Karnataka Rain: ಇಂದು ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆರ್ಭಟ: IMD ಮುನ್ಸೂಚನೆ

ಕರ್ನಾಟಕ, ಜೂನ್‌, 15: ರಾಜ್ಯಕ್ಕೆ ಈಗಾಗಲೇ ಮುಂಗಾರು ಪ್ರವೇಶ ಮಾಡಿದ್ದು, ಅದರಲ್ಲೂ ಕರಾವಳಿ ಭಾಗಗಳಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬೆರೆಯುತ್ತಲೇ ಇದ್ದಾನೆ. ಮತ್ತೊಂದೆಡೆ ಈ ಭಾಗದ ಜನರಿಗೆ ಬಿಪರ್‌ಜಾಯ್‌ ಚಂಡಮಾಡುತದ ಆತಂಕವೂ ಕೂಡ ಎದುರಾಗಿದೆ. ಇನ್ನುಳಿದಂತೆ ನಿನ್ನೆ (ಜೂನ್‌ 14) ರಾಜ್ಯದ ಹಲವೆಡೆ ಮಳೆ ಬಿದ್ದಿದ್ದಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹಾಗೆಯೇ ಇಂದು (ಜೂನ್‌ 15) ಕೂಡ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ನೀಡಿದೆ.

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ನಿನ್ನೆ ಅಂದರೆ ಬುಧವಾರ ಬೆಳಗ್ಗೆಯಿಂದ ಸಂಜೆವರೆಗೂ ಬಿಸಿಲಿನ ವಾತವರಣವೇ ಮುಂದುವರೆದಿತ್ತು. ಆದರೆ ಸಂಜೆ ಬಳಿಕ ಮೋಡ ಕವಿದ ವಾತಾವರಣ ಇತ್ತು. ಆದರೂ ನಗರದ ಹಲವೆಡೆ ಮಾತ್ರ ಜಿನುಗು ಮಳೆ ಬಿದ್ದಿದೆ ಎಂದು ಹವಾಮನ ಇಲಾಖೆ ತಿಳಿಸಿದೆ. ಇನ್ನು ಇಂದು ನಗರದ ಹಲವೆಡೆ ಬೆಳಗ್ಗೆಯಿಂದಲೇ ಮೋಡ ಕವಿದಿದ್ದು, ಇನ್ನು ಕೆಲವೆಡೆ ಬಿಸಿಲಿನ ವಾತಾವರಣ ಮುಂದುವರೆದಿದೆ. ಹಾಗೆಯೇ ಇಲ್ಲಿ ಸಂಜೆ ವೇಳೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

Karnataka Rain: Mansoon Rain in Many districts of Karnataka state 0n June 15

ಮತ್ತೊಂದೆಡೆ ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಮುಂಗಾರು ಆರ್ಭಟ ಕಡಿಮೆ ಆಗಿದೆ. ಕೆಲವೆಡೆ ಮಳೆಯಾಗುತ್ತಿದ್ದರೆ ಇನ್ನು ಕೆಲವೆಡೆ ಮಳೆಯೇ ಇಲ್ಲದಂತಾಗಿದೆ. ಇನ್ನು ಮುಂದಿನ 3-4 ದಿನಗಳ ಕಾಲ ರಾಜ್ಯದ ಕರಾವಳಿಯ ಹಲವು ಜಿಲ್ಲೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆ ಗುಡುಗು ಸಹಿತ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಅಲ್ಲದೆ ಬೆಂಗಳೂರಿನಲ್ಲೂ ಸಂಜೆ ವೇಳೆ ಮಳೆರಾಯ ಅಬ್ಬರಿಸುವ ಸಾಧ್ಯತೆಯಿದೆ. ಆದ್ದರಿಂದ ಕಚೇರಿ ಕೆಲಸಗಳಿಗೆ ಹೋಗಿರುವವರು ಬೇಗ ಮನೆ ತಲುಪುವುದು ಒಳ್ಳೆಯದು. ಇನ್ನು ಕಳೆದ ಎರಡು ದಿನಗಳಿಂದ ನಗರದ ಹಲವೆಡೆ ತುಂತುರು ಮಳೆಯಾಗಿದೆ. ಆದರೆ ಇಂದು ಇಲ್ಲಿ ಮಳೆ ಆರ್ಭಟ ಹೆಚ್ಚಿರಲಿದೆ ಎಂದು ತಿಳಿಸಿದೆ.

ಈ ಭಾಗಗಳಲ್ಲಿ ಮಳೆ ಆರ್ಭಟ

ಬುಧವಾರ ಆರ್‌ಟಿ ನಗರ, ಶಿವಾಜಿನಗರ, ಹೆಬ್ಬಾಳ, ಎಂಜಿ ರಸ್ತೆ, ಆರ್.ಆರ್. ನಗರ, ಕೆ.ಆರ್.ಪುರ, ಬೈಯ್ಯಪ್ಪನಹಳ್ಳಿ, ಇಂದಿರಾನಗರ, ಟ್ರಿನಿಟಿ, ಮೆಯೋಹಾಲ್, ಶಾಂತಿನಗರ, ಮೆಜೆಸ್ಟಿಕ್‌ ಸೇರಿ ಹಲವೆಡೆ ತುಂತುರು ಮಳೆ ಆಗಿದೆ. ಅಲ್ಲದೆ ಕರಾವಳಿಯ ಬಹುತೇಕ ಜಿಲ್ಲೆಗಳು ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆ ಬಿದ್ದಿದೆ. ಮತ್ತೊಂದೆಡೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಮಂಗಳೂರಿನಲ್ಲಿ 3 ಸೆ.ಮೀ. ಮಳೆ ಬಿದ್ದಿದೆ ಎಂದು ತಿಳಿಸಿದೆ.

ಉತ್ತರ ಕನ್ನಡ ಜಿಲ್ಲೆಯ ಕದ್ರಾ, ಉಡುಪಿ ಜಿಲ್ಲೆಯ ಕೋಟದಲ್ಲಿ 2 ಸೆಂ.ಮೀ., ಪಣಂಬೂರು, ಮೂಲ್ಕಿ, ಉಪ್ಪಿನಂಗಡಿ, ಧರ್ಮಸ್ಥಳ, ಅಂಕೋಲಾ, ಗೋಕರ್ಣ, ಕುಮಟಾ, ಕುಂದಾಪುರ, ಹುಮನಾಬಾದ್, ಭಾಗಮಂಡಲ, ದೊಡ್ಡಬಳ್ಳಾಪುರ, ಬೇಲೂರು ಹಾಗೂ ತಿಪಟೂರಿನಲ್ಲಿ 1 ಸೆಂ.ಮೀ. ಮಳೆ ಸುರಿದಿದೆ ಎಂದು ತಿಳಿಸಿದೆ.

ಮೀನುಗಾರರಿಗೆ ಎಚ್ಚರಿಕೆ ಸಂದೇಶ

ಇಂದು ರಾಜ್ಯದ ಒಂದೆರಡು ಕಡೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗಾಳಿಯ ವೇಗವು ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಬೀಸಲಿದ್ದು, ಶುಕ್ರವಾರವೂ (ಜೂನ್‌ 15) ಕೂಡ ಇದೇ ವಾತಾವರಣ ಮುಂದುವರೆಯಲಿದೆ. ಅದರಲ್ಲೂ ಕರಾವಳಿ ಭಾಗದಲ್ಲಿ ಮುಂದಿನ 24 ಗಂಟೆಗಳಲ್ಲಿ ಬಿರುಗಾಳಿ ಗಂಟೆಗೆ 40-45 ರಿಂದ 55 ಕಿ.ಮೀ. ವೇಗದಲ್ಲಿ ಬೀಸುವ ಸಂಭವ ಇದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ಸಂದೇಶವನ್ನು ನೀಡಲಾಗಿದೆ.

ಮತ್ತೊಂದೆಡೆ ತೀವ್ರ ಸ್ವರೂಪ ಪಡೆದ ಬಿಪರ್​ಜಾಯ್​ ಚಂಡಮಾರುತ ಕೂಡ ಇಂದು ಗುಜರಾತ್‌ಗೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೆಯೇ ಪಕ್ಕದ ಪಾಕಿಸ್ತಾನದ ಕರಾವಳಿಗೂ ಈ ಚಂಡಮಾರುತ ಪ್ರಭಾವ ಬೀರಲಿದೆ. ಸದ್ಯ ಬಿಪರ್‌ಜಾಯ್ ಪೂರ್ವ-ಮಧ್ಯ ಅರಬ್ಬಿ ಸಮುದ್ರದಲ್ಲಿ ಹೆಚ್ಚಾಗಿದೆ. ಇದು ಗುಜರಾತ್‌ನ ಪೋರ್ಬಂದರ್‌ನಿಂದ ನೈಋತ್ಯಕ್ಕೆ 350 ಕಿ.ಮೀ. ದೂರದಲ್ಲಿ ಇದೆ ಎನ್ನುವ ಮಾಹಿತಿಯನ್ನು ನೀಡಿದೆ.

ಒಂದೆಡ ಮುಂಗಾರು ಮಳೆ ಆರ್ಭಟ ಹೆಚ್ಚಾಗಿದ್ದು, ಮತ್ತೆ ಕೆಲವು ಕಡೆಗಳಲ್ಲಿ ಮಳೆಯೇ ಇಲ್ಲದಂತಾಗಿದೆ. ಇದರಿಂದ ಅನ್ನದಾತರು ಕಂಗಾಲಾಗಿದ್ದಾರೆ. ಇನ್ನು ಕರಾವಳಿ ಭಾಗದ ಜನರಿಗೆ ಬಿಪರ್‌ಜಾಯ್‌ ಚಂಡಮಾರುತದ ಆತಂಕ ಆದರೆ, ಇನ್ನು ಬಯಲು ಸೀಮೆಯಂತಹ ಹಲವು ಜಿಲ್ಲೆಗಳಲ್ಲಿ ಮಳೆಯಿಲ್ಲದೆ ರೈತರು ಮೋಡದ ಕಡೆ ಮುಖ ಮಾಡಿದ್ದಾರೆ. ಅಷ್ಟೇ ಅಲ್ಲದೆ ಕಲವು ಹಳ್ಳಿಗಳಲ್ಲಿ ಮಳೆಗಾಗಿ ಹಿರಿಯರು ನಡೆಸಿಕೊಂಡು ಬಂದಂತಹ ಸಂಪ್ರಾದಾಯದ ಪ್ರಕಾರ ಕತ್ತೆ, ಕಪ್ಪೆ ಸೇರಿದಂತೆ ಇನ್ನಿತರ ಪ್ರಾಣಿಗಳ ಮದುವೆಗಳನ್ನು ಮಾಡುತ್ತಿದ್ದರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+