ರಾಜ್ಯಸಭಾ ಚುನಾವಣೆ: ಜೆಡಿಎಸ್, ಕಾಂಗ್ರೆಸ್ಸಿಗೆ ಮುಖಭಂಗ, ಡಿಕೆಶಿ ಬೇಸರದ ಪ್ರತಿಕ್ರಿಯೆ
ಬೆಂಗಳೂರು, ಜೂನ್ 10: ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದ್ದ ರಾಜ್ಯಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ಮೂರು ಸ್ಥಾನ ಗೆದ್ದರೆ, ಕಾಂಗ್ರೆಸ್ ಒಂದು ಸ್ಥಾನವನ್ನು ಗೆದ್ದಿದೆ. ಆ ಮೂಲಕ, ಜೆಡಿಎಸ್-ಕಾಂಗ್ರೆಸ್ಸಿನ ಜಿದ್ದಿನ ಲಾಭವನ್ನು ಬಿಜೆಪಿ ಪಡೆದುಕೊಂಡಿದೆ.
ಹಲವು ಕುತೂಹಲಕ್ಕೆ ಕಾರಣವಾಗಿದ್ದ ಈ ಚುನಾವಣೆಯಲ್ಲಿ ಬಿಜೆಪಿಯಿಂದ ನಿರ್ಮಲಾ ಸೀತಾರಾಮನ್, ಜಗ್ಗೇಶ್, ಲೆಹರ್ ಸಿಂಗ್ ಮತ್ತು ಕಾಂಗ್ರೆಸ್ಸಿನಿಂದ ಜೈರಾಂ ರಮೇಶ್ ಜಯಗಳಿಸಿದ್ದಾರೆ. ಜೆಡಿಎಸ್ಸಿನಿಂದ ಕುಪೇಂದ್ರ ರೆಡ್ಡಿ ಮತ್ತು ಕಾಂಗ್ರೆಸ್ಸಿನಿಂದ ಎರಡನೇ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮನ್ಸೂರ್ ಆಲಿ ಖಾನ್ ಸೋಲುಂಡಿದ್ದಾರೆ.
ಈ ಬಗ್ಗೆ ಬೇಸರದ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, "ನನಗೆ ಜಾತ್ಯಾತೀತ ಶಕ್ತಿಗಳೆಲ್ಲಾ ಒಂದಾಗುತ್ತದೆ ಎನ್ನುವ ವಿಶ್ವಾಸವಿತ್ತು. ಜೆಡಿಎಸ್ ನವರು ನಮಗೆ ಬೆಂಬಲ ಕೊಡಬಹುದು ಎಂದು ನಿರೀಕ್ಷಿಸಿದ್ದೆವು, ಅದೇ ರೀತಿಯಲ್ಲಿ ಅವರಿಗೆ ನಾವು ಬೆಂಬಲ ಕೊಡಬಹುದು ಎನ್ನುವ ನಿರೀಕ್ಷೆಯಲ್ಲಿ ಅವರಿದ್ದರು, ಆದರೆ ಅದು ಆಗಲಿಲ್ಲ"ಎಂದು ಬೇಸರ ವ್ಯಕ್ತ ಪಡಿಸಿದರು.

" ಈ ಸೋಲಿನ ಬಗ್ಗೆ ನೋವಿದೆ, ಹೊಂದಾಣಿಕೆಯಾಗಲಿಲ್ಲ. ಬಿಜೆಪಿಯವರು ಆಪರೇಶನ್ ಕಮಲದ ಮೂಲಕ ನಮ್ಮ ಶಾಸಕರು ಸೆಳೆದುಕೊಂಡರು. ಇಲ್ಲದಿದ್ದರೆ ಅವರಿಗೆ ಒಂದು ಸ್ಥಾನ ಮಾತ್ರ ಗೆಲ್ಲಲು ಸಾಧ್ಯವಾಗುತ್ತಿತ್ತು"ಎಂದು ಡಿಕೆಶಿ ಹೇಳಿದರು.
"ಎಲ್ಲರಿಗೂ ಸ್ವಾಭಿಮಾನ ಎನ್ನುವುದು ಇರುತ್ತದೆ, ಈಗ ಅದನ್ನೆಲ್ಲಾ ಚಿಂತಿಸಿ ಪ್ರಯೋಜನವಿಲ್ಲ. ಈ ಹಿಂದಿನ ಚುನಾವಣೆಯಲ್ಲೂ ಹೊಂದಾಣಿಕೆಯ ಕೊರತೆಯಾಗಿತ್ತು. ಈ ಬಗ್ಗೆ ಮಾತನಾಡಿ ಹೆಚ್ಚಿನ ಪ್ರಯೋಜನವಾಗುವುದಿಲ್ಲ"ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

"ಬಿಜೆಪಿ ಗೆಲುವಿಗೆ ಸಿದ್ದರಾಮಯ್ಯನವರ ಮೇಲೆ ಆರೋಪ ಹೊರಿಸಿದರೆ ಪ್ರಯೋಜನವಿಲ್ಲ. ಎಲ್ಲರೂ ಅವರವರ ಸಂಖ್ಯೆಯ ಆಧಾರದ ಮೇಲೆ ಚುನಾವಣೆ ಗೆದ್ದಿದ್ದಾರೆ"ಎನ್ನುವ ಮೂಲಕ ಎಚ್.ಡಿ.ಕುಮಾರಸ್ವಾಮಿಯವರ ಆರೋಪಕ್ಕೆ ಹುರುಳಿಲ್ಲ ಎಂದು ಹೇಳಿದರು.
Recommended Video
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications