನಕ ರಾಜ್ಯದಲ್ಲಿ 663 ಮಿ.ಮೀ ಮಳೆಯಾಗಿದೆ. ಶೇ 11ರಷ್ಟು ಮಾತ್ರ ಮಳೆಯ ಕೊರತೆ ಉಂಟಾಗಿದೆ. 2015ರಲ್ಲಿ ಶೇ 20, 2016ರಲ್ಲಿ ಶೇ 16ರಷ್ಟು ಮಳೆಯ ಕೊರತೆ ಉಂಟಾಗಿತ್ತು.
ಹಿಂದಿನ ಮೂರು ವರ್ಷಗಳಿಗೆ ಹೋಲಿಕೆ ಮಾಡಿದರೆ ಈ ಬಾರಿ ದಕ್ಷಿಣ ಒಳನಾಡಿನಲ್ಲಿ ಹೆಚ್ಚು ಮಳೆಯಾಗಿದೆ. ಇಲ್ಲಿಯ ತನಕ 347 ಮಿ.ಮೀ. ಮಳೆ ಸುರಿದಿದೆ. ವಾಡಿಕೆಗಿಂತ ಶೇ 27ರಷ್ಟು ಹೆಚ್ಚು ಮಳೆಯಾಗಿದೆ. ಆಗಸ್ಟ್ ತಿಂಗಳಿನಲ್ಲಿ ವಾಡಿಕೆಗಿಂತ ಶೇ 58ರಷ್ಟು, ಸೆಪ್ಟೆಂಬರ್ನಲ್ಲಿ ಶೇ 161 ರಷ್ಟು ಹೆಚ್ಚು ಮಳೆಯಾಗಿದೆ.
| ಅಣೆಕಟ್ಟುಗಳು | ಗರಿಷ್ಠ ಮಟ್ಟ | ಇಂದಿನ ಮಟ್ಟ |
| ಲಿಂಗನಮಕ್ಕಿ | 1819.00 | 1795.35 |
| ಸುಪಾ | 1849.92 | 1792.68 |
| ವಾರಾಹಿ | 1949.50 | 1923.46 |
| ಹಾರಂಗಿ | 2859.00 | 2856.64 |
| ಹೇಮಾವತಿ | 2922.00 | 2887.75 |
| ಕೆಆರ್ಎಸ್ | 124.80 | 102.78 |
| ಕಬಿನಿ | 2284.00 | 2279.03 |
| ಭದ್ರಾ | 2158.00 | 2137.16 |
| ತುಂಗಭದ್ರಾ | 1633.00 | 1624.91 |
| ಘಟಪ್ರಭಾ | 2175.00 | 2156.28 |
| ಮಲಪ್ರಭಾ | 2079.50 | 2056.00 |
| ಆಲಮಟ್ಟಿ | 1704.81 | 1704.80 |
| ನಾರಾಯಣಪುರ | 1615.00 | 1614.45 |
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ












Click it and Unblock the Notifications