Karnataka Rains: ಕೆಲವೇ ಕ್ಷಣಗಳಲ್ಲಿ ಈ ಜಿಲ್ಲೆಗಳಲ್ಲಿ ಮಾತ್ರ ಸುರಿಯಲಿದೆ ಗುಡುಗು ಸಹಿತ ಭಾರೀ ಮಳೆ
Karnataka Rains: ರಾಜ್ಯದಲ್ಲಿ ಈಗಾಗಲೇ ಮುಂಗಾರು ಚುರುಕು ಪಡೆದಿದ್ದು, ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬೆರೆಯುತ್ತಿದ್ದಾನೆ. ಇದರಿಂದ ಕೆರೆ-ಕಟ್ಟೆಗಳು ತುಂಬಿ ಅನಾಹುತಗಳ ಸೃಷ್ಟಿಯಾಗಿರುವ ಘಟನೆಗಳು ಸಂಭವಿಸಿವೆ. ಹಾಗೆಯೇ ಇಂದು (ಜೂನ್ 11) ಕೆಲವೇ ಕ್ಷಣಗಳಲ್ಲಿ ಈ ಭಾಗಗಳಲ್ಲಿ ಗುಡುಗು ಸಹಿತ ಅಬ್ಬರದ ಮಳೆ ಸುರಿಯಲಿದ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎಂದು ಇಲ್ಲಿ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ (ಜೂನ್ 10) ಸಂಜೆ 5 ಗಂಟೆ ವೇಳೆಗೆ ಮಳೆ ಸುರಿದಿದ್ದು, ಇನ್ನು ಇಂದು (ಜೂನ್ 11) ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಸಂಜೆ 5 ಗಂಟೆ ವೇಳೆಗೆ ಮಳೆರಾಯನ ಆರ್ಣಟ ಶುರುವಾಗಿದೆ.

ಈಗಾಗಲೇ, ಚಾಮರಾಜನಗರ, ಕೊಡಗು, ಧಾರವಾಡ, ಚಿಕ್ಕಮಗಳೂರು, ಬಾಗಲಕೋಟೆ, ಹಾಸನ, ದಾವಣಗೆರೆ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಹಲವೆಡೆ ಮಳೆ ಸುರಿದು ಅವಾಂತರ ಸೃಷ್ಟಿಸಿದ್ದು, ಹಾಗೆಯೇ ಇಂದು (ಜೂನ್ 11) ಕೂಡ ಮಳೆರಾಯ ತನ್ನ ಆರ್ಭಟವನ್ನು ಮುಂದುವರೆಸಲಿದ್ದಾನೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಕರಾವಳಿ ಕರ್ನಾಟಕದ ಉಡುಪಿ, ದಕ್ಷಿಣ ಕನ್ನಡ, ಕಾರಾವಾರ ಸೇರಿದಂದರೆ ಹಲವೆಡೆ ಸಾಧಾರಣವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹಾಗೆಯೇ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲೂ ಭಾರೀ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಿದೆ.












Click it and Unblock the Notifications