ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಮಹಾ ಮಳೆ: ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆ

|
Google Oneindia Kannada News

ಬೆಂಗಳೂರು, ಆಗಸ್ಟ್ 10: ಕರ್ನಾಟಕದ ಭಾರಿ ಮಳೆಗೆ ಸಿಲುಕಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.

Recommended Video

ಸರ್ಕಾರ ಹಾಗೂ ಮಂತ್ರಿಗಳಿಗೆ ಮೇಷ್ಟ್ರ ಪ್ರಶ್ನೆ..? | Oneindia Kannada

ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಆಯುಕ್ತ ಮನೋಜ್ ರಂಜನ್ ಈ ಕುರಿತು ಮಾಹಿತಿ ನೀಡಿದ್ದಾರೆ. ಕಳೆದ ಎರಡು ದಿನಗಳಿಂದ ಎಲ್ಲಾ ಜಲಾಶಯಗಳ ನೀರಿನ ಒಳಹರಿವು ಹಾಗೂ ಹೊರಹರಿವು ಹೆಚ್ಚಾಗಿದೆ. ರಾಜ್ಯದಲ್ಲಿ ಒಟ್ಟು 13 ಮಂದಿ ಮಳೆಗೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ.

ಕರ್ನಾಟಕದ ಈ ಜಿಲ್ಲೆಗಳಲ್ಲಿ ಇನ್ನೂ ಐದು ದಿನ ಮಳೆಯೋ ಮಳೆ!ಕರ್ನಾಟಕದ ಈ ಜಿಲ್ಲೆಗಳಲ್ಲಿ ಇನ್ನೂ ಐದು ದಿನ ಮಳೆಯೋ ಮಳೆ!

ಕಳೆದ ಒಂದು ವಾರದಿಂದ 13 ಮಂದಿ ಸಾವನ್ನಪ್ಪಿದ್ದಾರೆ. ಭೂಕುಸಿತ ಉಂಟಾದ ಪರಿಣಾಮ ತಲಕಾವೇರಿಯ ದೇವಸ್ಥಾನದ ಅರ್ಚಕರು ನಾಪತ್ತೆಯಾಗಿದ್ದಾರೆ.

 Karnataka Rains: Death Toll Rise To 13 In State

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯ ಮುನ್ಸೂಚನೆಯನ್ನು ನೀಡಲಾಗಿದೆ. ಹಾಗೆಯೇ ಹಲವು ನದಿಗಳ ಹರಿವು ಕೂಡ ಹೆಚ್ಚಾಗಿದ್ದು, ಅಲ್ಲಲ್ಲಿ ಭೂಕುಸಿತ ಉಂಟಾಗುವ ಸಾಧ್ಯತೆ ಇದೆ.

ಕರಾವಳಿ ಪ್ರದೇಶದಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದೆ. ಮಲೆನಾಡು ಭಾಗ ಹಾಗೂ ಉತ್ತರ ಒಳನಾಡಿನಲ್ಲಿ ಕೂಡ ಸಾಧಾರಣ ಮಳೆಯಾಗಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮಾತ್ರ ಗಾಳಿಯಿಂದ ಕೂಡಿದ ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕೃಷ್ಣರಾಜ ಸಾಗರ, ಹಾರಂಗಿ, ಹೇಮಾವತಿ, ಕಬಿನಿ ಜಲಾಶಯ ಬಹುತೇಕ ಭರ್ತಿಯಾಗಿದೆ. ಮೈಸೂರಿನ ಹೆಬ್ಬಾಳ ನದಿ ತುಂಬಿ ಹರಿಯುತ್ತಿದೆ. ಎಂಟು ನೆರೆ ಪರಿಹಾರ ಶಿಬಿರವನ್ನು ನಿಯಜಿಸಲಾಗಿದೆ. 278 ಮನೆಗಳಿಗೆ ಹಾನಿಯಾಗಿದೆ. 2140 ಮನೆಗಳಿಗೆ ಸಾಧಾರಣ ಹಾನಿಯಾಗಿದ.

English summary
A red alert has been sounded in seven districts of rain-ravaged Karnataka where one more death was reported on Sunday
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X