Karnataka Rains: ಎಚ್ಚರ, ಎಚ್ಚರ! ಕರ್ನಾಟಕದ ಈ ಜಿಲ್ಲೆಗಳಲ್ಲಿ ಒಂದು ವಾರಗಳ ಕಾಲ ವಿಪರೀತ ಮಳೆ
ಬೆಂಗಳೂರು, ಮೇ 15: ರಾಜ್ಯದಲ್ಲಿ ಮಳೆರಾಯನ ಆರ್ಭಟ ಮುಂದುವರೆಯಲಿದೆ. ಮುಂದಿನ ಒಂದು ವಾರಗಳ ಕಾಲ ಭರ್ಜರಿ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಒಂದು ವಾರಗಳ ಕಾಲ ಹಲವು ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗಲಿದ್ದು, ಮನೆಯಿಂದ ಹೊರ ಬರುವ ಮುನ್ನ ಯೋಚಿಸಬೇಕಾಗಿದೆ.
ಹೌದು, ರಾಜ್ಯದಲ್ಲಿ ಮುಂಗಾರು ಆಗಮನಕ್ಕೂ ಮುನ್ನವೇ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ರೈತರು ಸಂತಸದಲ್ಲಿದ್ದಾರೆ. ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಕಡೆಗಳಲ್ಲಿ ಮಳೆಯಾಗಲಿದೆ. ಅಲ್ಲದೇ ರಾಜ್ಯದಲ್ಲಿ ಮಿಂಚು ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಾಮರಾಜನಗರ, ಹಾಸನ, ಕೊಡಗು,ಮಂಡ್ಯ, ಮೈಸೂರು, ಶಿವಮೊಗ್ಗದಲ್ಲಿ ಹೆಚ್ಚು ಮಳೆಯಾಗಲಿದೆ. ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಮಂಡ್ಯ, ದಾವಣಗೆರೆ, ತುಮಕೂರಿನಲ್ಲಿ ಕೂಡ ಎರಡು ದಿನಗಳ ಬಳಿಕ ಮಳೆ ಜೋರಾಗಲಿದೆ. ಇನ್ನೂ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಾಮರಾಜನಗರ, ಹಾಸನ, ಕೊಡಗು,ಮಂಡ್ಯ, ಮೈಸೂರು, ಶಿವಮೊಗ್ಗದಲ್ಲಿ ಹೆಚ್ಚು ಮಳೆಯಾಗಲಿದೆ. ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ತುಮಕೂರಿನಲ್ಲಿ ಕೂಡ ಎರಡು ದಿನಗಳ ಬಳಿಕ ಮಳೆ ಜೋರಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ,ವಿಜಯನಗರದಲ್ಲೂ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಶ್ರೀರಂಗಪಟ್ಟಣದಲ್ಲಿ ಅತಿ ಹೆಚ್ಚು ಮಳೆಯಾಗಿದೆ, ಮಂಡ್ಯ, ನಿಪ್ಪಾಣಿ, ನಂಜನಗೂಡು, ಚನ್ನಪಟ್ಟಣ, ರಾಮನಗರ, ಹೆಸರಘಟ್ಟ, ಮಾಗಡಿ, ಕೃಷ್ಣರಾಜಪೇಟೆ, ಮದ್ದೂರು, ತಿಪಟೂರು, ಯುಗಟಿ, ತೊಂಡೇಭಾವಿ, ಹುಣಸೂರು, ಅಜ್ಜಂಪುರ, ಸಕಲೇಶಪುರ, ಬೇಗೂರು, ಹಾರಂಗಿಯಲ್ಲೂ ಮಳೆಯಾಗಿದೆ. ಮಳೆಯ ಜೊತೆಗೆ ಗುಡುಗು ಮಿಂಚು ಮತ್ತು ಗಂಟೆಗೆ 40 ರಿಂದ 50 ಕಿ.ಮೀ. ವೇಗದ ಗಾಳಿಯೂ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮಳೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗತುಮಕೂರು, ವಿಜಯನಗರ ಜಿಲ್ಲೆಗಳ ಹಲವೆಡೆ ಗುಡುಗು ಮಿಂಚು ಸಹಿತ ಮಳೆಯಾಗಲಿದ್ದು, ಕರ್ನಾಟಕದ ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೀದರ್, ಕಲಬರುಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
-
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್












Click it and Unblock the Notifications