Rain Alert: ಕೊಡಗು ಜಿಲ್ಲೆಯ ಹಲವು ಕಡೆಗಳಲ್ಲಿ ತಂಪೆರೆದ ಮಳೆ
ಒಂದು ಕಡೆ ಕಾಶ್ಮೀರದಲ್ಲಿ ಹಿಮದ ಮಳೆಯಾಗುತ್ತಿದ್ದರೆ, ಇತ್ತ ಕರ್ನಾಟಕದ ಕಾಶ್ಮೀರ ಕೊಡಗು ಜಿಲ್ಲೆಯಲ್ಲಿ ಬೇಸಿಗೆಯಲ್ಲೇ ಮಳೆ ಆರಂಭವಾಗಿದೆ. ಬುಧವಾರ ಮಧ್ಯಾಹ್ನದಿಂದ ಸಂಜೆಯವರೆಗೆ ಜಿಲ್ಲೆಯ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಿದೆ.
ಬುಧವಾರ ಮಧ್ಯಾಹ್ನ ಮಡಿಕೇರಿ ತಾಲೂಕಿನ ಮೂರ್ನಾಡು ಸಮೀಪದ ಕಿಗ್ಗಾಲುವಿನಲ್ಲಿ ಉತ್ತಮ ಮಳೆಯಾಗಿದೆ. ಅದಾದ ಬಳಿಕ ಕಾಕೋಟು, ಪರಂಬು ಪ್ರದೇಶಗಳಲ್ಲಿ ಕೂಡ ಸಾಧಾರಣ ಮಳೆ ಸುರಿದಿದೆ.

ಕುಶಾಲನಗರ, ಪಿರಿಯಾಪಟ್ಟಣದ ನಡುವೆ ಹಲವು ಕಡೆಗಳಲ್ಲಿ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. @Coorgthekashmir ಎಕ್ಸ್ ಹ್ಯಾಂಡಲ್ನಲ್ಲಿ ಕೊಡಗು ಜಿಲ್ಲೆಯ ಹಲವು ಕಡೆಗಳಲ್ಲಿ ಮಳೆಯಾಗುತ್ತಿರುವ ವಿಡಿಯೋಗಳನ್ನು ಹಂಚಿಕೊಂಡಿದೆ.
ಕುಶಾಲನಗರ, ಪಿರಿಯಾಪಟ್ಟಣದ ಮಧ್ಯ pic.twitter.com/2qKxfOFzmC
— Coorgthekashmirofkarnataka (@Coorgthekashmir) March 13, 2024
ಮಾರ್ಚ್ 20ರ ನಂತರ ಮಡಿಕೇರಿಯ ಹಲವು ಕಡೆಗಳಲ್ಲಿ ಮಳೆಯಾಗುವ ಬಗ್ಗೆ ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದರೂ, ಆದರೆ ನಿರೀಕ್ಷೆಗೂ ಮುನ್ನವೇ ಹಲವು ಪ್ರದೇಶಗಳಲ್ಲಿ ಮಳೆಯಾಗಿರುವುದು ಅಚ್ಚರಿಗೆ ಕಾರಣವಾಗಿದೆ.
ಕಾಕೋಟು ಪರಂಬು pic.twitter.com/v0z1UXZ0Wr
— Coorgthekashmirofkarnataka (@Coorgthekashmir) March 13, 2024
ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆ
ಹವಾಮಾನ ಮುನ್ಸೂಚನೆಗಳ ಪ್ರಕಾರ ರಾಜ್ಯದಲ್ಲಿ ಈ ಬಾರಿ ವಾಡಿಕೆಯಂತೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಮೇ ಜೂನ್ ನಡುವೆ ರಾಜ್ಯದಲ್ಲಿ ಮಳೆಗಾಲ ಶುರುವಾಗಲಿದ್ದು, ವ್ಯಾಪಕ ಮಳೆಯಾಗಲಿದೆ ಎಂದು ಹೇಳಲಾಗಿದೆ.
ಎಲ್ ನಿನೋ ಪ್ರಭಾವದಿಂದಾಗಿ ಜಾಗತಿಕ ತಾಪಮಾನ ಹೆಚ್ಚಳವಾಗಿದ್ದು, ಸದ್ಯ ಎಲ್ ನಿನೋ ಕಡಿಮೆಯಾಗುತ್ತಿದ್ದು, ವಾತಾವರಣ ತಂಪಾಗಲಿದೆ. ಇನ್ನು ಎರಡು ಮೂರು ತಿಂಗಳಲ್ಲಿ ಎಲ್ ನಿನೋ ಕಡಿಮೆಯಾಗಲಿದೆ. ಎಲ್ ನಿನೋ ಪರಿಣಾಮದಿಂದಲೇ ಜಾಗತಿಕವಾಗಿ ಕಳೆದ ಬಾರಿ ಮಳೆ ಕಡಿಯಾಗಿದ್ದಲ್ಲದೆ, ಉಷ್ಣತೆ ಕೂಡ ಹೆಚ್ಚಾಗಿತ್ತು.
ಜಾಗತಿಕ ಮುನ್ಸೂಚನೆ ವ್ಯವಸ್ಥೆ (GFS) ಮಳೆ ಸಂಗ್ರಹ ಹಂಚಿಕೆ ಪಶ್ಚಿಮ ಘಟ್ಟಗಳು, ಕೊಡಗು ಜಿಲ್ಲೆಯ ಕೆಲವು ಭಾಗಗಳಲ್ಲಿ ಈ ಬಾರಿ ಮೊದಲು ಮಳೆಯಾಗಲಿದೆ ಎಂದು ಹೇಳಲಾಗಿತ್ತು. ಅದಕ್ಕೆ ತಕ್ಕಂತೆ ಈಗ ಕೊಡಗು ಜಿಲ್ಲೆಯ ಹಲವು ಕಡೆಗಳಲ್ಲಿ ಮಳೆಯಾಗಿದೆ. ಬೇಸಿಗೆಯಲ್ಲಿ ಮಳೆಯಾದರೆ ಕಾಫಿ ಬೆಳೆಯ ಮೇಲೆ ಪರಿಣಾಮ ಬೀರಬಹುದು ಎಂದು ಬೆಳೆಗಾರರು ಆತಂಕಗೊಂಡಿದ್ದಾರೆ.
ರಾಜ್ಯದಲ್ಲಿ ಮಳೆ ಆರಂಭ ಯಾವಾಗ?
ರಾಜ್ಯದಲ್ಲಿ ಮಳೆ ಯಾವಾಗ ಆರಂಭ ಎನ್ನುವುದನ್ನು ಈಗಲೇ ಖಚಿತವಾಗಿ ಹೇಳಲಾಗದಿದ್ದರೂ ಅವಧಿಗೂ ಮುನ್ನವೇ ಮಳೆ ಆರಂಭವಾಗುವ ಸಾಧ್ಯತೆ ಇದೆ. ಜೂನ್ ವೇಳೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.
ಕ್ಯಾಲೆಂಡರ್ ಪ್ರಕಾರ ಏಪ್ರಿಲ್ 13 ರಿಂದ ಅಶ್ವಿನಿ ಮಳೆ ಆರಂಭವಾಗಲಿದೆ, ಏಪ್ರಿಲ್ 27ರಿಂದ ಭರಣಿ ಮಳೆ ಶುರುವಾಗಲಿದೆ. ಭರಣಿ ಮಳೆ ಉತ್ತಮವಾಗಿ ನಡೆಸಿದರೆ ಬಿಸಿಲಿನಿಂದ ಕಂಗೆಟ್ಟಿರುವ ಜನ ಸ್ವಲ್ಪ ನಿರಾಳರಾಗಲಿದ್ದಾರೆ.
-
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications