Karnataka Rain: ಈ ಜಿಲ್ಲೆಗಳಲ್ಲಿ ಮಾತ್ರ ಸಾಧಾರಣ ಮಳೆ ಸಾಧ್ಯತೆ
ರಾಜ್ಯದಲ್ಲಿ ಮಳೆ ಪ್ರಮಾಣ ತೀರಾ ಕಡಿಮೆಯಾಗಿದ್ದು ಹಲವು ಜಿಲ್ಲೆಗಳಲ್ಲಿ ಬರದ ಛಾಯೆ ಆವರಿಸುತ್ತಿದೆ. ಆದರೂ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುತ್ತಿದೆ. ಮುಂದಿನ ಎರಡು ದಿನಗಳಲ್ಲಿ ರಾಜ್ಯದ 21 ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸೋಮವಾರ ಸಂಜೆ ರಾಜ್ಯದ ವಿಜಯಪುರ, ರಾಯಚೂರು, ಕೊಪ್ಪಳ, ಮತ್ತು ಧಾರವಾಡ ಜಿಲ್ಲೆಗಳಲ್ಲಿ ಮಾತ್ರ ಚದುರಿದಂತೆ ಉತ್ತಮ ಮಳೆಯಾಗಿದೆ. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಆರ್ ಹೆಚ್ ಕ್ಯಾಂಪ್ನಲ್ಲಿ ಕಳೆದ 24 ಗಂಟೆಗಳಲ್ಲಿ 24.5 ಮಿಮೀ ಮಳೆಯಾಗಿದ್ದು ರಾಜ್ಯದಲ್ಲಿ ಅತಿ ಹೆಚ್ಚು ಮಳೆಯಾದ ಪ್ರದೇಶ ಎನಿಸಿಕೊಂಡಿದೆ.

ರಾಯಚೂರು ಜಿಲ್ಲೆಯ ಮಾದಸಿರ್ವಾರ್, ಸಿಂಧನೂರು, ಗಾಣದಾಳ, ವಿಜಯಪುರ ಜಿಲ್ಲೆಯ ಹೊಸಪೇಟೆ, ಮಾದಭಾವಿ, ನಾಗೇನಹಳ್ಳಿ, ಆಲಿಯಾಬಾದ್, ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಜಲಾಶಯ, ಹುಲಗಿ, ಕುಣಿಕೇರಿ, ಕಾಲಕೇರ, ಶಿರೂರು, ಧಾರವಾಡ ಜಿಲ್ಲೆಯ ವರೂರು, ಸಾಸ್ವಿಹಳ್ಳಿ, ಉಗ್ಗಿನಕೇರಿ, ಭದ್ರಾಪುರದಲ್ಲಿ ಉತ್ತಮ ಮಳೆತಾಗಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ಹೇಳಿದೆ.
21 ಜಿಲ್ಲೆಗಳಿಗೆ ಸಾಧಾರಣ ಮಳೆ
ಶಿವಮೊಗ್ಗ, ಕೊಪ್ಪಳ, ರಾಯಚೂರು, ವಿಜಯನಗರ, ಧಾರವಾಡ, ಕಲಬುರಗಿ, ಬಳ್ಳಾರಿ, ವಿಜಯಪುರ, ಯಾದಗಿರಿ, ಉಡುಪಿ, ಬೆಳಗಾವಿ, ಬೀದರ್, ಮಂಡ್ಯ, ಗದಗ, ಬಾಗಲಕೋಟೆ, ಬೆಂಗಳೂರು ನಗರ, ಉತ್ತರ ಕನ್ನಡ, ಹಾವೇರಿ, ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕೊಡಗು, ದಾವಣಗೆರೆ, ಬೆಂಗಳೂರು ಗ್ರಾಮಾಂತರ, ತುಮಕೂರು, ಮೈಸೂರು, ಚಾಮರಾಜನಗರ, ರಾಮನಗರ, ಕೋಲಾರ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆಯ ವರದಿಯಲ್ಲಿ ಮಾಹಿತಿ ನೀಡಿದೆ.
ಕಡಿಮೆಯಾದ ಮಳೆ ಹೆಚ್ಚಿದ ತಾಪಮಾನ
ಮಾನ್ಸೂನ್ ಮಳೆಯ ಕೊರತೆಯಿಂದಾಗಿ ಕರ್ನಾಟಕದಲ್ಲಿ ತಾಪಮಾನ ಏರಿಕೆಯಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಅನೇಕ ಭಾಗಗಳು ಬಹುತೇಕ ಬೇಸಿಗೆಯಂತಹ ಬಿಸಿಲಿಗೆ ಸಾಕ್ಷಿಯಾಗಿವೆ. ಜುಲೈನಲ್ಲಿ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾದ ಕಾರಣ ಪರಿಸ್ಥಿತಿ ಸುಧಾರಿಸುತ್ತದೆ ಎಂದು ನಿರೀಕ್ಷೆ ಮಾಡಲಾಗಿತ್ತು, ಆದರೆ ಆಗಸ್ಟ್ನಲ್ಲಿ ಮಳೆ ಮತ್ತೆ ಕೈಕೊಟ್ಟಿದೆ, 15 ದಿನಗಳಿಂದ ಮಳೆ ಕೊರತೆಯಾಗಿದೆ.
ಜುಲೈನಲ್ಲಿ ಹೆಚ್ಚುವರಿ ಮಳೆಯನ್ನು ದಾಖಲಿಸಿದ ನಂತರ, ಆಗಸ್ಟ್ನ ಆರಂಭದಿಂದ ಪರಿಸ್ಥಿತಿಗಳು ಮತ್ತೆ ಡ್ರೈಯರ್ಗೆ ತಿರುವು ಪಡೆದಿವೆ. ಈ ಬದಲಾವಣೆಯ ಬಹುಪಾಲು ಮಳೆ-ಅನುಕೂಲಕರ ಹವಾಮಾನ ವ್ಯವಸ್ಥೆಗಳ ವಿಶಿಷ್ಟ ಕೊರತೆಯನ್ನು ದೂಷಿಸಬಹುದು, ಇದು ಜುಲೈನಲ್ಲಿ ಹೆಚ್ಚಿನ ಮಳೆಯಿಂದ ಮುಚ್ಚಿಹೋಗಿತ್ತು, ಜೊತೆಗೆ ಮಾನ್ಸೂನ್ ತೊಟ್ಟಿ ತನ್ನ ಸಕ್ರಿಯ ಸ್ಥಿತಿಗೆ ಮರಳಲು ತುಂಬಾ ನಾಚಿಕೆಪಡುತ್ತದೆ.
ಕಳೆದ ಕೆಲವು ದಿನಗಳಿಂದ ಕರ್ನಾಟಕದ ಹಲವು ಭಾಗಗಳಲ್ಲಿ 30°ಸೆ. ಗಿಂತ ಹೆಚ್ಚು ಉಷ್ಣಾಂಶ ದಾಖಲಾಗಿದೆ. ಕರ್ನಾಟಕದ ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ತಾಪಮಾನವು 35 ° ಸೆ. ಅನ್ನು ಮೀರಿದೆ, ಬೆಂಗಳೂರಿನಲ್ಲಿ 30 ° ಸೆ. ಗಿಂತ ಹೆಚ್ಚಿನ ಬೇಸಿಗೆಯ ತಾಪಮಾನವಿದೆ. ಕೊಡಗಿನಲ್ಲಿ ಮಾತ್ರ ಮೂವತ್ತರ ಕೆಳಗೆ ದಾಖಲಾಗಿದ್ದು, 29 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
-
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ












Click it and Unblock the Notifications