Karnataka Rain: ಏಪ್ರಿಲ್ 12ರಿಂದ ರಾಜ್ಯದ ಈ ಭಾಗಗಳಲ್ಲಿ ಮಾತ್ರ ಭಾರೀ ಮಳೆ ಮುನ್ಸೂಚನೆ-ಈ ಭವಿಷ್ಯವಾದ್ರೂ ನಿಜವಾಗಲಿದ್ಯಾ?
Karnataka Rain: ಈಗಾಗಲೇ 2023ರಲ್ಲಿ ಮಳೆಯಿಲ್ಲದೆ ರಾಜ್ಯದ ಬಹುತೇಕ ಭಾಗಗಳಲ್ಲಿ ಭೀಕರ ಬರ ನಿರ್ಮಾಣವಾಗಿದೆ. ಇನ್ನು ಇದೀಗ 2024ರ ಏಪ್ರಿಲ್ ಆರಂಭವಾರೂ ಮಳೆಯಿಲ್ಲ. ಮತ್ತೊಂದೆಡೆ ರಣ ಬಿಸಿಲು ಜನರನ್ನು ಮನೆಯಿಂದ ಹೊರಗಡೆ ಕಾಲಿಡದಂತೆ ಮಾಡಿದೆ. ಇದರ ನಡುವೆಯೂ ಏಪ್ರಿಲ್ 2ನೇ ವಾರದಲ್ಲಿ ಹಲವೆಡೆ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಲೆಕ್ಕಾಚಾರದ ಪ್ರಕಾರ ಮಾರ್ಚ್ ಅಂತ್ಯದ ವೇಳೆಗೆ ಒಂದು ಬಾರಿಯಾದರೂ ಮಳೆ ಆಗಬೇಕು. ಆದರೆ ಇದೆಲ್ಲ ಉಲ್ಟಾ ಆಗಿದ್ದು, ಮಾರ್ಚ್ ಕಳೆದು ಏಪ್ರಿಲ್ ಆರಂಭವಾದರೂ ಮಳೆಯಿಲ್ಲ. ಎಲ್ಲೋ ಒಂದೊಂದು ಜಿಲ್ಲೆಯಲ್ಲಿ ಮಾತ್ರ ಆಗಾಗ ಜಿನುಗು ಮಳೆಯಾಗುತ್ತಿದೆ ಅಷ್ಟೆ. ಇನ್ನು ಹವಾಮಾನ ಇಲಾಖೆಯ ಇಂದಿನ ವರದಿ ಪ್ರಕಾರ ಏಪ್ರಿಲ್ 12ರಿಂದ ಕರಾವಳಿ, ಮಲೆನಾಡು ಭಾಗಗಳಲ್ಲಿ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ.

ದಾವಣಗೆರೆ, ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ನಿನ್ನೆ (ಏಪ್ರಿಲ್ 03) ಸಂಜೆ ಮಳೆಯಾಗಿದ್ದು, ಸ್ವಲ್ಪ ಮಟ್ಟಿಗೆ ಈ ಜಿಲ್ಲೆಗಳ ಜನರಿಗೆ ಅಂತಸ ಮೂಡಿಸಿದಂತಾಗಿದೆ. ಇನ್ನು ಬಹುತೇಕ ಜಿಲ್ಲೆಗಳಲ್ಲಿ ತಾಪಾಮಾನದ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲಿದೆ. ಅದರಲ್ಲೂ ಬಳ್ಳಾ, ರಾಯಚೂರು, ಕಲಬುರಗಿ, ಕೋಲಾರ ಜಿಲ್ಲೆಗಳಲ್ಲಂತೂ ರಣ ಭೀಕರ ಬಿಸಿಲಿನಿಂದ ಜನರು ಮನೆಯಿಂದ ಹೊರಗಡೆ ಬರುವುದೇ ಕಷ್ಟವಾಗಿದೆ. ಅಲ್ಲದೆ ಭಾರೀ ಸೆಖೆ ಹಿನ್ನೆಲೆ ಮನೆಯ ಒಳಗೂ ಇರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಇದೀಗ ಬಿಸಿಲಿನ ಬೇಗೆಯಿಂದ ಬೆಂದಿದ್ದ ಕರಾವಳಿ, ಮಲೆನಾಡು ಭಾಗಗಳ ಜನರಿಗೆ ಹವಾಮಾನ ಇಲಾಖೆ ಸಿಹಿಸುದ್ದಿಯನ್ನು ನೀಡಿದೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಏಪ್ರಿಲ್ 12ರಿಂದ ಮಳೆಯಾದರೆ, ಮಲೆನಾಡಿನಲ್ಲಿ ಒಣಗುತ್ತಿರುವ ಕಾಫಿಗಿಡಗಳಿಗೆ ಜೀವ ಬಂದಂತಾಗುತ್ತದೆ. ಮತ್ತೊಂದೆಡೆ ಬರವನ್ನು ಹೋಗಲಾಡಿಸಿ ರೈತರ ಮುಖದಲ್ಲಿ ಸಂತಸ ಮೂಡಿದಂತಾಗಲಿದೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ












Click it and Unblock the Notifications