Get Updates
Get notified of breaking news, exclusive insights, and must-see stories!

ಬಿಜೆಪಿಯ ಕೀಳುಮಟ್ಟದ ರಾಜಕಾರಣ: ತಾಕತ್ತಿದ್ದರೆ ತಮಿಳುನಾಡಲ್ಲಿ ಕನ್ನಡ ನಾಡಗೀತೆ ಹಾಕಿಸಲಿ: ಕರವೇ

ಬೆಂಗಳೂರು, ಏಪ್ರಿಲ್ 28: ಶಿವಮೊಗ್ಗದ ಎನ್‌ಇಎಸ್ ಮೈದಾನದಲ್ಲಿ ಗುರುವಾರ ನಡೆದ ತಮಿಳು ಬಾಂಧವರ ಸಮಾವೇಶದಲ್ಲಿ ತಮಿಳುನಾಡು ಗೀತೆ ಹಾಕಿದ್ದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಖಂಡಿಸಿದೆ. ಬಿಜೆಪಿಗೆ ಈ ಕೀಳುಮಟ್ಟದ ರಾಜಕಾರಣ ಅಗತ್ಯವಿರಲಿಲ್ಲ ಎಂದು ಜರಿದಿದೆ.

ಶಿವಮೊಗ್ಗದಲ್ಲಿ ಬಿಜೆಪಿ ಚುನಾವಣಾ ಉಸ್ತುವಾರಿ ಅಣ್ಣಾಮಲೈ ಅವರ ನೇತೃತ್ವದಲ್ಲಿ ಏಪ್ರಿಲ್ 27 (ಗುರುವಾರ)ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ತಮಿಳರನ್ನು ಓಲೈಸುವ ದೃಷ್ಟಿಯಿಂದ ತಮಿಳು ನಾಡಗೀತೆ ಹಾಡಿಸಿರುವುದು ಅಕ್ಷಮ್ಯ ಅಪರಾಧ. ಅಣ್ಣಾಮಲೈ ಕುಮ್ಮಕ್ಕಿನಿಂದಲೇ ಈ ಘಟನೆ ನಡೆದಿರುವುದು ಸ್ಪಷ್ಟವಾಗಿದೆ ಎಂದು ಕರವೇ ಹೇಳಿದೆ.

Karnataka Rakshana Vedike Has Condemned Of Tamil State Anthem Play In Shivamogga Conference

ಕರ್ನಾಟಕದಲ್ಲಿ ಕನ್ನಡಿಗರಿಗೆ ತಮಿಳರ ಬಗ್ಗೆಯಾಗಲೀ, ತಮಿಳು ನಾಡಗೀತೆ ಬಗ್ಗೆಯಾಗಲೀ ಅಗೌರವವಿಲ್ಲ. ಆದರೆ ನಮ್ಮ ನೆಲದಲ್ಲಿ ತಮಿಳು ನಾಡಗೀತೆ ಹಾಡಿಸುವ ಔಚಿತ್ಯವಾದರೂ ಏನಿತ್ತು? ತಮಿಳರ‌ನ್ನು ಓಲೈಸಲು ಬಿಜೆಪಿ ಇಷ್ಟು ಕೆಳಮಟ್ಟಕ್ಕೆ ಇಳಿಯಬೇಕಾಗಿರಲಿಲ್ಲ. ತಾಕತ್ತಿದ್ದರೆ ಇದೇ ಅಣ್ಣಾಮಲೈ ತಮಿಳು ನಾಡಿನಲ್ಲಿ ಕನ್ನಡಿಗರ ಸಮಾವೇಶ ನಡೆಸಿ ಕರ್ನಾಟಕದ ನಾಡಗೀತೆ ಹಾಡಿಸಲಿ ನೋಡೋಣ ಎಂದಿದೆ.

ಸಮಾವೇಶದಲ್ಲಿ ಆಗಿದ್ದೇನು?

ಶಿವಮೊಗ್ಗದ ಸಮಾವೇಶದಲ್ಲಿ ತಮಿಳರ ಓಲೈಕೆಗಾಗಿ ಮೊದಲು ತಮಿಳು ನಾಡಗೀತೆ ಹಾಕಲಾಗಿತ್ತು. ಸಮಾಧಾನದ ವಿಷಯವೆಂದರೆ ತಮಿಳು ನಾಡಗೀತೆ ಪ್ರಸಾರವಾಗುತ್ತಿದ್ದಂತೆ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಸಕಾಲಿಕವಾಗಿ ಮಧ್ಯಪ್ರವೇಶ ಮಾಡಿ ಹಾಡಿನ ಪ್ರಸಾರ ನಿಲ್ಲಿಸಿದ್ದಾರೆ. ಬಳಿಕ ಕರ್ನಾಟಕದ ನಾಡಗೀತೆ ಹಾಡಲು ಕರೆದರೆ ಯಾರೊಬ್ಬರು ಮುಂದೆ ಬರಲಿಲ್ಲ. ಬಿಜೆಪಿಯವರು ನಾಡಗೀತೆಗೆ ಎಷ್ಟು ಗೌರವ ಕೊಡುತ್ತಾರೆಂಬುದು ಇದರಿಂದ ಅರ್ಥವಾಗುತ್ತದೆ ಎಂದು ಕರವೇ ಮುಖ್ಯಸ್ಥರು ಆಕ್ರೋಶ ಹೊರ ಹಾಕಿದ್ದಾರೆ.

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಎಂಬುವವರು ಈ ಚುನಾವಣೆಯಲ್ಲಿ ಕನ್ನಡೇತರನ್ನು ಓಲೈಸಲು ಪಕ್ಷದ ಮುಖಂಡರಿಗೆ ಕರೆ ನೀಡಿರುವ ಸುದ್ದಿ ಮಾಧ್ಯಮಗಳಲ್ಲಿ ಬಿತ್ತರವಾಗಿತ್ತು. ಇದಕ್ಕೆ ಪೂರಕವಾಗಿಯೇ ಶಿವಮೊಗ್ಗದಲ್ಲಿ ತಮಿಳರ ಸಮಾವೇಶ ನಡೆಸಲಾಗಿದೆ ಎಂದು ಆಪಾದಿಸಲಾಗಿದೆ.

Karnataka Rakshana Vedike Has Condemned Of Tamil State Anthem Play In Shivamogga Conference

ಚುನಾವಣೆಯಲ್ಲಿ ಬುದ್ಧಿ ಕಲಿಸಲು ಕರೆವೇ ಕರೆ

ನಿವೃತ್ತ ಐಪಿಎಸ್ ಅಣ್ಣಾಮಲೈ ಅಪ್ಪಟ ಕನ್ನಡಿಗರು ವಾಸಿಸುವ ಬೆಂಗಳೂರಿನ‌ ಗೋವಿಂದರಾಜನಗರ ಕ್ಷೇತ್ರದಲ್ಲಿ ತಮಿಳಿನಲ್ಲಿ ಪ್ರಚಾರ ಭಾಷಣ ಮಾಡಿದ್ದಾರೆ. ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷನಿಗೆ ಕರ್ನಾಟಕದಲ್ಲಿ ಏನು ಕೆಲಸ? ಇಂಥ ಕೀಳುಮಟ್ಟದ ಓಲೈಕೆ ರಾಜಕಾರಣದಿಂದ ಬಿಜೆಪಿಗೆ ನಷ್ಟವೇ ಹೊರತು ಲಾಭವಿಲ್ಲ ಎಂಬುದನ್ನು ಮೊದಲು ಅರಿಯಬೇಕು.

ಚುನಾವಣೆ ಸಂದರ್ಭದಲ್ಲಿ ಹಲವು ರಾಜಕೀಯ ಪಕ್ಷಗಳು ಬೇರೆ ರಾಜ್ಯಗಳ ರಾಜಕಾರಣಿಗಳು, ಚಿತ್ರನಟರನ್ನು ಕರೆಯಿಸಿ ಬೇರೆ ಬೇರೆ ಭಾಷೆಗಳಲ್ಲಿ ಭಾಷಣ ಮಾಡಿಸಿ ಕನ್ನಡಿಗರನ್ನು ಅಪಮಾನಿಸುತ್ತಿದ್ದಾರೆ. ಇದು ನಾಡದ್ರೋಹದ ಕೆಲಸ. ಇಂಥವರಿಗೆ ಮತದಾನ‌ ಸಂದರ್ಭದಲ್ಲಿ ಕನ್ನಡಿಗರು ಸರಿಯಾದ ಉತ್ತರವನ್ನೇ ನೀಡಬೇಕು. ಬುದ್ಧಿ ಕಲಿಸಬೇಕು ಎಂದು ಕರವೇ ಕರೆ ನೀಡಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+