Karnataka Rain: ಕೆಲವೇ ಕ್ಷಣಗಳಲ್ಲಿ ರಾಜ್ಯದ ಈ ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ-ಎಲ್ಲೆಲ್ಲಿ?
Karnataka Rain: ಕಳೆದ ಎರಡು ದಿನಗಳಿಂದ ರಾಜ್ಯದ ಕೆಲವೆಡೆ ಮಾತ್ರ ಜಿನುಗು ಮಳೆಯಾಗಿದೆ ಬಿಟ್ಟರೆ ಬಹುತೇಕ ಜಿಲ್ಲೆಗಳಲ್ಲಿ ಬಿರುಬಿಸಿಲಿನ ವಾತಾವರಣವೇ ಮುಂದುವರೆದಿದೆ. ಇದರ ನಡುವೆಯೂ ಕೆಲವೇ ಕ್ಷಣಗಳಲ್ಲಿ ಈ ಜಿಲ್ಲೆಗಳಿಗೆ ಮಳೆರಾಯ ತಂಪೆರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಯಾವೆಲ್ಲಾ ಭಾಗಗಳಲ್ಲಿ ಮಳೆರಾಯ ಅಬ್ಬರಿಸಲಿದ್ದಾನೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಬಿಸಿಲಿನ ಬೇಗೆಯಿಂದ ಬೆಂದಿದ್ದ ರಾಜ್ಯ ರಾಜಧಾನಿಗೆ ಕಳೆದ ಎರಡು ದಿನಗಳಿಂದ ಸಂಜೆ ಸುಮಾರಿಗೆ ಮಳೆರಾಯ ತಂಪೆರೆದಿದ್ದಾನೆ. ಇನ್ನು ನಿನ್ನೆ (ಮೇ 03) ನಗರದಲ್ಲಿ ಮಧ್ಯಾಹ್ನದ ವೇಳೆಗೆ ಮೋಡ ಕವಿದ ಹಿನ್ನೆಲೆ ಕತ್ತಲಿನ ವಾತಾವರಣ ನಿರ್ಮಾಣವಾಗಿದ್ದು, ಇದಕ್ಕಿದ್ದಂತೆಗೆ ಗುಡುಗು, ಸಿಡಿಲು ಸಹಿತ ಮಳೆ ಆರಂಭವಾಯಿತು. ಇದರಿಂದ ಒಂದೆಡೆ ಜನರಿಗೆ ಸಂತಸ ಮೂಡಿಸಿದರೆ, ಇನ್ನು ಕೆಲವೆಡೆ ಸಣ್ಣಪುಟ್ಟ ಅನಾಹುತಗಳು ಸಂಬವಿಸಿದ್ದವು.

ಇನ್ನು ಇಂದು (ಮೇ 04) ಬೆಳಗ್ಗೆಯಿಂದಲೂ ಬಿಸಿಲಿನ ವಾತಾವರಣವೇ ಮುಂದುವರೆದಿದ್ದು, ಜನರು ಮನೆಯಿಂದ ಹೊರಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮತ್ತೊಂದೆಡೆ ನಗರದಲ್ಲಿ ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗಲಿದೆ ಎನ್ನುವ ಮುನ್ಸೂಚನೆಯನ್ನು ನೀಡಿದೆ.
ಅಷ್ಟೇ ಅಲ್ಲದೆ ಇನ್ನೂ ಕೆಲವೇ ಕ್ಷಣಗಳಲ್ಲಿ ಗಡಿಜಿಲ್ಲೆ ಚಾಮರಾಜನಗರ, ಕೋಲಾರ ಜಿಲ್ಲೆಗಳ ಹಲವೆಡೆ ಗುಡುಗು ಸಹಿತ ಮಳೆರಾಯ ಅಬ್ಬರಿಸಿ ಬೊಬ್ಬೆರೆಯಲಿದ್ದಾನೆ ಎಂದು ಬೆಂಗಳೂರು ಹವಾಮಾನ ಕಚೇರಿ ತನ್ನ ಅಧಿಕೃತ ಟ್ವೀಟ್ ಮೂಲಕ ಮಾಹಿತಿ ರವಾನಿಸಿದೆ.
ಮಳೆ ಮುನ್ಸೂಚನೆ: ಮುಂದಿನ 3 ಗಂಟೆಗಳಲ್ಲಿ ಚಾಮರಾಜನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಮೇಲ್ಮೈ ಗಾಳಿಯೊಂದಿಗೆ ಲಘು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ
— Karnataka Weather (@Bnglrweatherman) May 4, 2024
ಮೂಲ- ಐಎಂಡಿ ಬೆಂಗಳೂರು
Issued on: 04 May, 14:30
Validity Time: 04 May, 17:30#KarnatakaRains pic.twitter.com/5TdNDzmkZh
-
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
IMD Weather Forecast: ದೇಶದ ಈ ಭಾಗಗಳಲ್ಲಿ ಮಾರ್ಚ್ ಅಂತ್ಯದಲ್ಲಿ ಭಾರೀ ಮಳೆ ಮುನ್ಸೂಚನೆ: ಐಎಂಡಿ ಎಚ್ಚರಿಕೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 20ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ












Click it and Unblock the Notifications